ಕ್ಷೇತ್ರದ ಅಭಿವೃದ್ಧಿಯಾದರೆ ಸಂತೋಷ ಪಡೆಬೇಕು
Team Udayavani, Feb 23, 2019, 7:28 AM IST
ಕೆ.ಆರ್.ಪೇಟೆ: ತಾಲೂಕಿನ ಒಬ್ಬ ಸಾಮಾನ್ಯ ವ್ಯಕ್ತಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆ ಮಾಡಿಸಿಕೊಂಡು ತಾಲೂಕನ್ನು ಅಭಿವೃದ್ಧಿ ಪಡಿಸಿದರೆ, ಆ ಕ್ಷೇತ್ರದ ಶಾಸಕ ಸಂತೋಷ ಪಡಬೇಕೆ ಹೊರತು ಅಸೂಯೆ ಪಡಬಾರದು ಎಂದು ದೇವೆಗೌಡರ ಮಾನಸ ಪುತ್ರ ಎಂದೆ ಕರೆಯಲ್ಪಡುವ ಜಿಪಂ ಸದಸ್ಯ ಬಿ.ಎಲ್.ದೇವರಾಜು ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಶ್ರಮವಹಿಸಿ ಅನುದಾನ ಬಿಡುಗಡೆ ಮಾಡಿಸಿರುವ ಕುರಿತು ದಾಖಲೆ ಬಿಡುಗಡೆ ಮಾಡಿ, ಶಾಸಕ ನಾರಾಯಣಗೌಡರು, ದೇವರಾಜು ಬೆಂಬಲಿಗರು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಲಿಲ್ಲ ಎಂದು ಹೇಳುತ್ತಿರುವುದಕ್ಕೆ ಹಾಗೂ ಅಕ್ಕಿಹೆಬ್ಟಾಳು ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದರ ವಿರುದ್ಧ ಶಾಸಕರ ಅಸಮಧಾನಕ್ಕೆ ಪ್ರತಿಕ್ರಿಯಿಸಿದರು.
ತ್ರಿವೇಣ ಸಂಗಮದಲ್ಲಿ ಕುಂಭಮೇಳ ನಡೆಸುವ ಸಲುವಾಗಿ ರಸ್ತೆ ಸೇರಿದಂತೆ ಇತರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ನಾನು ಸಚಿವ ಎಚ್.ಡಿ.ರೇವಣ್ಣ ಅವರಿಗೆ ಮನವಿ ಸಲ್ಲಿಸಿದ್ದೆ. ಅದರಂತೆ ಸಚಿವರು ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅವಶ್ಯವಿರುವೆಡೆ ಅಭಿವೃದ್ಧಿಗಾಗಿ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ನಾರಾಯಣಗೌಡರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟು ಅನುದಾನ ಬಿಡುಗಡೆ ಮಾಡಿಸಿಕೊಂಡು ತಾಲೂಕು ಅಭಿವೃದ್ಧಿಪಡಿಸಲಿ. ಅದನ್ನು ಬಿಟ್ಟು ತಾಲೂಕಿನ ಅಭಿವೃದ್ಧಿಗೆ ದುಡಿಯುತ್ತಿರುವವರ ವಿರುದ್ಧ ಮಾತನಾಡಬಾರದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಬಸ್ಕೃಷ್ಣೇಗೌಡ, ಜಿಪಂ ಸದಸ್ಯ ರಾಮದಾಸು, ವಕೀಲ ಸುರೇಶ್, ಕಂಠಿಕುಮಾರ್, ಹರೀಶ್ ಮತ್ತಿರರಿದ್ದರು.
ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ದಿಸಲು ಪಂಥಾಹ್ವಾನ: ಬಿ.ಎಲ್.ದೇವರಾಜ್ಗೆ ಹತ್ತು ವೋಟು ಪಡೆಯುವ ಸಾಮರ್ಥ್ಯ ಇಲ್ಲ ಎಂದಿರುವ ಶಾಸಕ ನಾರಾಯಣಗೌಡರು ಮೊದಲು ಅವರ ಸಾಮರ್ಥ್ಯ ಅರಿತುಕೊಳ್ಳಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರ ಹುಟ್ಟೂರಿನಲ್ಲೇ ಹಿನ್ನಡೆಯಾಗಿ, ನನ್ನ ಗ್ರಾಮದಲ್ಲಿ ಅತ್ಯಧಿಕ ಮತ ಪಡೆದುಕೊಂಡಿದ್ದರು. ಆ ಸತ್ಯ ಅರಿತು ಮಾತನಾಡಬೇಕು.
ಒಂದು ವೇಳೆ ನಾನು ಪಕ್ಷದ ವಿರುದ್ಧ ಕೆಲಸ ಮಾಡಿದ್ದರೆ ಪಕ್ಷದ ವರಿಷ್ಠರಿಗೆ ಸಾಕ್ಷ್ಯ ಸಹಿತ ವರದಿ ನೀಡಿ ನನ್ನ ಮೇಲೆ ಕ್ರಮ ಜರುಗಿಸಬೇಕು. ರಸ್ತೆಯಲ್ಲಿ ಮಾತನಾಡುವುದರಿಂದ ಪ್ರಯೋಜನವಿಲ್ಲ ದೇವರಾಜು ಹೇಳಿದರು. 40 ವರ್ಷದ ರಾಜಕೀಯ ಜೀವನದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಶಾಸಕ ನಾರಾಯಣಗೌಡರಿಗೆ ಅವರ ಮೇಲೆ ನಂಬಿಕೆ ಇದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ವರ್ಧಿಸಲಿ. ನಾನು ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಪಂಥಾಹ್ವಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ