ಜಿಎಸ್‌ಟಿ: ಮಾರುಕಟ್ಟೆ  ಕೊಂಚ ತಲ್ಲಣ


Team Udayavani, Jul 2, 2017, 3:45 AM IST

tallana.jpg

ಮಂಗಳೂರು/ಉಡುಪಿ: ಕೇಂದ್ರ ಸರಕಾರದ ಏಕರೂಪದ ತೆರಿಗೆ ನೀತಿ ಜಿಎಸ್‌ಟಿ ಜಾರಿಯಿಂದ ವ್ಯಾಪಾರ ಉದ್ಯಮದಲ್ಲಿ ಶನಿವಾರ ಕೊಂಚ ತಲ್ಲಣ ಉಂಟಾಗಿದೆ. ತಮ್ಮ ಬಿಲ್ಲಿಂಗ್‌ ವ್ಯವಸ್ಥೆಯನ್ನು ಜಿಎಸ್‌ಟಿಗೆ ಅನ್ವಯಿ ಸುವ ನಿಟ್ಟಿನಲ್ಲಿ ಕೆಲವೊಂದು ಮಳಿಗೆಗಳಲ್ಲಿ ಕೈಬರಹದ ಬಿಲ್‌ ನೀಡಿದರೆ, ಇನ್ನು ಕೆಲವು ಮಳಿಗೆಗಳು ಶನಿವಾರ ವ್ಯವಹಾರ ಸ್ಥಗಿತಗೊಳಿಸಿದ್ದವು.

ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್‌ಟಿಯಿಂದ ಯಾವುದೇ ತೊಂದರೆ ಉಂಟಾಗಲಿಲ್ಲ; ವ್ಯವಹಾರ ಎಂದಿನಂತೆ ಸರಾಗವಾಗಿತ್ತು. ಚಿನ್ನದ ತೆರಿಗೆ ಕೊಂಚ ಏರಿಕೆಯಾದ ಹಿನ್ನೆಲೆಯಲ್ಲಿ ವ್ಯವಹಾರ ಇಳಿಕೆಯಾಗಿತ್ತು. ಮುಂದಿನ 2 ವಾರಗಳ ಕಾಲ ವ್ಯಾಪಾರ ಹೀಗೆ ಕಡಿಮೆ ಇರಬಹುದು ಎಂದು ಚಿನ್ನ ವರ್ತಕರು ಅಭಿಪ್ರಾಯಿಸುತ್ತಾರೆ. ಜನರಿಗೆ ಜಾಗೃತಿಯ ಕೊರತೆಯಿಂದ ವ್ಯಾಪಾರ ಕಡಿಮೆಯಾಗಿದೆ ಎಂದು ಉಡುಪಿ ಚಿನ್ನದ ವರ್ತಕರು ಹೇಳಿದ್ದಾರೆ.

ಸಣ್ಣ ಹೊಟೇಲ್‌ಗ‌ಳಲ್ಲಿ ಸದ್ಯಕ್ಕೆ ಯಾವುದೇ ದರ ವ್ಯತ್ಯಾಸವಾಗದಿದ್ದರೂ ದೊಡ್ಡ ಹೊಟೇಲ್‌ಗ‌ಳಲ್ಲಿ ಜಿಎಸ್‌ಟಿಯನ್ವಯ ಬೆಲೆ ಏರಿಕೆಯಾಗಿತ್ತು. ಜಿಎಸ್‌ಟಿಯನ್ವಯ ಒಂದೊಂದು ಉತ್ಪನ್ನಗಳಿಗೆ ಬೇರೆ ಬೇರೆ ರೀತಿಯ ತೆರಿಗೆ ಬೀಳುವ ಹಿನ್ನೆಲೆಯಲ್ಲಿ ಪ್ರತಿ ವಿಧದ ತೆರಿಗೆಗಳಿಗೆ ಒಂದೊಂದು ಕೋಡ್‌ ನೀಡಲಾಗಿದೆ. ಅದನ್ನು ಉತ್ಪನ್ನಗಳಿಗೆ ಅನ್ವಯಿಸುವ ಹಿನ್ನೆಲೆಯಲ್ಲಿ ಕೆಲ ವೊಂದು ಮಳಿಗೆಗಳು ಶನಿವಾರ ವ್ಯಾಪಾರ ನಡೆಸಲಿಲ್ಲ.

ಉಡುಪಿ ಕಿದಿಯೂರು ಹೊಟೇಲ್‌ನಲ್ಲಿ ನಾನ್‌ಎಸಿ ರೂಮಿನ ದರ 1,230ರಿಂದ 1,175 ರೂ.ಗೆ, ಎಸಿ ರೂಮಿನ ದರ 3,000ದಿಂದ 2,770 ರೂ.ಗೆ ಇಳಿದಿದೆ. “ಹಿಂದೆ ವಿವಿಧ ತೆರಿಗೆಯನುಸಾರ ಶೇ. 24 ಕಟ್ಟಬೇಕಿತ್ತು. ಈಗ ಶೇ. 18 ಕಟ್ಟಿದರೆ ಸಾಕು. ಹೀಗಾಗಿ ದರ ಕಡಿಮೆಯಾಗಿದೆ’ ಎಂದು ಮಾಲಕ ಭುವನೇಂದ್ರ ಕಿದಿಯೂರು ಹೇಳಿದ್ದಾರೆ.

ಚಿತ್ರ ಮಂದಿರಗಳಲ್ಲಿ ಮಾತ್ರ ಟಿಕೆಟ್‌ ದರ ಏರಿಕೆಯಾಗಿದೆ. ಇದರಿಂದ ಕನ್ನಡ ಚಿತ್ರಗಳಿಗೆ ದೊಡ್ಡ ಹೊಡೆತ ಎಂದು ಉಡುಪಿ ಚಿತ್ರಮಂದಿರದ ಮೂಲಗಳು ತಿಳಿಸಿವೆ. ಮೆಡಿಕಲ್‌ ಶಾಪ್‌ಗ್ಳಲ್ಲಿ ಹೆಚ್ಚಿನ ವ್ಯತ್ಯಾಸವೇನಿಲ್ಲ. 

ಈ ರೀತಿಯಲ್ಲಿ ನಗರದ ದೊಡ್ಡ ದೊಡ್ಡ ಉದ್ಯಮಗಳಲ್ಲಿ ಕೊಂಚ ಮಟ್ಟಿನ ತಲ್ಲಣ ಉಂಟಾಗಿತ್ತು. ಆದರೆ ಜಿಎಸ್‌ಟ್‌ಯಿಂದ ಉದ್ಯಮದ ಮೇಲೆ ಗಂಭೀರ ಪರಿಣಾಮ ಉಂಟಾಗಿಲ್ಲ. ಹೊಸ ಪದ್ಧತಿಗೆ ಜನರು ಪೂರ್ಣ ಪ್ರಮಾಣದಲ್ಲಿ ಒಗ್ಗಿಕೊಳ್ಳಬೇಕಾದರೆ ಇನ್ನೊಂದಷ್ಟು ಸಮಯ ಕಾಯಬೇಕಾಗುತ್ತದೆ. ಕೆಳ ಹಾಗೂ ಮಧ್ಯಮ ಸ್ತರದ ಜನರಿಗೆ ಜಿಎಸ್‌ಟಿಯಿಂದ ಅನುಕೂಲವಾಗಲಿದೆ ಎಂದು ಆರ್ಥಿಕ ತಜ್ಞರೊಬ್ಬರು ಅಭಿಪ್ರಾಯಿಸಿದ್ದಾರೆ.

ತಡರಾತ್ರಿ ವ್ಯವಹಾರ ನಡೆಸಿದ ಮಾಲ್‌ಗ‌ಳು
ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆಯಾಗಿದ್ದರೂ ಅದು ಜಿಎಸ್‌ಟಿಯಿಂದ ಅಲ್ಲ ಎಂದು ಹೇಳಲಾಗುತ್ತಿದೆ. ಉಡುಪಿಯಲ್ಲಿ ಜೂ. 16ರಂದು ಪೆಟ್ರೋಲ್‌ ದರ 69.63 ರೂ.ನಿಂದ ಜೂ. 30ಕ್ಕೆ 63.34 ರೂ.ಗೆ, ಡೀಸೆಲ್‌ ದರ 57.79 ರೂ.ನಿಂದ 53.91 ರೂ.ಗೆ ಇಳಿಕೆಯಾಗಿದೆ. ಆದರೆ ಆಯಿಲ್‌ ದರ ಏರಿಕೆಯಾಗಿದೆ. ಶುಕ್ರವಾರ ತಡರಾತ್ರಿಯ ವರೆಗೂ ಆಫರ್‌ಗಳನ್ನು ನೀಡಿದ್ದ ಮಾಲ್‌ಗ‌ಳಲ್ಲಿ ಶನಿವಾರ ಆಫರ್‌ಗಳು ಇರಲಿಲ್ಲ. ವ್ಯಾಪಾರದಲ್ಲಿ ಕೊಂಚ ವ್ಯತ್ಯಾಸವಾಗಿದ್ದರೂ ಜನಸಂದಣಿಯಲ್ಲಿ ಹೆಚ್ಚಿನ ವ್ಯತ್ಯಾಸ ಇರಲಿಲ್ಲ. ಜನರು ಎಂದಿನಂತೆ ಬರುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಉಡುಪಿ ಬಿಗ್‌ ಬಜಾರ್‌ನಲ್ಲಿ ಜೂ. 30 ಮಧ್ಯರಾತ್ರಿ ಬಳಿಕ ನಡೆದ ಎರಡು ಗಂಟೆಗಳ ವ್ಯಾಪಾರದಲ್ಲಿ 800 ಗ್ರಾಹಕರು ವ್ಯವಹಾರ ನಡೆಸಿದರು. ಜು. 1ರಂದೂ ಜನರು ವ್ಯಾಪಾರ ನಡೆಸಿದ್ದರು.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.