ಪ್ರಾಕೃತಿಕ ವಿಕೋಪ ಸಮೀಕ್ಷೆಗೆ ಸೂಚನೆ
Team Udayavani, Jul 11, 2017, 2:10 AM IST
ಸುರತ್ಕಲ್: ಮಳೆ ಸಂದರ್ಭದಲ್ಲಿ ಆಗುವ ಅನಾಹುತದ ಸಮೀಕ್ಷೆ ನಡೆಸಿ ಶೀಘ್ರ ಕ್ರಮ ಕೈಗೊಂಡು ಪರಿಹಾರ ಒದಗಿಸಲು ಮುತುವರ್ಜಿ ವಹಿಸಬೇಕು ಎಂದು ಶಾಸಕ ಮೊದಿನ್ ಬಾವಾ ಹೇಳಿದರು. ಪಾಲಿಕೆಯ ಸುರತ್ಕಲ್ ಉಪಕಚೇರಿಯಲ್ಲಿ ಜರಗಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡುಗಳ ಅಭಿವೃದ್ಧಿ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ವಾರ್ಡುಗಳ ಅಭಿವೃದ್ಧಿಗೆ ಪೂರಕವಾದ ಸಮೀಕ್ಷೆ ಹಾಗೂ ಅಂದಾಜು ಪಟ್ಟಿ ಮಾಡಲಾಗಿದ್ದರೂ ವಿಳಂಬ ಕಾಮಗಾರಿ ನಡೆಯದಂತೆ ಅಧಿಕಾರಿಗಳು ತತ್ಕ್ಷಣ ಕ್ರಮಕೈಗೊಳ್ಳಬೇಕು ಎಂದರು.
ಮಾರುಕಟ್ಟೆ ಶೀಘ್ರ ಸ್ಥಳಾಂತರ
ಸುರತ್ಕಲ್ ಮಾರುಕಟ್ಟೆ ಸ್ಥಳಾಂತರ ಪ್ರಕ್ರಿಯೆ ಒಂದು ತಿಂಗಳಲ್ಲಿ ನಡೆಯಲಿದ್ದು, ತರಕಾರಿ, ಮೀನು ಮಾರುಕಟ್ಟೆ ಮತ್ತಿತರ ತಾತ್ಕಾಲಿಕ ಅಂಗಡಿಗಳ ನಿರ್ಮಾಣ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ಪಾಲಿಕೆಯ ಎಂಜಿನಿಯರ್ಗಳು ತಿಳಿಸಿದರು. ಮುಖ್ಯಮಂತ್ರಿಗಳು ನೂತನ ಹೊಸ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋ.ರೂ. ಎಸ್ಎಫ್ಸಿ ನಿಧಿಯಿಂದ ಒದಗಿಸಿದ್ದು, ಸ್ವತಃ ಅವರೇ ಶಿಲಾನ್ಯಾಸ ಮಾಡಲು ಒಪ್ಪಿಕೊಂಡಿದ್ದಾರೆ. ಅದರ ತಯಾರಿ ಕುರಿತಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಕಾರ್ಪೊರೇಟರ್ ಬಶೀರ್ ಅಹ್ಮದ್, ಅಶೋಕ್ ಶೆಟ್ಟಿ ತಡಂಬೈಲ್, ಪಾಲಿಕೆಯ ಹಿರಿಯ ಎಂಜಿನಿಯರ್ ಗಣೇಶ್, ಸುರತ್ಕಲ್ ವಲಯಾಯುಕ್ತ ರವಿಶಂಕರ್, ಎಂಜಿನಿಯರ್ಗಳಾದ ದೇವರಾಜ್, ಖಾದರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…