ಶರವೇಗದ ಕಾಮಗಾರಿಗೆ ಕರಗುತ್ತಿದೆ ಪಶ್ಚಿಮ ಘಟ್ಟ!


Team Udayavani, Jun 1, 2017, 3:59 AM IST

Pipeline-31-5.jpg

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆ ಅನುಷ್ಠಾನದ ವಿಚಾರದಲ್ಲಿ ಒಂದೆಡೆ ಕಾಮಗಾರಿ ಜನರ ನಿರೀಕ್ಷೆಗಳನ್ನು ಮೀರಿ ಶರವೇಗದಲ್ಲಿ ನಡೆಯುತ್ತಿದೆ. ಇನ್ನೊಂದೆಡೆ ಈ ಕಾಮಗಾರಿಯಿಂದಾಗಿ ಪಶ್ಚಿಮ ಘಟ್ಟದ ಪ್ರಾಕೃತಿಕ ಸಂಪತ್ತು ಕೂಡ ಅಷ್ಟೇ ವೇಗವಾಗಿ ಕರಗತೊಡಗಿದೆೆ! ಪಶ್ಚಿಮ ಘಟ್ಟದ ದಟ್ಟ ಅರಣ್ಯದೊಳಗೆ ನಡೆಯುತ್ತಿರುವ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ಯಾವ ರೀತಿ ನಡೆಯುತ್ತಿದೆ ಹಾಗೂ ಕಾಮಗಾರಿ ಪ್ರಗತಿ ಹೇಗಿದೆ; ಆ ಮೂಲಕ ತಮಗೆ ನೀರು ಪೂರೈಕೆ ಆಗುವುದಕ್ಕೆ ಇನ್ನೆಷ್ಟು ವರ್ಷ ಬೇಕು ಎನ್ನುವ ಕುತೂಹಲ ಈ ಯೋಜನೆ ಫಲಾನುಭವಿಗಳಾದ ಬಯಲು ಸೀಮೆ ಜಿಲ್ಲೆಗಳ ಜನರಲ್ಲಿದೆ. 

ಇನ್ನೊಂದೆಡೆ ಎತ್ತಿನಹೊಳೆ ಯೋಜನೆಯಿಂದಾಗಿ ಪಶ್ಚಿಮ ಘಟ್ಟದಲ್ಲಿ ಎಷ್ಟೊಂದು ಅರಣ್ಯ ನಾಶವಾಗುತ್ತಿದೆ, ಅದು ಭವಿಷ್ಯದಲ್ಲಿ ಅಪಾಯವುಂಟು ಮಾಡುವುದೇ ಎಂಬ ಆತಂಕ ಇತ್ತ ಪಶ್ಚಿಮ ಘಟ್ಟದ ನದಿ ಮೂಲಗಳ‌ನ್ನು ಅವಲಂಬಿಸಿಕೊಂಡಿರುವ ಕರಾವಳಿ ಭಾಗದ ಜನರಲ್ಲಿದೆ. ಒಂದು ಕಡೆ ಕುಡಿಯುವ ನೀರು ದೊರೆಯುವ ಮೂಲಕ ಬರಡು ಭೂಮಿ ಹಸನಾಗುವ ಆಶಾವಾದ ಇದ್ದರೆ ಇನ್ನೊಂದು ಕಡೆ ಫಸಲು ಭರಿತ ಭೂಮಿ ನೀರಿಲ್ಲದೆ ಬರಡಾಗುವ ಭೀತಿ ಸೃಷ್ಟಿಯಾಗಿದೆ.

ಸುಮಾರು 12,912.36 ಕೋಟಿ ರೂ. ವೆಚ್ಚದ ಈ ಎತ್ತಿನಹೊಳೆ ನೀರಾವರಿ ಯೋಜನೆಗೆ ಈಗಾಗಲೇ ರಾಜ್ಯ ಸರಕಾರದ ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿದ್ದು, ವಿಶ್ವೇಶ್ವರಯ್ಯ ನೀರಾವರಿ ನಿಗಮ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಎತ್ತಿನಹೊಳೆ ಯೋಜನೆಯಡಿ ಪಶ್ಚಿಮ ಘಟ್ಟದಲ್ಲಿ ಒಟ್ಟು ಎಂಟು ಕಡೆ ಅಂದರೆ ಎತ್ತಿನಹೊಳೆ (ನಾಲ್ಕು ಕಡೆ), ಕಾಡುಮನೆ ಹೊಳೆ (ಎರಡು ಕಡೆ), ಹೊಂಗದ ಹಳ್ಳ ಹಾಗೂ ಕೇರಿ ಹೊಳೆಗೆ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದೆ. ಇವುಗಳ ಪೈಕಿ ಕೇರಿಹೊಳೆ ಹಾಗೂ ಹೊಂಗದಧಿಹಳ್ಳ ಡ್ಯಾಂ ಕೆಲಸ ಶೇ. 30ರಷ್ಟು ಪೂರ್ಣಗೊಂಡಿದೆ. ಇನ್ನು ಕಾಡುಧಿಮನೆ ಹೊಳೆ ಹಾಗೂ ಎತ್ತಿನ ಹಳ್ಳದ ಡ್ಯಾಂಗಳ ಕಾಮಗಾರಿ ಶೇ. 70ರಷ್ಟು ಮುಗಿದಿದೆ.

ಗಮನಾರ್ಹ ವಿಚಾರ ಅಂದರೆ ಪಶ್ಚಿಮ ಘಟ್ಟದಂತಹ ದಟ್ಟ ಅರಣ್ಯದಲ್ಲಿ ಶರವೇಗದಲ್ಲಿ ಕಾಮಗಾರಿ ನಡೆಸುವುದು ಅಷ್ಟೊಂದು ಸುಲಭವಿಲ್ಲ. ಈ ವಿಚಾರದಲ್ಲಿ ವಿಶ್ವೇಶ್ವರಯ್ಯ ನಿರಾವರಿ ನಿಗಮದ ಕೆಲಸ ಆಶ್ಚರ್ಯ ತರಿಸುತ್ತಿದೆ. ಏಕೆಂದರೆ ಜನ ನಡೆದುಕೊಂಡು ಹೋಗುವುದೇ ಕಷ್ಟ; ಅಂತಹ ದುರ್ಗಮ ಪ್ರದೇಶದಲ್ಲಿ ಗಜಗಾತ್ರದ ಪೈಪ್‌ಗ್ಳನ್ನು ಸಾಗಿಸಿ ಪ್ರಪಾತವಿದ್ದ ಕಡೆ ಅಣೆಕಟ್ಟು, ಸೇತುವೆಗಳನ್ನು ನಿರ್ಮಿಸುವುದು ಬಹುದೊಡ್ಡ ಸವಾಲಿನ ಕೆಲಸ.

ಹಿರಿದನಹಳ್ಳಿಯಿಂದ ಹರವನಹಳ್ಳಿಯವರೆಗೆ ಹೆಚ್ಚಾ ಕಡಿಮೆ 60 ಕಿ.ಮೀ. ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಇಷ್ಟೂ ವ್ಯಾಪ್ತಿಯ ಕಾಡಿನ ಅಲ್ಲಲ್ಲಿ ಬುಲ್ಡೋಜರ್‌, ಪೈಪ್‌ಗ್ಳೇ ಆಕ್ರಮಿಸಿಕೊಂಡಿವೆ. ಕಡಗರ ಹಳ್ಳಿ, ಆಲುಹಳ್ಳಿ, ಹಿರಿದನ ಹಳ್ಳಿ, ಹೆಬ್ಬಸಾಲೆ, ಕಾಡುಮನೆ ಹೊಳೆ, ಹೆಗ್ಗದ್ದೆ ಹೀಗೆ ಒಂದೊಂದು ಜಾಗಗಳಲ್ಲೂ ಕಾಮಗಾರಿ ಭರದಿಂದ ಸಾಗುತ್ತಿದೆ. ಮೂಲ ಸ್ವರೂಪವನ್ನೇ ಕಳೆದುಕೊಂಡಿರುವ ಈ ಜಾಗದಲ್ಲಿ ದೊಡ್ಡ ದೊಡ್ಡ ಗಾತ್ರದ ಪೈಪ್‌ಗ್ಳು ಮಾತ್ರ ಕಾಣಸಿಗುತ್ತಿವೆ.

ಕಳಪೆ ಕಾಮಗಾರಿ
ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಬಹಳಷ್ಟು ಕಡೆಗಳಲ್ಲಿ ಕಳಪೆ ಮಟ್ಟದ ಕಾಮಗಾರಿ ನಡೆಯುತ್ತಿದೆ. ಅದರಲ್ಲಿಯೂ ಡ್ಯಾಂಗಳಿಂದ ಸಕಲೇಶಪುರದ ದೊಡ್ಡನಗರದವರೆಗೆ ಅಳವಡಿಕೆಯಾಗುತ್ತಿರುವ ಪೈಪ್‌ಲೈನ್‌ ನೋಡುವಾಗ ಕಾಟಾಚಾರಕ್ಕೆ ಈ ಕಾಮಗಾರಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ. ಇಲ್ಲಿ ಒಟ್ಟು ನಾಲ್ಕು ಲೈನ್‌ಗಳಲ್ಲಿ ಸುಮಾರು 13 ಇಂಚು ಸುತ್ತಳತೆ ಪೈಪ್‌ಗ್ಳನ್ನು ಹಾಕಲಾಗುತ್ತಿದೆ. ಕೇರಿಹೊಳೆ, ಹೊಂಗದಹಳ್ಳ ಹಾಗೂ ಎತ್ತಿನಹೊಳೆ ಡ್ಯಾಂ ವ್ಯಾಪ್ತಿಯಲ್ಲಿ ಪೈಪ್‌ ಅಳವಡಿಸುವ ಕಾರ್ಯ ಈಗ ಭರದಿಂದ ನಡೆಯುತ್ತಿದೆ.

ಗಜ ಗಾತ್ರದ ಈ ಪೈಪ್‌ಗ್ಳನ್ನು ಒಂದಕ್ಕೊಂದು ವೆಲ್ಡಿಂಗ್‌ ಮಾಡಿ ಜೋಡಿಸುತ್ತಿರುವುದು ನೋಡಿದರೆ, ಅದರಲ್ಲಿ ನೀರು ಹರಿಯುವ ಬಗ್ಗೆಯೇ ಅನುಮಾನ ಮೂಡುತ್ತಿದೆ. ಏಕೆಂದರೆ ಪೈಪ್‌ಗ್ಳನ್ನು ಮಣ್ಣಿನಡಿ ಮುಚ್ಚುವ ಮುನ್ನ ನೀರಿನ ಸೋರಿಕೆ ಬಗ್ಗೆ ಯಾವುದೇ ತಪಾಸಣೆ ಮಾಡುತ್ತಿಲ್ಲ. ಅಷ್ಟೇ ಅಲ್ಲ, ಹಾಕಿರುವ ಪೈಪ್‌ಗ್ಳಿಗೆ ಗಟ್ಟಿ ಅಡಿಪಾಯವೇ ಇಲ್ಲ! ಮಳೆಗಾಲದಲ್ಲಿ ಪಶ್ಚಿಮ ಘಟ್ಟದಲ್ಲಿ ಬೀಳುವ ನೀರಿನ ರಭಸಕ್ಕೆ ಮಣ್ಣಿನ ಜತೆಗೆ ಇಡೀ ಪೈಪ್‌ಗ್ಳೇ ಕೊಚ್ಚಿಕೊಂಡು ಹೋಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. 

ವಿಶ್ವೇಶ್ವರಯ್ಯ ನೀರಾವರಿ ನಿಗಮದವರು ಇದ್ಯಾವುದರ ಬಗ್ಗೆಯೂ ಗಮನಹರಿಸಿದಂತಿಲ್ಲ. ಬದಲಿಗೆ ಆದಷ್ಟು ಬೇಗ ಪೈಪ್‌ಗ್ಳ ಅಳವಡಿಕೆ ಹಾಗೂ ಎತ್ತಿನಹೊಳೆ ಕಾಮಗಾರಿ ಪೂರ್ಣಗೊಳಿಸುವ ತರಾತುರಿಯಲ್ಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಒಂದು ಹಂತದ ಕಾಮಗಾರಿ ಮುಗಿಸಿ ಬಯಲು ಸೀಮೆ ಜಿಲ್ಲೆಗಳ ಮತದಾರರನ್ನು ಓಲೈಸುವ ಬಹುದೊಡ್ಡ ತಂತ್ರ ಈ ಇದರ ಹಿಂದೆ ಅಡಗಿರುವುದು ಸ್ಪಷ್ಟವಾಗುತ್ತಿದೆ.

ಕಾಡಿಗೆ ಕಾಡೇ ನಾಶ!
ಎತ್ತಿನಹೊಳೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ನೀರು ಪೂರೈಕೆ ಮೊದಲ ಆದ್ಯತೆಯಾಗಿರಬೇಕಾದರೆ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗದಂತೆ ಎಚ್ಚರದಿಂದ ಕಾಮಗಾರಿ ಕೈಗೊಳ್ಳಬೇಕಾದ ಬಹುದೊಡ್ಡ ಹೊಣೆಗಾರಿಕೆಯೂ ನೀರಾವರಿ ನಿಗಮದ ಮೇಲಿತ್ತು. ಆದರೆ ಎತ್ತಿನಹೊಳೆ ವಿಚಾರದಲ್ಲಿ ಆ ರೀತಿಯ ಕಾಳಜಿ ಅಲ್ಲಿ ಕಾಣಿಸುತ್ತಿಲ್ಲ. ಹಲವು ಕಡೆ ಅನಗತ್ಯವಾಗಿ ಮರಗಳನ್ನು ಕಡಿದು ಹಾಕಲಾಗಿದೆ. ಸೇತುವೆಗಳ ನಿರ್ಮಾಣಕ್ಕಾಗಿ ನದಿಗಳ ನೈಸರ್ಗಿಕ ಹರಿಯುವಿಕೆಯನ್ನೇ ಬದಲಿಸಲಾಗಿದೆ. ಸೌಂದರ್ಯಭರಿತ ಕಾಡು ಬುಲ್ಡೋಜರ್‌ ದಾಳಿಗೆ ನಡುಗುತ್ತಿದೆ. ಹೇಗಿದ್ದ ಪಶ್ಚಿಮಘಟ್ಟ ಹೇಗಾಯಿತು ಎನ್ನುವ ಉದ್ಗಾರ ಇದನ್ನು ಕಂಡಾಗ ಧ್ವನಿಸಬಹುದು. ಅಷ್ಟರ ಮಟ್ಟಿಗೆ ಕಾಡು ನಾಶವಾಗಿದೆ.

ಕಣಿವೆ ಮುಚ್ಚಲು ಬೆಟ್ಟ – ಗುಡ್ಡಗಳೇ ಬಲಿ !
ಎತ್ತಿನಹೊಳೆ ಡ್ಯಾಂ ಸಮೀಪ ಒಂದು ಕಡೆ ಪೈಪ್‌ ಅಳವಡಿಕೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಈ ಬಗ್ಗೆ ಕಾರ್ಮಿಕರಲ್ಲಿ ವಿಚಾರಿಸಿದಾಗ, ‘ನೋಡಿ ಈ ಬೆಟ್ಟದ ತುದಿಯಿಂದ ಅಲ್ಲಿ ಕಾಣುವ ಬೆಟ್ಟಕ್ಕೆ ಪೈಪ್‌ ಹಾಕಬೇಕಿದೆ. ಆದರೆ ಮಧ್ಯದಲ್ಲಿ ಇಷ್ಟು ದೊಡ್ಡ ಪ್ರಪಾತವಿರುವ ಕಾರಣ ಏಕಾಏಕಿ ಪೈಪ್‌ ಹಾಕಲು ಸಾಧ್ಯವಿಲ್ಲ. ಆದ್ದರಿಂದ ಈ ಬೆಟ್ಟದಿಂದ ಆ ಬೆಟ್ಟದ ನಡುವಣ ಪ್ರದೇಶಕ್ಕೆ ಮಣ್ಣು ತಂದು ಹಾಕಿ ಸಮತಟ್ಟುಗೊಳಿಸಬೇಕಿದೆ’ ಎಂದರು. ಹಾಗಾದರೆ ಇಷ್ಟೊಂದು ಮಣ್ಣು ಎಲ್ಲಿಂದ ತರುತ್ತೀರಿ? ಎಂಬ ಪ್ರಶ್ನೆಗೆ ಪಕ್ಕದ‌ ಮತ್ತೂಂದು ಬೆಟ್ಟದತ್ತ ಕೈತೋರಿಸಿದರು!

– ದಿನೇಶ್‌ ಇರಾ
– ಚಿತ್ರ: ಸತೀಶ್ ಇರಾ

ಎತ್ತಿನ ಹೊಳೆ ನೈಜ ದರ್ಶನ – 3
ಇದನ್ನೂ ಓದಿ:
►Part 1►ವೋಟ್‌ಬ್ಯಾಂಕ್‌ಗೆ ಎತ್ತಿನಹೊಳೆ ಫಲಾನುಭವಿಗಳು-ಸಂತ್ರಸ್ತರು ಬಲಿಪಶು?: http://bit.ly/2rV5cex
►Part 2►ಪಶ್ಚಿಮಘಟ್ಟದೊಳಗೊಂದು ಕಾಂಕ್ರೀಟ್‌ ರಸ್ತೆ ಇದು ಎತ್ತಿನಹೊಳೆ ಮಹಾತ್ಮೆ: http://bit.ly/2qGLP49

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.