ಕಾರು-ಟೆಂಪೋ ಟ್ರಾವೆಲರ್ ಢಿಕ್ಕಿ: ಪ್ರಯಾಣಿಕರು ಪಾರು
Team Udayavani, Jul 14, 2017, 3:50 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್ ಜಂಕ್ಷನ್ ನಲ್ಲಿ ಕಾರು ಮತ್ತು ಟೆಂಪೋ ಟ್ರಾವೆಲರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರು ಗಾಯ ಗೊಂಡು ಪವಾಡ ಸದೃಶವಾಗಿ ಪಾರಾದ ಘಟನೆ ಗುರುವಾರ ನಡೆದಿದೆ.
ಕುಂಜತ್ತೂರು ನಿವಾಸಿಗಳಾದ ಮುಸ್ತಾಫ ಮತ್ತು ಸಮದ್ ರಫೀ ಗಾಯಗೊಂಡವರು. ಮಂಗಳೂರಿನಿಂದ ಕುಂಜತ್ತೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರಿನ ಎದುರಿನಲ್ಲಿ ಚಲಿಸುತ್ತಿದ್ದ ಬಸ್ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಕಾರು ಚಾಲಕ ಅಪಘಾತವನ್ನು ತಪ್ಪಿಸಲು ಬಲ ಬದಿಗೆ ಕಾರನ್ನು ಚಲಾಯಿಸಿದ್ದು, ನಿಯಂತ್ರಣ ಕಳೆದು ಕೊಂಡ ಕಾರು ಡಿವೈಡರ್ ಏರಿ ಇನ್ನೊಂದು ಬದಿಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ