ಅಚ್ಛೇ ದಿನ ಬರಲೇ ಇಲ್ಲ : ಸುನೀಲ್‌ ಕುಮಾರ್‌ ಬಜಾಲ್‌


Team Udayavani, Jul 11, 2017, 2:20 AM IST

Bajal-10-7.jpg

ಜಪ್ಪಿನಮೊಗರು: ಅಚ್ಛೇದಿನ ಬರುತ್ತದೆ ಎಂದು ದೇಶದ ಜನರಿಗೆ ಕನಸು ಕಾಣಿಸಿ ಕಳೆದ ಮೂರು ವರುಷಗಳಿಂದ ದೇಶವನ್ನಾಳಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಆಳ್ವಿಕೆಯಿಂದ ಈವರೆಗೂ ಅಚ್ಛೇ ದಿನ ಬರಲೇ ಇಲ್ಲ ಎಂದು ಸಿಪಿಐಎಂನ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್‌ ಬಜಾಲ್‌ ಹೇಳಿದರು. ಅವರು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಎಂ ಬಜಾಲ್‌ ವಿಭಾಗ ಸಮಿತಿ ನೇತೃತ್ವದಲ್ಲಿ ಕಣ್ಣೂರಿನಲ್ಲಿ ರವಿವಾರ ಜರಗಿದ ಪ್ರಚಾರ ಆಂದೋಲನ ದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತಾಡಿದರು.

100 ದಿನಗಳಲ್ಲಿ ಕಪ್ಪು ಹಣ ತರುತ್ತೇನೆ ಎಂದು ಹೇಳಿ 1000 ದಿನಗಳಾದರೂ ತರಲೇ ಇಲ್ಲ. ಕಳ್ಳನೋಟು,ಭ್ರಷ್ಟಾಚಾರ, ಭಯೋತ್ಪಾದನೆಯನ್ನು ತಡೆಗಟ್ಟುವ ಬದಲಾಗಿ ಜಾಸ್ತಿಯಾಗುತ್ತಿದೆ. ಪ್ರಧಾನಿಯವರು ದೇಶ ವಿದೇಶಗಳನ್ನು ಸುತ್ತುತ್ತಾ ಅಲ್ಲಿನ ಬಂಡವಾಳಗಾರರಿಗೆ ದೇಶದಲ್ಲಿ ವ್ಯಾಪಾರ ನಡೆಸಲು ನೆಲೆ ಕಲ್ಪಿಸುವ ಕಾರ್ಯದಲ್ಲಿ ತೊಡಗಿರುವುದು ದುರಂತ. ಒಂದೇ ದೇಶ ಒಂದೇ ತೆರಿಗೆ ಹೆಸರಲ್ಲಿ ಜಿಎಸ್‌ಟಿ ಜಾರಿಗೆ ತರುವ ಮೂಲಕ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆಯಾಗಿ ಸಾಮಾನ್ಯ ಜನರಿಗೆ ತೆರಿಗೆ ಬಿಸಿತಟ್ಟುವಂತಾಗಿದೆ ಎಂದರು.

ಬಜಾಲ್‌ ವಿಭಾಗ ಸಮಿತಿಯ ಪ್ರಚಾರ ಆಂದೋಲನ ಕಾರ್ಯಕ್ರಮವು ಜಪ್ಪಿನಮೊಗರಿನ ಮುಖ್ಯದ್ವಾರದ ಬಳಿ ಉದ್ಘಾಟನೆಗೊಂಡಿತು. ಸಿಪಿಐಎಂನ ಜಿಲ್ಲಾಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ವಾಹನ ಪ್ರಚಾರ ಜಾಥಾ ಕಂಕನಾಡಿ ಬಿ, ಅಳಪೆ ದಕ್ಷಿಣ, ಬಜಾಲ್‌ ಕಣ್ಣೂರು ವಾರ್ಡುಗಳ ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಕಣ್ಣೂರಿನಲ್ಲಿ ಸಮಾರೋಪಗೊಂಡಿತು. ಸಮಾರೋಪದಲ್ಲಿ ಸಿಪಿಎಂ ಮಂಗಳೂರು ನಗರ ಸಮಿತಿ ಮುಖಂಡರಾದ ಸಂತೋಷ್‌ ಬಜಾಲ್‌, ಸುರೇಶ್‌ ಬಜಾಲ್‌, ಪ್ರೇಮನಾಥ್‌ ಜಲ್ಲಿಗುಡ್ಡೆ, ಸಾಧಿಕ್‌ಕಣ್ಣೂರು, ಜಯಂತಿ ಬಿ ಶೆಟ್ಟಿ, ದಿನೇಶ್‌ಶೆಟ್ಟಿ ಮುಂತಾದವರಿದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.