ನೆಹರೂ ಮೈದಾನದ ಧ್ವಜ ಸ್ತಂಭ ಕಟ್ಟೆಗೆ ಕಾಯಕಲ್ಪ!


Team Udayavani, Aug 3, 2017, 10:32 PM IST

India-Flag-650.jpg

ಮಹಾನಗರ: ಹಲವು ದಶಕಗಳಿಂದ ನೆಹರೂ ಮೈದಾನದಲ್ಲಿದ್ದ ಧ್ವಜ ಸ್ತಂಭ ಕಟ್ಟೆಗೆ 70ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕಾಯಕಲ್ಪ ನೀಡಲು ಮಹಾನಗರ ಪಾಲಿಕೆ ಮುಂದಾಗಿದೆ. ಸರಕಾರದ ವತಿಯಿಂದ ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಈ ಧ್ವಜ ಸ್ತಂಭದಲ್ಲೇ ನಡೆಯುತ್ತಿತ್ತು. ಆದರೆ ಧ್ವಜ ಸ್ತಂಭದ ಕಟ್ಟೆಗಳಲ್ಲಿ ಬಿರುಕು ಉಂಟಾಗಿತ್ತು. ಸರಿ ಸುಮಾರು 40 ವರ್ಷಗಳ ಹಳೆಯ ಶಿಥಿಲಾವಸ್ಥೆಯಲ್ಲಿದ್ದ ಕಟ್ಟೆಗೆ ಹಲವು ಬಾರಿ ಬಣ್ಣ ಬಳಿಯಲಾಗಿತ್ತು. ಜತೆಗೆ, ಒಡೆದ ಭಾಗಗಳಿಗೆ ಸಿಮೆಂಟ್‌ ಹಾಕಿ ದುರಸ್ತಿ ಮಾಡಲಾಗಿತ್ತು. ಈಗ ಮಹಾನಗರ ಪಾಲಿಕೆಯು ಧ್ವಜ ಸ್ತಂಭದ ಕಟ್ಟೆಯನ್ನು ಒಡೆದು ನೂತನ ಕಟ್ಟೆ ನಿರ್ಮಿಸುತ್ತಿದೆ. ಧ್ವಜ ಸ್ತಂಭದ ಸುತ್ತ ಲಿನ 18 ಅಡಿ ಸುತ್ತಳತೆಯಲ್ಲಿ ಕೆಂಪು ಕಲ್ಲಿನಲ್ಲಿದ್ದ ಕಟ್ಟೆಯನ್ನು ಒಡೆದು ಕಪ್ಪು ಕಲ್ಲಿನಲ್ಲಿ ಒಂದು ಅಡಿ ಹೆಚ್ಚುವರಿಯಾಗಿ ಕಟ್ಟಲಾಗುತ್ತಿದೆ. ಬುಧವಾರದಿಂದ ಕಾಮಗಾರಿ ಪ್ರಾರಂಭವಾಗಿದ್ದು, ವಾರದೊಳಗೆ ಪೂರ್ಣಗೊಳ್ಳಲಿದೆ.

ಆಕರ್ಷಕ ಧ್ವಜ ಸ್ತಂಭದ ಕಟ್ಟೆ
ಪ್ರಸ್ತುತ ಧ್ವಜ ಸ್ತಂಭದ ಸುತ್ತಲಿದ್ದ ಕೆಂಪು ಕಲ್ಲಿನ ಕಟ್ಟೆ ಮತ್ತಷ್ಟು ಆಕರ್ಷಕವಾಗಿ ಕಾಣಿಸಿಕೊಳ್ಳಲಿದೆ. ಕಟ್ಟೆಯ ನಾಲ್ಕು ಬದಿಯಲ್ಲೂ ಸುಂದರ ವಿನ್ಯಾಸವಿರಲಿದೆ. ಕಟ್ಟೆಯ ನಾಲ್ಕು ಬದಿಗೂ ಸಣ್ಣದಾಗಿ ರೇಲಿಂಗ್‌ ಅಳವಡಿಸುತ್ತಿದ್ದು, ಇದು ಕಟ್ಟೆಯ ಅಂದವನ್ನು ಇನ್ನೂ ಹೆಚ್ಚಿಸಲಿದೆ. ಸುಂದರ ಶಿಲ್ಪಗಳಿಗೆ ಹೆಸರುವಾಸಿಯಾದ ಕಾರ್ಕಳದಿಂದ ಧ್ವಜಸ್ತಂಭದ ಸುತ್ತಲಿನ ಕಟ್ಟೆಗಾಗಿ ಕಲ್ಲುಗಳು ಬಂದಿವೆ.

ಆರು ತಿಂಗಳೊಳಗೆ ಧ್ವಜ ಸ್ತಂಭ ಬದಲಾವಣೆ
ಸ್ವಾತಂತ್ರೋತ್ಸವದ ಬಳಿಕ ಸ್ತಂಭದ ಲಾಂಛನವನ್ನು ಕಲ್ಲುಗಳಿಂದ ರೂಪಿಸಲಾಗುತ್ತದೆ. ಈ ಕಾಮಗಾರಿಗೆ ಮೂರು ತಿಂಗಳು ತಗಲುವುದರಿಂದ ಸ್ವಾತಂತ್ರ್ಯೋತ್ಸವಕ್ಕೆ ಧಕ್ಕೆಯಾಗದಂತೆ ಕೇವಲ ಧ್ವಜ ಸ್ತಂಭದ ಕಟ್ಟೆಯನ್ನು ಬದಲಾಯಿಸಲಾಗುತ್ತಿದೆ.

ಬದಲಾಗಲಿದೆ ಪ್ರವೇಶ ದ್ವಾರ
ಈ ಎರಡೂ ಕಾಮಗಾರಿಗಳ ಬಳಿಕ ನೆಹರೂ ಮೈದಾನದ ಪ್ರವೇಶದ್ವಾರದ ಕಾಮಗಾರಿ ಆರಂಭವಾಗಲಿದೆ. ಈ ಹಿಂದೆ ಇದ್ದ ಎಲ್ಲಾ ಪ್ರವೇಶ ದ್ವಾರಗಳಿಂಗಿಂತಲೂ ಇದು ಸುಂದರವಾಗಿರಲಿದೆ. ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ, ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ಹೆಚ್ಚಿನ ಕಾಲಾವಕಾಶಬೇಕು ಎಂದು ಮೇಯರ್‌ ಉದಯವಾಣಿಗೆ ತಿಳಿಸಿದ್ದಾರೆ. ಬುಧವಾರ ಸಂಜೆ ಆರಂಭವಾದ ಕಾಮಗಾರಿಯನ್ನು ಮೇಯರ್‌ ಕವಿತಾ ಸನಿಲ್‌, ಮಹಾನಗರ ಪಾಲಿಕೆ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ,ಕಾರ್ಪೋರೇಟರ್‌ ರವೂಫ್‌ ಭೇಟಿ ನೀಡಿ ಪರೀಶೀಲಿಸಿದರು.

ಧ್ವಜ ಸ್ತಂಭ ನವೀಕರಣ
‘ಪ್ರಸ್ತುತ ಇರುವ ಧ್ವಜಸ್ತಂಭ ಹಲವು ದಶಕಗಳ ಹಿಂದಿನದು. ಇದನ್ನು ಸುಂದರವಾಗಿ ನಿರ್ಮಿಸಬೇಕು ಎಂಬುದು ನನ್ನ ಬಹಳ ಸಮಯದ ಕನಸಾಗಿತ್ತು. ಆದರೆ ಅದಕ್ಕೆ ಕಾಲಾವಕಾಶ ದೊರೆತಿರಲಿಲ್ಲ. ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಧ್ವಜಸ್ತಂಭದ ಕಟ್ಟೆಯನ್ನು ಮಾತ್ರ ಬದಲಾಯಿಸಲಾಗುತ್ತದೆ. ಬಳಿಕ ಧ್ವಜ ಸ್ತಂಭವನ್ನು ಸುಂದರೀಕರಿಸಲಾಗುತ್ತದೆ.
– ಕವಿತಾ ಸನಿಲ್‌, ಮೇಯರ್‌

ಹಲವು ಯೋಜನೆಗಳು
‘ಸ್ಮಾರ್ಟ್‌ ಸಿಟಿಯಾಗಲಿರುವ ಮಂಗಳೂರು ನಗರ‌ವನ್ನು ಸುಂದರವಾಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಮಾಡಲು ಪಾಲಿಕೆ ಮುಂದಾಗಿದೆ. ನಗರದ  ಕೆಲವು ಸರ್ಕಲ್‌, ಪಾರ್ಕ್‌ಗಳ ಕಾಮಗಾರಿ ಈಗಾಗಲೇ ಆಗಿದೆ. ನೆಹರೂ ಮೈದಾನದ ಪ್ರವೇಶ ದ್ವಾರದ ಕಾಮಗಾರಿಯೂ ಶೀಘ್ರವೇ ಆರಂಭವಾಗಲಿದೆ.
– ಶಶಿಧರ್‌ ಹೆಗ್ಡೆ, ಮುಖ್ಯ ಸಚೇತಕರು, ಮಹಾನಗರ ಪಾಲಿಕೆ

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.