ಎಚ್‌ಐವಿ ಸೋಂಕಿತರಿಗೆ 2ನೇ ಕಾನೂನು ಸಲಹಾ ಕೇಂದ್ರ ಆರಂಭ


Team Udayavani, Jul 19, 2017, 2:20 AM IST

HIV.jpg

ಮಹಾನಗರ: ಎಚ್‌ಐವಿ ಸೋಂಕಿತರಿಗೆ ಕಾನೂನು ರಕ್ಷಣೆ ನೀಡುವಲ್ಲಿ ಮಂಗಳೂರಿನ 2ನೇ ಕಾನೂನು ಸಲಹಾ ಕೇಂದ್ರ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯ ಆ್ಯಂಟಿ ರಿಟ್ರೋವೈರಲ್‌ ಥೆರಪಿ (ಎಆರ್‌ಟಿ) ಕೇಂದ್ರದಲ್ಲಿ ಆರಂಭಗೊಂಡಿದೆ. ಸಂಬಂಧಪಟ್ಟ ರೋಗಿಗಳು ಪ್ರತಿ ಶನಿವಾರ ಕಾನೂನು ತಜ್ಞರಿಂದ ಮಾಹಿತಿ ಪಡೆಯಬಹುದು.

ನಗರದ ವೆನಾÉಕ್‌ ಆಸ್ಪತ್ರೆಯಲ್ಲಿ ಈಗಾಗಲೇ ಒಂದು ಕೇಂದ್ರ ಕಾರ್ಯಾಚರಿಸುತ್ತಿದೆ. ಕೆಎಂಸಿ ಆಸ್ಪತ್ರೆಯಲ್ಲಿ ರಾಜ್ಯ ಏಡ್ಸ್‌ ಪ್ರಿವೆನ್ಶನ್‌ ಸೊಸೈಟಿ (ಕೆಎಸ್‌ಎಪಿಎಸ್‌) ವತಿಯಿಂದ ಕಾರ್ಯಾಚರಿಸುತ್ತಿರುವ ಸಾರ್ವಜನಿಕ- ಖಾಸಗಿ ಸಹಭಾಗಿತ್ವ (ಪಿಪಿಪಿ)ದ ಏಕೈಕ ಎಆರ್‌ಟಿ ಕೇಂದ್ರದಲ್ಲಿ  ಸುಮಾರು ಒಂದು ಸಾವಿರ ರೋಗಿಗಳು ಔಷಧೋಪಚಾರ ಪಡೆಯುತ್ತಿದ್ದಾರೆ. ಆದರೆ ಇಲ್ಲಿ ಕಾನೂನು ಸಲಹೆ ಲಭ್ಯವಿರಲಿಲ್ಲ. ಈ ನಿಟ್ಟಿನಲ್ಲಿ ಕೆಎಂಸಿ ಆಸ್ಪತ್ರೆಯು ಕಾನೂನು ಸೇವಾ ಕೇಂದ್ರಕ್ಕಾಗಿ ಬೇಡಿಕೆ ಇಟ್ಟಿತ್ತು. 

ಪ್ರಸ್ತುತ ಬೇಡಿಕೆಗೆ ಸ್ಪಂದನೆ ಎಂಬಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಜಿಲ್ಲಾ ಏಡ್ಸ್‌ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ (ಡ್ಯಾಪ್ಕೋ) ಸಹಯೋಗದೊಂದಿಗೆ ಆಸ್ಪತ್ರೆಯ 2ನೇ ಮಹಡಿಯಲ್ಲಿ ಕೇಂದ್ರ ಕಾರ್ಯಾಚರಿಸಲಿದೆ. 

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಆನಂದ್‌ ವೇಣುಗೋಪಾಲ್‌ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಅವರು ಕೇಂದ್ರವನ್ನು ಉದ್ಘಾಟಿಸಿದ್ದಾರೆ. 

ಬೆಳಗ್ಗೆ 10 ರಿಂದ 2ರ ವರೆಗೆ ಕೇಂದ್ರದಲ್ಲಿ  ಪ್ರತಿ ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಎಚ್‌ಐವಿ ರೋಗಿಗಳು ಕಾನೂನು ಸಲಹೆ ಪಡೆಯಬಹುದು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಈಗಾಗಲೇ ತರಬೇತಿ ಪಡೆದ ಪ್ಯಾನಲ್‌ ನ್ಯಾಯವಾದಿ ಎಚ್‌.ವಿ. ರಾಘವೇಂದ್ರ ಅವರು ಸಲಹೆ ನೀಡುವರು.

ಕಾನೂನಿನ ರಕ್ಷಣೆ
ಎಚ್‌ಐವಿ ರೋಗಿಗಳೆಂದರೆ ಅವರಿಗೆ ಹೆಚ್ಚಿನ ಸಂದರ್ಭಗಳಲ್ಲಿ ಮಾನಸಿಕ, ದೈಹಿಕ ಕಿರುಕುಳ ಸಿಗುವ ಸಾಧ್ಯತೆ ಇರುತ್ತದೆ. ತಾವು ಕೆಲಸ ಮಾಡುವ ಸ್ಥಳ, ಸಾಮಾಜಿಕ ಬದುಕು ಸೇರಿದಂತೆ ತಮ್ಮ ಕುಟುಂಬದಿಂದಲೂ ತಾತ್ಸಾರಕ್ಕೆ ಗುರಿಯಾಗಿರಬಹುದು. ಎಷ್ಟೋ ಸಂದರ್ಭಗಳಲ್ಲಿ ಮನೆಯಿಂದ ಹೊರ ಹಾಕುವ ಘಟನೆಗಳೂ ನಡೆಯುತ್ತವೆ. ಈ ಸಂದರ್ಭದಲ್ಲಿ ರೋಗಿಗಳು ತಮಗೆ ಯಾರೂ ಇಲ್ಲ ಎಂದು ಖನ್ನತೆಗೆ ಒಳಗಾಗುತ್ತಾರೆ. ಜತೆಗೆ ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಯೂ ಇರುತ್ತದೆ. ಅಂಥವರಿಗೆ ಕಾನೂನಿನ ರಕ್ಷಣೆ ನೀಡಿ ಅವರ ಹಕ್ಕನ್ನು ಪಡೆದುಕೊಳ್ಳುವಲ್ಲಿ ಈ ಕೇಂದ್ರ ನೆರವಾಗಲಿದೆ.

ಜತೆಗೆ ಎಚ್‌ಐವಿ ತಪಾಸಣೆ, ಆಪ್ತ ಸಮಾಲೋಚನೆ, ಔಷಧ ಮೊದಲಾದ ಸೌಲಭ್ಯಗಳನ್ನು ಕೆಎಸ್‌ಎಪಿಎಸ್‌ ಉಚಿತವಾಗಿ ಒದಗಿಸಲಿದೆ. ಆಸ್ಪತ್ರೆಯ ಎಆರ್‌ಟಿ ಕೇಂದ್ರದ ನೋಡೆಲ್‌ ಅಧಿಕಾರಿ ಡಾ| ಜಾನ್‌ ರಾಂಪುರಂ ಅವರ ವಿಶೇಷ ಮುತುವರ್ಜಿಯಿಂದ ಈ ಕೇಂದ್ರ ಆಸ್ಪತ್ರೆಗೆ ಲಭಿಸಿದೆ. ಸಂಬಂಧಪಟ್ಟವರ ಇದರ ಪ್ರಯೋಜನ ಪಡೆಯಬಹುದು ಎನ್ನುತ್ತವೆ ಆಸ್ಪತ್ರೆಯ ಮೂಲಗಳು.

ಉಚಿತ ಕಾನೂನು ಸಲಹೆ 
ಆಸ್ಪತ್ರೆಯಲ್ಲಿ ಎಆರ್‌ಟಿ-ಐಸಿಟಿಸಿ ಕೇಂದ್ರಗಳು ಕಾರ್ಯಾಚರಿಸುತ್ತಿದ್ದರೂ, ರೋಗಿಗಳಿಗೆ ಕಾನೂನು ರಕ್ಷಣೆ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಕಾನೂನು ಸಲಹಾ ಕೇಂದ್ರವನ್ನು ಒದಗಿಸುವಂತೆ ನಾವು ಸಂಬಂಧಪಟ್ಟರಿಗೆ ಮನವಿ ಮಾಡಿದ್ದೆವು. ಇದೀಗ ಕೇಂದ್ರ ಉದ್ಘಾಟನೆಗೊಂಡಿದ್ದು, ಆಸಕ್ತರು ಉಚಿತ ಕಾನೂನು ಸಲಹೆ ಪಡೆಯಬಹುದು. 
– ಡಾ| ರಾಜಾರಾಮ್‌ ರೈ, ಸೀನಿಯರ್‌ ಮೆಡಿಕಲ್‌ ಆಫೀಸರ್‌ ಎಆರ್‌ಟಿ ಸೆಂಟರ್‌, ಕೆಎಂಸಿ ಅತ್ತಾವರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.