ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ: ನಿಖೀಲ್‌ ಸ್ಪಷ್ಟನೆ


Team Udayavani, Mar 14, 2019, 8:37 AM IST

man-1.jpg

ಮದ್ದೂರು: ಮುಂದಿನ ಲೋಕಸಭಾ ಚುನಾವಣೆ ವೇಳೆ ರಾಜ್ಯದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ನಿಖೀಲ್‌ ಕುಮಾರಸ್ವಾಮಿ ಘೋಷಿಸಿದರು.

ತಾಲೂಕಿನ ಗೊಲ್ಲರದೊಡ್ಡಿ ಇತಿಹಾಸ ಪ್ರಸಿದ್ಧ ಜುಂಜಪ್ಪ ದೇವಾಲಯದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕಿ ಕಲ್ಪನಾಸಿದ್ದರಾಜು ಹಾಗೂ ಸ್ಥಳೀಯ ಜೆಡಿಎಸ್‌ ಮುಖಂಡರೊಂದಿಗೆ ಬುಧವಾರ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕ್ಷೇತ್ರ ಬದಲಾವಣೆ ಕೇವಲ ಊಹಾಪೋಹ. 

ಮದ್ದೂರು ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಪ್ರಚಾರ ಆರಂಭಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರಮುಖ ನಾಯಕರು, ಚುನಾಯಿತ ಸದಸ್ಯರು, ಪಕ್ಷದ ಮುಖಂಡರೊಂದಿಗೆ ಬಿರುಸಿನ ಪ್ರಚಾರ ಕೈಗೊಳ್ಳುವುದಾಗಿ ಹೇಳಿದರು. 

ಕಾರ್ಯಕರ್ತರೇ ಸೈನಿಕರು: ಯಾವ ಚಲನಚಿತ್ರ ನಟರನ್ನೂ ಚುನಾವಣಾ ಪ್ರಚಾರಕ್ಕೆ ಕರೆಯುವುದಿಲ್ಲ. ಚುನಾವಣೆಗಾಗಿ ನಟರ ದುರುಪಯೋಗ ಸರಿಯಾದ ಕ್ರಮವಲ್ಲ. ನನಗೆ ನನ್ನ ಪಕ್ಷದ ಕಾರ್ಯಕರ್ತರೇ ಸೈನಿಕರು. ದೇವೇಗೌಡರ ಕುಟುಂಬ ದೇವರ ಸನ್ನಿಧಿಯಿಂದಲೇ ಎಲ್ಲಾ ಶುಭ ಕಾರ್ಯಗಳನ್ನೂ ಆರಂಭಿಸುವುದು. ನಾನೂ ಇಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಕೈಗೊಂಡಿದ್ದೇನೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್‌ ಶಾಸಕರು ಪ್ರಚಂಡ ಗೆಲುವು ಸಾಧಿಸಿದ್ದಾರೆ. ಇದು ಜೆಡಿಎಸ್‌ ಭದ್ರಕೋಟೆ. ಕಾರ್ಯಕರ್ತರು, ಮುಖಂಡರು, ಜನಪ್ರತಿನಿಧಿಗಳ ಶ್ರಮದಿಂದ ಗೆದ್ದು ಬರುವ ವಿಶ್ವಾಸವಿದೆ ಎಂದರು. 

ಉತ್ತಮ ಸ್ನೇಹಿತರು: ನಟ ಅಭಿಷೇಕ್‌ಅಂಬರೀಶ್‌ ಹಾಗೂ ತಾವು ಒಳ್ಳೆಯ ಸ್ನೇಹಿತರು. ರಾಜಕೀಯ ಕಾರಣಗಳಿಗಾಗಿ ಸ್ನೇಹಬಂಧ ಹಾಳು ಮಾಡಿಕೊಳ್ಳುವ ಅಗತ್ಯವಿಲ್ಲ. ಚುನಾವಣೆ ಬೇರೆ, ಸ್ನೇಹ ಬೇರೆ, ನಮ್ಮಿಬ್ಬರ ಸ್ನೇಹ ಸಂಬಂಧ ಎಂದಿನಂತೆ ಮುಂದುವರಿಯಲಿದೆ. ಪ್ರಸಕ್ತ ಎದುರಾಗಿರುವ ಚುನಾವಣೆಯಲ್ಲಿ ಅಭಿಷೇಕ್‌ ಮತ್ತು ತಾವು ಬ್ಯುಸಿಯಿದ್ದೇವೆ. ಚುನಾವಣೆ ಬಳಿಕವೂ ನಾವಿಬ್ಬರೂ ಎಂದಿನಂತೆ ಮಾತನಾಡುತ್ತೇವೆಂದು ತಿಳಿಸಿದರು.

ಇಂದು ಅಭ್ಯರ್ಥಿ ಘೋಷಣೆ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಗುರುವಾರ ಮಂಡ್ಯ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖೀಲ್‌ಕುಮಾರಸ್ವಾಮಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡರೇ ಅಧಿಕೃತವಾಗಿ ಘೋಷಿಸಲಿ ದ್ದಾರೆ. ತಾಲೂಕಿನ ನಿಡಘಟ್ಟ ಗಡಿಭಾಗದಿಂದ ಮಂಡ್ಯದ ಕಾರ್ಯಕ್ರಮಕ್ಕೆ ಐದು ಸಾವಿರ ಬೈಕ್‌ ರ್ಯಾಲಿ ಮೂಲಕ ನಟ ನಿಖೀಲ್‌ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗುವುದು ತಿಳಿಸಿದರು.

ಮಾಜಿ ಶಾಸಕಿ ಕಲ್ಪನಾಸಿದ್ದರಾಜು, ಸಂತೋಷ್‌, ಕೆಸ್ತೂರು ಜಿಪಂ ಸದಸ್ಯೆ ಸುಚಿತ್ರಾ, ರಮೇಶ್‌, ದಾಸೇಗೌಡ, ಬಿಳಿಯಪ್ಪ ಮತ್ತಿತರರಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.