ಖಾಲಿಯಾ ರಫೀಕ್‌ ಕೊಲೆ: ಮೂವರ ಬಂಧನ


Team Udayavani, Mar 1, 2017, 12:07 PM IST

khaliya.jpg

ಮಂಗಳೂರು: ರೌಡಿಶೀಟರ್‌, ಉಪ್ಪಳ ನಿವಾಸಿ  ಖಾಲಿಯಾ ರಫೀಕ್‌  ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ಉಪ್ಪಳ ಕೊಂಡೆಕೂರು ನಿವಾಸಿ  ಟಿಪ್ಪರ್‌ ಚಾಲಕ ವೃತ್ತಿಯ  ನೂರ್‌ ಆಲಿ (36), ಹೊಸ ದುರ್ಗ ತಾಲೂಕು ಪನಂತ್ತೂರ್‌ ರಾಜಪುರಂ ನಿವಾಸಿ ಚಾಲಕ ವೃತ್ತಿಯ ರಶೀದ್‌ ಟಿ.ಎಸ್‌. (30) ಹಾಗೂ  ಬಂಟ್ವಾಳ ತಾಲೂಕು  ಸಂಗಬೆಟ್ಟು ನಿವಾಸಿ  ಕೂಲಿ ಕೆಲಸದ ಹುಸೈನಬ್ಬ ಅಲಿಯಾಸ್‌ ಹುಸೈನ್‌ ಅಲಿಯಾಸ್‌ ಸುಹೈಲ್‌ ಬಂಧಿತರು. ಇನ್ನೂ  ಐವರು  ಆರೋಪಿಗಳ ಬಂಧನವಾಗಬೇಕಾಗಿದೆ. 

ಕೇರಳ ಮತ್ತು ಕರ್ನಾಟಕದಲ್ಲಿ ಕೊಲೆಯತ್ನ, ಕೊಲೆ ಹಾಗೂ ದರೋಡೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕುಖ್ಯಾತ ಗೂಂಡಾ ಖಾಲಿಯಾ ರಫೀಕ್‌ನನ್ನು (38)  ಫೆ. 14 ರಂದು  ತಡರಾತ್ರಿ ದುಷ್ಕರ್ಮಿಗಳ  ತಂಡ  ನಗರದ  ಕೋಟೆಕಾರು ಪೆಟ್ರೋಲ್‌ ಬಂಕ್‌ ಬಳಿ ಗುಂಡಿಕ್ಕಿ, ತಲವಾರಿನಿಂದ ಕಡಿದು  ಹತ್ಯೆ  ಮಾಡಿತ್ತು. 
ಆರೋಪಿಗಳ ಬಂಧನದ ಬಗ್ಗೆ ಮಂಗಳೂರಿನ ತಮ್ಮ ಕಚೇರಿಯಲ್ಲಿ ಪೊಲೀಸ್‌ ಆಯುಕ್ತ  ಎಸ್‌. ಚಂದ್ರಶೇಖರ್‌ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ   ಮಾಹಿತಿ ನೀಡಿದರು.  

ತಲೆ ಮರೆಸಿಕೊಂಡಿರುವ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಜನಾಡಿ  ನೆತ್ತಿಲಪದವು ರಸ್ತೆಯ ಕಲ್ಲರಕೋಡಿ ಬಳಿ ಕಾರಿನಲ್ಲಿದ್ದ   ಮೂವರು ಆರೋಪಿಗಳನ್ನು ಬಂಧಿಸಿದರು.  

ಬಂಧಿತರಿಂದ  ಕೃತ್ಯಕ್ಕೆ  ಉಪಯೋಗಿಸಿದ  ನಾಡ ಪಿಸ್ತೂಲ್‌,  ತಲವಾರು ಹಾಗೂ ಮಾರುತಿ ಎರ್ಟಿಗಾ  ಕಾರನ್ನು ವಶಕ್ಕೆ  ಪಡೆದುಕೊಂಡಿದ್ದಾರೆ.

ತಲೆಮರೆಸಿಕೊಂಡಿರುವ  ಉಳಿದ ಆರೋಪಿಗಳ ಶೋಧ ಮುಂದುವರಿದಿದೆ ಎಂದು ಆಯುಧಿಕ್ತರು ವಿವರಿಸಿದರು. 
ಖಾಲಿಯಾ ಮತ್ತು ಇನ್ನೋರ್ವ ಜಿಯಾ  ನಡುವೆ ಸಂಘರ್ಷವಿತ್ತು.  ಖಾಲಿಯಾ 2013 ರಲ್ಲಿ  ಮುತ್ತಲಿಬ್‌ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ. ಬಳಿಕ ಆತನನ್ನು ಬಂಧನವಾಗಿತ್ತು.   ಮುತ್ತಲಿಬ್‌ ತಮ್ಮ  ನೂರ್‌ ಆಲಿ  ಜಿಯಾ ಜತೆ ಸೇರಿ ಖಾಲಿಯಾ ಕೊಲೆ ಸಂಚು ರೂಪಿಸಿದ್ದು  ಖಾಲಿಯಾ ಚಲನವಲನಗಳ ಬಗ್ಗೆ ತಂಡ ಗಮನಿಸುತ್ತಿತ್ತು.   ಮೂರು ತಿಂಗಳಿನಿಂದ ಐದು  ಬಾರಿ ಸತತ  ಆತನ ಕೊಲೆಗೆ  ಪ್ರಯತ್ನಗಳು ನಡೆದಿತ್ತು.

ಫೆ. 14ರಂದು ರಾತ್ರಿ ಖಾಲಿಯಾ ಕಾಸರಗೋಡಿನಿಂದ ಮಂಗಳೂರಿಗೆ ಬರುವ ಬಗ್ಗೆ ಮಾಹಿತಿ ಪಡೆದ ತಂಡ ಆತನನ್ನು ಹಿಂಬಾಲಿಸಿಕೊಂಡು ಬಂದಿತ್ತು. ಕೋಟೆಕಾರು ಬಳಿ ರಾಂಗ್‌ಸೈಡ್‌ನ‌ಲ್ಲಿ ನಿಲ್ಲಿಸಿದ್ದ ಟಿಪ್ಪರ್‌ನಿಂದ  ಆತನ ಕಾರಿಗೆ ಢಿಕ್ಕಿ ಹೊಡೆಸಿ ಬಳಿಕ ಎರಡು ಗುಂಡು ಹಾರಿಸಿ ತಲವಾರಿನಿಂದ ಕಡಿದು ಕೊಲೆ ಮಾಡಲಾಗಿತ್ತು  ಎಂದವರು ತಿಳಿಸಿದರು. 
ಖಾಲಿಯಾ ಕಲಿ ಯೋಗೀಶ  ಪರವಾಗಿ ಕೆಲಸ ಮಾಡಿದ್ದು  ಜುವೆಲರಿ  ಮಳಿಗೆ  ಶೂಟೌಟ್‌ನಲ್ಲಿ  ಭಾಗಿಯಾಗಿದ್ದ ಎಂದರು.

ಎಸಿಸಿ ಶ್ರುತಿ ಅವರ ನೇತೃತ್ವದಲ್ಲಿ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್‌  ಸುನೀಲ್‌ ವೈ. ನಾಯ್ಕ ಅವರ ತಂಡ ಹಾಗೂ ಉಳ್ಳಾಲ ಪಿಐ ಗೋಪಿಕೃಷ್ಣ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. 

ಕಾಸರಗೋಡು ಪೊಲೀಸರು ಹಾಗೂ ಮಂಗಳೂರು ಪೊಲೀಸರು  ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದೆ.

ಇತ್ತೀಚೆಗೆ ದರೋಡೆಗೆ ತಂತ್ರ ರೂಪಿಸುತ್ತಿದ್ದ ಆರು ಮಂದಿಯನ್ನು ಬಂಧಿಸಲಾಗಿತ್ತು ಎಂದರು. ಡಿಸಿಪಿಗಳಾದ ಶಾಂತರಾಜು ಹಾಗೂ ಡಾ| ಸಂಜೀವ ಪಾಟೀಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.