ನೀತಿ ನಿರೂಪಣೆಯಲ್ಲಿ ಆರೆಸ್ಸೆಸ್‌ ಪಾತ್ರ ಅಪಾಯಕಾರಿ 


Team Udayavani, Feb 26, 2017, 10:26 AM IST

pinarayi.jpg

ಮಂಗಳೂರು : ಭಾರತ ಅನುಸರಿಸಿಕೊಂಡು ಬಂದಿರುವ ಜಾತ್ಯತೀತ ತಣ್ತೀವನ್ನು ಆರೆಸ್ಸೆಸ್‌ ಒಪ್ಪುವುದಿಲ್ಲ. ಜನರನ್ನು ಧರ್ಮದ ಆಧಾರದಲ್ಲಿ ಒಡೆದು ಆಳ ಬೇಕೆಂಬುದು ಅದರ ನೀತಿ. ಇಂತಹ ತಣ್ತೀ ಸಿದ್ಧಾಂತವನ್ನು ಹೊಂದಿರುವ ಆರೆಸ್ಸೆಸ್‌ ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದು ದೇಶದ ಹಿತದೃಷ್ಟಿಯಿಂದ ಅಪಾಯಕಾರಿ ಎಂದು ಕೇರಳದ ಮುಖ್ಯಮಂತ್ರಿ, ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯ ಪಿಣರಾಯಿ ವಿಜಯನ್‌ ಹೇಳಿದರು.

ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಸಿಪಿಐಎಂ ಘಟಕವು ಇಲ್ಲಿನ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ “ಕೋಮುವಾದದ ವಿರುದ್ಧ ಶಾಂತಿ ಸಾಮರಸ್ಯಕ್ಕಾಗಿ ಕರಾವಳಿ ಸೌಹಾರ್ದ ರ್ಯಾಲಿ’ಯಲ್ಲಿ ಮಾತನಾಡಿದರು.
ಜಾತ್ಯತೀತತೆ ಎಂಬ ಪದವನ್ನು ಸಂವಿಧಾನದಲ್ಲಿ ಸೇರ್ಪಡೆಗೊಳಿಸಿ ರುವುದು ಎಲ್ಲವುದಕ್ಕೂ ಕಾರಣ ಎಂಬುದಾಗಿ ಕೇಂದ್ರದ ಗೃಹ ಸಚಿವರು ಹೇಳಿಕೆ ನೀಡಿರುವುದು ಅಪಾಯಕಾರಿ. ಭಾರತದಲ್ಲಿ ವಿವಿಧ ಜಾತಿ, ಧರ್ಮದವರಿದ್ದು, ಜಾತ್ಯತೀತ ವ್ಯವಸ್ಥೆಗೆ ಹೆಸರಾಗಿದೆ. ಎಲ್ಲ ಜಾತಿ ಜನಾಂಗದವರಿಗೆ ಸೇರಿದ ದೇಶವಾಗಿದೆ; ಆರೆಸ್ಸೆಸ್‌ನ ಸೊತ್ತು ಅಲ್ಲ.

ಧರ್ಮ ನಿರಪೇಕ್ಷತೆಯನ್ನು ಒಪ್ಪದೆ ಅಸಹಿಸ್ಣುತೆಯನ್ನು ಪ್ರಕಟಿಸುತ್ತಿರುವ ಈ ಸಂಘಟನೆಯ ವಿರುದ್ಧ ಸಂಘಟಿತರಾಗಿ ಧ್ವನಿ ಎತ್ತಬೇಕು ಹಾಗೂ ಕೋಮು ಸಾಮರಸ್ಯ ಕಾಪಾಡಲು ಪಣ ತೊಡಬೇಕು ಎಂದವರು ಕರೆ ನೀಡಿದರು.

1925ರಲ್ಲಿ ಜನ್ಮ ತಾಳಿದ ಆರೆಸ್ಸೆಸ್‌
1947ರಲ್ಲಿ ದೇಶಕ್ಕೆ ಸ್ವಾತಂತ್ರÂ ದೊರಕುವ ತನಕದ 22 ವರ್ಷಗಳಲ್ಲಿ ಯಾವುದೇ ಸ್ವಾತಂತ್ರÂ ಸಂಗ್ರಾಮದಲ್ಲಿ ಭಾಗವಹಿಸಿಲ್ಲ. ಗೋಡ್ಸೆಯನ್ನು ಅಸ್ತ್ರವಾಗಿ ಬಳಸಿ ಮಹಾತ್ಮಾ ಗಾಂಧಿ ಅವರ ಕೊಲೆ ಮಾಡಿಸಿತ್ತು. ಗಾಂಧಿ ಕೊಲೆಯಾದ ದಿನ ಸಿಹಿ ಹಂಚಿ ಸಂಭ್ರಮಿಸಿತ್ತು. ಇಟೆಲಿಯ ಮುಸೋಲಿನಿ ಅವರ ಫ್ಯಾಸಿಸ್ಟ್‌ ನೀತಿ ಮತ್ತು ಜರ್ಮನಿಯ ಹಿಟ್ಲರ್‌ ತಣ್ತೀ ಸಿದ್ಧಾಂತಗಳಿಂದ ಪ್ರೇರಿತವಾಗಿರುವ ಆರೆಸ್ಸೆಸ್‌ ಭಾರತದಲ್ಲಿ ನಡೆದ ಕೋಮು ಗಲಭೆಗಳಿಗೆ ಬೆಂಬಲ ನೀಡಿದೆ ಎಂದು ಪಿಣರಾಯಿ ವಿಜಯನ್‌ ಅವರು ಟೀಕಿಸಿದರು. 

ಕರ್ನಾಟಕದ ಸಾಹಿತಿ ಎಂ.ಎಂ. ಕಲಬುರಗಿ, ಮಹಾರಾಷ್ಟ್ರದ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್‌ ಕೊಲೆ ಕೃತ್ಯಗಳ ಹಿಂದೆ ಆರೆಸ್ಸೆಸ್‌ ಕೈವಾಡವಿದೆ. ಲೇಖಕರಾದ ಕೆ.ಎಸ್‌. ಭಗವಾನ್‌, ಗಿರೀಶ್‌ ಕಾರ್ನಾಡ್‌, ಉಚ್ಚಂಗಿ ಪ್ರಸಾದ್‌, ತೀರ್ಥ ಹಳ್ಳಿಯ ಚೇತನಾ, ತಮಿಳುನಾಡಿನ ಪೆರುಮಾಳ್‌ ಮುರುಗನ್‌ ಅವರನ್ನು ಆರೆಸ್ಸೆಸ್‌ ತಣ್ತೀಗಳನ್ನು ಆಲಿಸಲು ಸಿದ್ಧವಿರದ ಕಾರಣ ಕಿರುಕುಳ, ಹಲ್ಲೆ ನಡೆಸಲಾಗಿತ್ತು.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಆರೆಸ್ಸೆಸ್‌ ವಿರೋಧಿಸುತ್ತಿದ್ದು, ಡಾ| ಯು.ಆರ್‌ ಅನಂತ ಮೂರ್ತಿ, ಶಾರೂಖ್‌ ಖಾನ್‌, ಅಮೀರ್‌ ಖಾನ್‌, ಕೇರಳದ ಪ್ರಸಿದ್ಧ ಸಾಹಿತಿ ಎಂ.ಟಿ. ವಾಸುದೇವನ್‌ ನಾಯರ್‌, ಚಲನಚಿತ್ರ ಕಲಾವಿದೆ ನಂದಿತಾ ದಾಸ್‌ ಅವರನ್ನು ಪಾಕಿಸ್ಥಾನಕ್ಕೆ ಹೋಗುವಂತೆ ಟಿಕೆಟ್‌ ನೀಡಿ ಕಳುಹಿಸಿತ್ತು ಎಂದರು.

ಕರ್ನಾಟಕದ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಘ ಪರಿವಾರದವರು ಸಂಘ ಪರಿವಾರದವ ರನ್ನೇ ಕೊಲೆ ಮಾಡುತ್ತಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಪ್ರತಾಪ್‌ ಪೂಜಾರಿ, ಬಿಜೆಪಿಯ ವಿನಾಯಕ ಬಾಳಿಗಾ, ಉಡುಪಿಯಲ್ಲಿ ಪ್ರವೀಣ್‌ ಪೂಜಾರಿ ಕೊಲೆ ಪ್ರಕರಣಗಳು ಇದಕ್ಕೆ ನಿದರ್ಶನ ಎಂದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಮಾತನಾಡಿ, ಮಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ ಪಕ್ಷದ ದ.ಕ. ಜಿಲ್ಲಾ ಘಟಕ ಹಾಗೂ ಅವಕಾಶ ಕಲ್ಪಿಸಿದ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 

ಪಿಣರಾಯಿ ವಿಜಯನ್‌ ಅವರು ಮಲಯಾಳ ಭಾಷೆಯಲ್ಲಿ ಭಾಷಣ ಮಾಡಿದರು. ಸಿಪಿಎಐಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿ.ಜೆ. ಕೆ. ನಾಯರ್‌ ಭಾಷಣವನ್ನು ಕನ್ನಡಕ್ಕೆ ಅನುವಾದಿಸಿದರು.

ಕಾಸರಗೋಡಿನ ಸಂಸದ ಕರುಣಾಕರನ್‌, ಇನ್ನೋರ್ವ ಸಂಸದ ರಾಜ ಗೋಪಾಲ್‌, ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್‌, ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಸತೀಶ್ಚಂದ್ರನ್‌, ಮಾಜಿ ಶಾಸಕ ಸಿ.ಎಚ್‌. ಕುಂಞಂಬು, ಮುಖಂಡರಾದ ಕೆ. ಶಂಕರ್‌, ಜಿ.ಎನ್‌. ನಾಗರಾಜ್‌, ಎಸ್‌. ವರ ಲಕ್ಷ್ಮೀ, ಯು. ಬಸವರಾಜ್‌, ಮುನಿ ವೆಂಕಟಪ್ಪ, ಕೆ.ಎನ್‌. ಉಮೇಶ್‌, ಕೆ. ಯಾದವ ಶೆಟ್ಟಿ, ಬಾಲಕೃಷ್ಣ ಶೆಟ್ಟಿ (ಉಡುಪಿ), ಯಮುನಾ ಗಾಂವ್ಕರ್‌ (ಉತ್ತರ ಕನ್ನಡ), ಮುನೀರ್‌ ಕಾಟಿಪಳ್ಳ ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ  ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್‌ ಕುಮಾರ್‌ ಬಜಾಲ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ ಅವರು ಪ್ರಸ್ತಾವನೆಗೈದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.