ಯುವಾ ಬ್ರಿಗೇಡ್‌: ನೀರುಳಿಸಲು ವೀಕೆಂಡ್‌ ವಿಥ್‌ ರೈನ್‌


Team Udayavani, Jul 4, 2017, 7:00 PM IST

Save-Water-4-7.jpg

ಮಹಾನಗರ: ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವ ಮೂಲಕ ಜಲಕ್ರಾಂತಿ ಮಾಡಿದ ಯುವಾ ಬ್ರಿಗೇಡ್‌ ಈಗ ‘ಜಲ ಜನ ಸಂಪರ್ಕ ಸೇತು’ ಎಂಬ ವಿನೂತನ ಜಲಸಾಕ್ಷರ ಅಭಿಯಾನವನ್ನು ಆರಂಭಿಸಿದೆ. ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ಉಂಟಾಗದಂತೆ ಜನರನ್ನು ಈಗಿಂದಲೇ ನೀರಿನ ಉಳಿತಾಯಕ್ಕೆ ಅಣಿಗೊಳಿಸುವುದು ಇದರ ಉದ್ದೇಶ. ಈ ಸಂಬಂಧ ಜಿಲ್ಲೆಯಲ್ಲಿ 5 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಈಗಾಗಲೇ ಕೆಲವು ಪ್ಲಂಬರುಗಳನ್ನು ಸಂಪರ್ಕಿಸಿ ‘ಮಳೆ ನೀರು ಸಂರಕ್ಷಣೆಯೊಂದಿಗೆ ಈ ವಾರಾಂತ್ಯ’ ಎಂಬ ಘೋಷವಾಕ್ಯದೊಂದಿಗೆ ಮಳೆ ಕೊಯ್ಲು ಕಾರ್ಯಕ್ರಮ ನಡೆಸಲು ಯೋಜಿಸಲಾಗಿದೆ.


ಮಳೆ ಬಿದ್ದ ಮಾತ್ರಕ್ಕೆ ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ತಪ್ಪದು. ಅದಕ್ಕಾಗಿ ಪ್ರತಿಯೊಬ್ಬರೂ ಜಲಸಾಕ್ಷರರಾಗಬೇಕು. ಈ ಹಿನ್ನೆಲೆಯಲ್ಲೇ ‘ಜಲ ಜನ ಸಂಪರ್ಕ ಸೇತು’ ಅಭಿಯಾನ ಆರಂಭಗೊಂಡಿದೆ. ‘ಇರುವ ನೀರನ್ನು ವ್ಯರ್ಥ ಮಾಡದೇ ಉಪಾಯದಿಂದ ಬಳಸಲು ಪ್ರೇರೇಪಿಸಲು ಈ ಅಭಿಯಾನ. ವಾರದ ಕೊನೆಯ ದಿನದಂದು ಮನೆ ಮನೆಗಳಿಗೆ ತೆರಳಿ ಕರಪತ್ರ ಹಂಚಿ ಕಾರ್ಯಕರ್ತರು ನೀರು ಸಂರಕ್ಷಿಸಲು ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರೂ ಇದರಲ್ಲಿ ಪಾಲ್ಗೊಳ್ಳಬಹುದು’ ಎನ್ನುತ್ತಾರೆ ಯುವಾ ಬ್ರಿಗೇಡ್‌ನ‌ ನಿತ್ಯಾನಂದ ವಿವೇಕವಂಶಿ.

ಕರಪತ್ರದಲ್ಲೇನಿದೆ?
ಸ್ನಾನ ಮಾಡಲು ನೀರನ್ನು ವ್ಯರ್ಥ ಮಾಡದೇ ಒಂದು ಬಕೆಟ್‌ಗೆ ಸೀಮಿತಗೊಳಿಸೋಣ. ವಾಟರ್‌ ಪ್ಯೂರಿಫಯರ್‌ನಿಂದ ಹೊರ ಬರುವ ನೀರನ್ನು ಸಿಂಕ್‌ಗೆ ಬಿಡದೇ ಪಾತ್ರೆ ತೊಳೆಯಲು ಬಳಸೋಣ. ಸೋರುತ್ತಿರುವ ನಲ್ಲಿಗಳನ್ನು ಮತ್ತು ಫ್ಲಶ್‌ ಟ್ಯಾಂಕ್‌ಗಳನ್ನು ತತ್‌ಕ್ಷಣ ದುರಸ್ತಿ ಮಾಡಿಸೋಣ. ಶೌಚಾಲಯದ ಬಳಕೆಗೆ ಕಮೋಡ್‌ಗಿಂತ ಇಂಡಿಯನ್‌ ಟಾಯ್ಲೆಟ್‌ ಬಳಸೋಣ. ಸಂಪ್‌ ಅಥವಾ ಕೊಳವೆ ಬಾವಿಯಿಂದ ನೀರನ್ನು ಓವರ್‌ ಹೆಡ್‌ ಟ್ಯಾಂಕ್‌ಗೆ ಪಂಪ್‌ ಮಾಡುವಾಗ ಟ್ಯಾಂಕ್‌ ತುಂಬಿ ಸುರಿಯದಂತೆ ಎಚ್ಚರ ವಹಿಸೋಣ – ಇತ್ಯಾದಿ ಸಲಹೆಗಳಿವೆ.

ಪ್ರಧಾನಿ ಗಮನ ಸೆಳೆದ ಕಲ್ಯಾಣಿ ಸ್ವಚ್ಛತೆ
ಯುವಾ ಬ್ರಿಗೇಡ್‌ ಎರಡೂವರೆ ವರ್ಷಗಳಿಂದ ರಾಯಚೂರು, ಗದಗ, ಮೈಸೂರು ಸೇರಿದಂತೆ ಒಟ್ಟು 100ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಿದೆ. ಇಂತಹ ಕಲ್ಯಾಣಿಗಳಲ್ಲಿ ಜೀವಜಲ ತುಂಬಿ ಅಲ್ಲಿನ ಜನಜೀವನಕ್ಕೆ ಸಹಾಯವಾಗಿದೆ. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲೂ ಉಲ್ಲೇಖೀಸಿ ಶ್ಲಾಘಿಸಿದ್ದರು.

ತಮಿಳು – ಕನ್ನಡಿಗರ ಬೆಸೆಯಲು ‘ಮೈಟ್ರೀ’
ಕಾವೇರಿ ಜಲಾನಯನದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಜಲ ಕದನ ನಡೆಯದಂತೆ ಜಾಗೃತಿ ಮೂಡಿಸಿ ತಮಿಳುನಾಡಿನ ಯುವ ಜನರನ್ನೂ ಸೇರಿಸಿಕೊಂಡು ಕುಶಾಲನಗರದಲ್ಲಿ ಈ ಹಿಂದೆ ‘ಮೈಟ್ರೀ’ ಕಾವೇರಿ ಸ್ವಚ್ಛತೆ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ತಮಿಳು -ಕನ್ನಡಿಗರ ಮತ್ತು ಭೂಮಿ – ಆಕಾಶಗಳ ನಡುವಣ ಮರದ ಸಂಬಂಧ ಎಂಬ ಧ್ಯೇಯೋದ್ದೇಶದೊಂದಿಗೆ ಕಾವೇರಿ ಸ್ವಚ್ಛತೆ ನಡೆಸಿತ್ತು.

ಮಳೆ ಕೊಯ್ಲು, ಜಲಮರುಪೂರಣ
ಜಿಲ್ಲೆಯಲ್ಲಿ ಸುಮಾರು 5 ಸಾವಿರ ಮನೆಗಳಿಗೆ ಜಲ ಜನ ಕಾರ್ಯಕ್ರಮದ ಬಗ್ಗೆ ತಿಳಿಸುವ ಕರಪತ್ರ ತಲುಪಿಸಲಾಗುವುದು. ಈಗಾಗಲೇ ಕೆಲ ಪ್ಲಂಬರುಗಳನ್ನು ಸಂಪರ್ಕಿಸಿದ್ದು, ವಾರಾಂತ್ಯದಲ್ಲಿ ಕೆಲವೆಡೆ ಮಳೆ ಕೊಯ್ಲು, ಜಲಮರುಪೂರಣ ಕಾರ್ಯಕ್ರಮ ನಡೆಸುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ. ಶಾಲೆಗಳಲ್ಲಿ ಮಕ್ಕಳಿಗೆ ಜಲ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕಿದೆ.
– ತಿಲಕ್‌ ಶಿಶಿಲ, ಜಿಲ್ಲಾ ಸಹ ಸಂಚಾಲಕ,ಯುವಾಬ್ರಿಗೇಡ್‌

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.