ಗ್ರಾ.ಪಂ. ಮೂಲಕ ಮೊಬೈಲ್‌ ಸೇವಾದಾರರ ಮಾಹಿತಿ


Team Udayavani, May 25, 2017, 2:50 PM IST

1005mlr22-mobile(((sangraha.jpg

ಮಂಗಳೂರು: ದೇಶದ ಪ್ರತಿ ಗ್ರಾಮ ವ್ಯಾಪ್ತಿಯಲ್ಲೂ ಮೊಬೈಲ್‌ ಸಂಪರ್ಕ ಕಲ್ಪಿಸುವ ಜತೆಗೆ ಮಾಹಿತಿ ತಂತ್ರ ಜ್ಞಾನದ ಸೌಲಭ್ಯವನ್ನು ಗ್ರಾಮಾಂತರ ಭಾಗಕ್ಕೆ ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರತೀ ಗ್ರಾ.ಪಂ.ಗಳಿಗೆ ಪತ್ರ ಬರೆದು ಆಯಾ ಗ್ರಾಮದ ಮೊಬೈಲ್‌ ಸೇವಾದಾರರ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದೆ.
 
ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಮೊಬೈಲ್‌ ಸೇವಾದಾರರ ಮಾಹಿತಿ ನೀಡುವಂತೆ ಕೇಂದ್ರ ದೂರ ಸಂಪರ್ಕ ಇಲಾಖೆ ರಾಜ್ಯ ಸರಕಾರಕ್ಕೆ ಕಳೆದ ವರ್ಷವೇ ಪತ್ರ ಬರೆದು ಕೋರಿತ್ತು. ಅದರಂತೆ ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂ.ರಾಜ್‌ ಇಲಾಖೆ ಯಿಂದ ಎಲ್ಲ ಜಿ.ಪಂ.ನ ಯೋಜನಾ ವ್ಯವಸ್ಥಾಪಕರಿಗೆ/ತಾ.ಪಂ.ನ ಕಾರ್ಯನಿರ್ವಹಣಾಧಿಕಾರಿಗಳಿಗೆ/ ಗ್ರಾ.ಪಂ.ನ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಪತ್ರ ರವಾನೆಯಾಗಿದೆ.

ಪ್ರತೀ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ವ್ಯಾಪ್ತಿಯಲ್ಲಿರುವ ಬಿಎಸ್‌ಎನ್‌ಎಲ್‌, ಏರ್‌ಟೆಲ್‌ ಸೇರಿದಂತೆ ಮೊಬೈಲ್‌ ಸೇವಾದಾರರ ಮೂಲಕ ಅಥವಾ ಮೊಬೈಲ್‌ ಹೊಂದಿರುವವರಿಂದಲೇ ಮಾಹಿತಿ ಸಂಗ್ರಹಿಸಬೇಕಾಗಿದೆ. ಪ್ರತಿ ಗ್ರಾಮದಿಂದ ಸಂಗ್ರಹಿಸುವ ಮೊಬೈಲ್‌ ಸಂಖ್ಯೆಗಳನ್ನು ಪ್ರತಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾಪಾಡ ಬೇಕಾಗಿದೆ. ಇದಕ್ಕಾಗಿ ಪ್ರತ್ಯೇಕ ವೆಬ್‌ಪೋರ್ಟಲ್‌ ಕೂಡ ರಚಿಸಲಾಗಿದೆ. ಜಿಲ್ಲಾ ಮಾಹಿತಿ ಅಧಿಕಾರಿ (ಡಿಐಒ)ಯಲ್ಲಿ ಇದರ ಪಾಸ್‌ವರ್ಡ್‌ ಇರಲಿದೆ. ಪ್ರತೀ ಪಂಚಾಯತ್‌ನಿಂದ ಸಂಗ್ರಹಿಸುವ ಮೊಬೈಲ್‌ ಸಂಖ್ಯೆಗಳನ್ನು ತಾಲೂಕು ಇಒ (ತಾ.ಪಂ. ಕಾರ್ಯನಿರ್ವಹಣಾಧಿಕಾರಿ)ಗಳು ಡಿಐಒ ಅವರಿಂದ ಪಾಸ್‌ವರ್ಡ್‌ ಕೇಳಿ, ವೆಬ್‌ಪೋರ್ಟಲ್‌ನಲ್ಲಿ ಭರ್ತಿ ಮಾಡಬೇಕು.

ದೇಶದ ಗ್ರಾಮಾಂತರ ಭಾಗಕ್ಕೂ ಸರಕಾರದ ಎಲ್ಲ ಯೋಜನೆಗಳ ಮಾಹಿತಿಗಳು ಮೊಬೈಲ್‌ ಮೂಲಕ ದೊರೆಯುವಂತಾಗಬೇಕು ಹಾಗೂ ಮಾಹಿತಿ ತಂತ್ರಜ್ಞಾನದ ಸೇವೆ ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು ಎಂಬ ನೆಲೆಯಲ್ಲಿ ಕೇಂದ್ರ ಸರಕಾರ ಈ ಕ್ರಮಕ್ಕೆ ಮುಂದಾಗಿವೆ. ಇದರಂತೆ ಪ್ರತೀ ಪಂಚಾಯತ್‌ನವರು ತಮ್ಮ ವ್ಯಾಪ್ತಿಯ ಮೊಬೈಲ್‌ ಬಳಕೆದಾರರ ಸಂಖ್ಯೆ ನೀಡಬೇಕಿದೆ.

ಮೊಬೈಲ್‌ ಸಂಖ್ಯೆಗಳನ್ನು ಪ್ರತೀ ಜಿಲ್ಲೆಯಲ್ಲಿ ಸಂಗ್ರಹ ಮಾಡುವ ಉದ್ದೇಶದಿಂದ ಪ್ರತ್ಯೇಕ ವೆಬ್‌ ಪೋರ್ಟ್‌ಲ್‌ ರಚಿಸಲಾಗಿದೆ. ಇದಕ್ಕೆ ಜಿಲ್ಲಾ ಮಾಹಿತಿ ಅಧಿಕಾರಿ (ಡಿಐಒ)ಯಲ್ಲಿ ಪಾಸ್‌ವರ್ಡ್‌ ಇರಲಿದೆ. ಪ್ರತೀ ಪಂಚಾಯತ್‌ನಿಂದ ಸಂಗ್ರಹಿಸುವ ಮೊಬೈಲ್‌ ಸಂಖ್ಯೆಗಳನ್ನು ಪ್ರತೀ ತಾಲೂಕು ಇಒ (ತಾ.ಪಂ. ಕಾರ್ಯನಿರ್ವಹಣಾಧಿಕಾರಿ)ಗಳು ಡಿಐಒ ಅವರಿಂದ ಪಾಸ್‌ವರ್ಡ್‌ ಕೇಳಿ, ವೆಬ್‌ಪೋರ್ಟಲ್‌ನಲ್ಲಿ ಭರ್ತಿ ಮಾಡಬೇಕು. 

ಮಾಹಿತಿ ಸಂಗ್ರಹಣೆಗೆ ಮಾಹಿತಿಯ ಕೊರತೆ…!
ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಮೊಬೈಲ್‌ ಸೇವಾದಾರರ ಮಾಹಿತಿ ನೀಡುವಂತೆ ಕಳೆದ ವರ್ಷವೇ ಕೇಂದ್ರ ಸರಕಾರ
ದಿಂದ ಪತ್ರ ರವಾನೆಯಾಗಿತ್ತು. ಆದರೆ ಈ ಬಗ್ಗೆ ಯಾವುದೇ ಪೂರಕ ಕೆಲಸ ನಡೆಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಎರಡನೇ ಬಾರಿಗೆ ಜಿ.ಪಂ./ತಾ.ಪಂ. ಹಾಗೂ ಗ್ರಾ.ಪಂ.ಗೆ ಪತ್ರ ಬರೆದು ವಿಳಂಬವಿಲ್ಲದೆ ಮೊಬೈಲ್‌ ಸೇವಾದಾರರ ಮಾಹಿತಿ ನೀಡುವಂತೆ ಸೂಚಿಸಿದೆ. ಎರಡನೇ ಪತ್ರ ಬಂದು ವಾರ ಎರಡಾಗುತ್ತಿದ್ದರೂ ಜಿಲ್ಲೆಯ ಬಹುತೇಕ ತಾ.ಪಂ.ನ ಕಾರ್ಯನಿರ್ವಹಣಾಧಿಕಾರಿಗೆ, ಕೆಲವು ಪಂಚಾಯತ್‌ನವರಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿ ಇದ್ದಂತಿಲ್ಲ. ವಿಚಾರಿಸಿದಾಗ, ಈ ಬಗ್ಗೆ ಪರಿಶೀಲಿಸುವುದಾಗಿಯೇ ಉತ್ತರ ನೀಡುತ್ತಿದ್ದಾರೆ.

ಎಲ್ಲ ಪಂಚಾಯತ್‌ಗೆ  ಸೂಚನೆ ರವಾನೆ
ಮೊಬೈಲ್‌ ಸೇವಾದಾರರ ಮಾಹಿತಿ ನೀಡುವಂತೆ ಸರಕಾರದಿಂದ ಈಗಾಗಲೇ ಪತ್ರ ಬಂದಿದೆ. ಎಲ್ಲ ತಾಲೂಕು ಇ.ಒ. ಅವರಿಗೆ ಇದನ್ನು ಕಳುಹಿಸಲಾಗಿದೆ. ಅವರು ಪಂಚಾಯತ್‌ಗಳಿಗೆ ಸೂಚಿಸಿದ್ದಾರೆ. ಮಾಹಿತಿ ಸಂಗ್ರಹಿಸುವ ಕೆಲಸವನ್ನು ತುರ್ತಾಗಿ ಮಾಡುವಂತೆ ಸೂಚನೆ ನೀಡಲಾಗಿದೆ.

– ಎನ್‌.ಆರ್‌. ಉಮೇಶ್‌, 
ಉಪಕಾರ್ಯದರ್ಶಿ ದ.ಕ. ಜಿ.ಪಂ.

ದಿನೇಶ್‌ ಇರಾ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.