ಬಜಪೆ: ರನ್‌ವೇ ದೀಪಕ್ಕೆ ಬಡಿದ ಎಐ ವಿಮಾನ; ತಪ್ಪಿದ ದುರಂತ


Team Udayavani, Jul 17, 2017, 5:20 AM IST

AIR-Express 700.jpg

ಮಂಗಳೂರು: ಪೈಲಟ್‌ನ ಚಾಣಾಕ್ಷತನ ಮತ್ತು ಸಮಯ ಪ್ರಜ್ಞೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದೊಡ್ಡ ಮಟ್ಟದ ಅವಘಡವೊಂದು ತಪ್ಪಿದ್ದು, ವಿಮಾನದಲ್ಲಿದ್ದ ಎಲ್ಲ 186 ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಏರ್‌ ಇಂಡಿಯಾ ಸಂಸ್ಥೆಗೆ ಸೇರಿದ ದುಬಾೖ-ಮಂಗಳೂರು ವಿಮಾನ ರವಿವಾರ ಮುಂಜಾನೆ 4.30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವಾಗ ಈ ಘಟನೆ ಸಂಭವಿಸಿದೆ.

ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಲ್ಯಾಂಡಿಂಗ್‌ ವೇಳೆ ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇಯಿಂದ ಸ್ವಲ್ಪ ಬದಿಗೆ ಸರಿದ ಪರಿಣಾಮ ರನ್‌ವೇಗೆ ಹೊಂದಿಕೊಂಡಿರುವ ಮಾರ್ಗಸೂಚಿ ದೀಪಕ್ಕೆ ತಾಗಿದೆ. ಇದರ ಪರಿಣಾಮ, ವಿಮಾನವು ರನ್‌ವೇಯಲ್ಲಿ ಚಲಿಸುತ್ತ ಸುಮಾರು ಆರು ಮಾರ್ಗಸೂಚಿ ದೀಪಗಳಿಗೆ ತಾಗಿಕೊಂಡು ಹೋಯಿತು. ದೀಪಗಳಿಗಷ್ಟೇ ಹೆಚ್ಚಿನ ಹಾನಿಯಾಗಿದೆ. ವಿಮಾನಕ್ಕೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ.  ಪೈಲಟ್‌ ವಿಮಾನವನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡ ಸಂಭವಿಸಿರುವುದು ವಿಮಾನದೊಳಗಿದ್ದ ಯಾವುದೇ ಪ್ರಯಾಣಿಕರ ಅನುಭವ ಅಥವಾ ಗಮನಕ್ಕೂ ಬಂದಿಲ್ಲ. ಆ ಮೂಲಕ ಈ ದುಬಾೖ-ಮಂಗಳೂರು ವಿಮಾನದಲ್ಲಿದ್ದ ಎಲ್ಲ 186 ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಮರಳಿದ ವಿಮಾನ: ವಿಮಾನ ಇಳಿಯಲು ಹಸಿರು ನಿಶಾನೆ ಲಭಿಸಿದ ಬಳಿಕ ಇಳಿಯುತ್ತಿರುವಾಗ ಸುರಿದ ಮಳೆಯಿಂದಾಗಿ ಈ ವೈಪರೀತ್ಯ ಆಗಿದ್ದು ವಿಮಾನ ಸ್ವಲ್ಪ ಬದಿಗೆ ಸರಿದಿದೆ. ಆದರೆ ಪೈಲಟ್‌ ನಿಯಂತ್ರಣ ಸಾಧಿಸಿ ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡಿಂಗ್‌ ಮಾಡಿದ್ದಾರೆ. ಲ್ಯಾಂಡಿಂಗ್‌ ವೇಳೆ ಚಕ್ರದಲ್ಲಿ ಕಾಣಿಸಿಕೊಂಡಿರುವ ತೊಂದರೆಯಿಂದಾಗಿ ವಿಮಾನ ಹತೋಟಿ ತಪ್ಪಿರುವ ಸಾಧ್ಯತೆ ಇರುವುದರಿಂದ ವಿಮಾನದ ಚಕ್ರವನ್ನು ಬದಲಾಯಿಸಿಕೊಂಡು ಎಂದಿನಂತೆ ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್‌ ಅವರು, ‘ಮುಂಜಾನೆ ಈ ಘಟನೆ ಸಂಭವಿಸಿದೆ. ಮಾರ್ಗಸೂಚಿ ದೀಪಕ್ಕೆ ಸ್ವಲ್ಪ ಹಾನಿಯಾಗಿದ್ದು ವಿಮಾನಯಾನಗಳ ದೈನಂದಿನ ನಿರ್ವಹಣೆಗೆ ಯಾವುದೇ ಸಮಸ್ಯೆಯಾಗಿಲ್ಲ. ಘಟನೆ ಸಂಭವಿಸಿದ ವಿಮಾನವು ತನ್ನ ಯಾನವನ್ನು ವೇಳಾಪಟ್ಟಿಯಂತೆ ಮುಂದುವರಿಸಿದೆ’ ಎಂದು ತಿಳಿಸಿದ್ದಾರೆ. ಈ ಘಟನೆಯಿಂದ ಗಾಬರಿಪಡುವ ಆವಶ್ಯಕತೆ ಇಲ್ಲ. ವಿಮಾನಗಳು ಲ್ಯಾಂಡಿಂಗ್‌ ಆಗುವ ಸಂದರ್ಭದಲ್ಲಿ ಕೆಲವು ಬಾರಿ ಈ ರೀತಿಯಾಗುತ್ತದೆ. ಮಾರ್ಗಸೂಚಿ ದೀಪಗಳು ರನ್‌ವೇ ನಿಕಟವಾಗಿದ್ದು ಸ್ವಲ್ಪ ವ್ಯತ್ಯಾಸವಾದರೂ ದೀಪಗಳ ಗಾಜುಗಳಿಗೆ ತಾಗುತ್ತವೆ ಎಂದು ವಿಮಾನನಿಲ್ದಾಣದ ನಿರ್ವಹಣಾ ಮೂಲಗಳು ತಿಳಿಸಿವೆ.

6 ದೀಪಗಳಿಗೆ ಹಾನಿ: ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ದುಬಾೖ-ಮಂಗಳೂರು ವಿಮಾನವು ಲ್ಯಾಂಡ್‌ ಆಗುವ ವೇಳೆ ಸಂಭವಿಸಿದ ಈ ಘಟನೆಯಿಂದ ಸುಮಾರು 6ಕ್ಕೂ ಅಧಿಕ ರನ್‌ವೇ ಮಾರ್ಗಸೂಚಿ ದೀಪಗಳು ಪುಡಿಯಾಗಿವೆ. ಆ ನಂತರ, ಆಬುಧಾಬಿ, ಬೆಂಗಳೂರು ಸೇರಿದಂತೆ ಬೇರೆ ಕಡೆಗಳಿಂದ ಬಂದ ಸುಮಾರು ನಾಲ್ಕು ವಿಮಾನಗಳು ಅದೇ ರನ್‌ವೇಯಲ್ಲಿ ಮಂದ ಬೆಳಕಿನಲ್ಲಿಯೇ ಲ್ಯಾಂಡಿಂಗ್‌ ಆಗಿವೆ. ಆದರೆ ಬೆಳಗ್ಗೆ 8.30ರ ತನಕ ಈ ಘಟನೆ ಆಗಿರುವುದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೇ ಬಂದಿರಲಿಲ್ಲ. ಆ ಬಳಿಕವಷ್ಟೇ ಈ ರನ್‌ವೇ ಮಾರ್ಗಸೂಚಿ ದೀಪಗಳನ್ನು ಸರಿಪಡಿಸಲಾಗಿದೆ ಎನ್ನಲಾಗಿದೆ.

ಇತಿಹಾಸ ನೆನಪಿಸಿದ ವಿಮಾನ ದುರಂತ: 2010ರಲ್ಲಿ ದುಬಾೖಯಿಂದ ಮಂಗಳೂರಿಗೆ ಬಂದಿದ್ದ ಏರ್‌ ಇಂಡಿಯಾ ಸಂಸ್ಥೆಗೆ ಸೇರಿದ ವಿಮಾನವು ಬೆಳಗ್ಗೆ ಸುಮಾರು 6 ಗಂಟೆಗೆ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ, ಪೈಲಟ್‌ನ ನಿಯಂತ್ರಣ ತಪ್ಪಿ ರನ್‌ವೇಯಿಂದ ಮುಂದಕ್ಕೆ ಚಲಿಸಿ ಬಹುದೊಡ್ಡ ದುರಂತ ಸಂಭವಿಸಿತ್ತು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.