ಖಾಲಿಯಾಗುತ್ತಿದೆ ತುಂಬೆ: 15 ದಿನಗಳಿಗಷ್ಟೇ ನೀರು
Team Udayavani, Mar 19, 2017, 11:41 AM IST
ಮಂಗಳೂರು: ಮಂಗಳೂರಿಗೆ ನೀರು ಪೂರೈಕೆಯಾಗುವ ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಇದರಿಂದ ಮಹಾ ನಗರಕ್ಕೆ ನೀರು ಕೊರತೆಯಾಗುವ ಆತಂಕ ಎದುರಾಗಿದೆ. ಶನಿವಾರ ನೀರಿನ ಮಟ್ಟ 4 ಅಡಿಗೆ ಇಳಿದಿದ್ದು, ಪ್ರಸ್ತುತ ತುಂಬೆಯಲ್ಲಿರುವ ನೀರು ಸುಮಾರು 10ರಿಂದ 15 ದಿನಗಳ ವರೆಗೆ ಸಾಕಾಗ ಬಹುದು ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗೆ ಮನವಿ
ತುಂಬೆಯಲ್ಲಿ ನೀರಿನ ಕೊರತೆ ಇರುವುದರಿಂದ ಹೆಚ್ಚಿನ ನೀರಿನ ಪೂರೈಕೆಗೆ ಎಎಂಆರ್ ಡ್ಯಾಂನಿಂದ ನೀರು ಬಿಡುವಂತೆ ಸೂಚನೆ ನೀಡಲು ಪಾಲಿಕೆ ಅಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಪ್ರಕ್ರಿಯೆ ನಡೆದಿದೆ.
ಜನರಿಗೆ ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಎಎಂಆರ್ ಡ್ಯಾಂನಿಂದ ನೀರು ಪೂರೈಕೆ ಮಾಡಲು ಆದೇಶ ನೀಡುವಂತೆ ಪಾಲಿಕೆ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ.
ಎಎಂಆರ್ ಮತ್ತು ನೆಕ್ಕಿಲಾಡಿ ಕಿಂಡಿ ಅಣೆಕಟ್ಟಿನ ನೀರು ಲಭ್ಯ ವಾದರೂ ಮೇ ಅಂತ್ಯದವರೆಗೆ ಸಮರ್ಪಕವಾಗಿ ನೀರು ಪೂರೈಸುವುದು ಕಷ್ಟ. ಈಗಾಗಲೇ ನಗರಕ್ಕೆ ರೇಶ ನಿಂಗ್ ಮೂಲಕ ನೀರು ಬಿಡುಗಡೆ ಮಾಡಲಾಗುತ್ತಿದೆ. ಮಳೆ ಬಾರದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ