“ಮಾಧ್ಯಮ ಜನತೆಯ ಭಾವನೆಗಳಿಗೆ ಧ್ವನಿಯಾಗಲಿ’
Team Udayavani, Jul 19, 2017, 2:55 AM IST
ಮಹಾನಗರ: ಮಾಧ್ಯಮಗಳು ಜನತೆಯ ಭಾವನೆಗಳಿಗೆ ಧ್ವನಿಯಾಗಬೇಕೆಂದು ಲೇಖಕಿ ಡಾ| ಚಂದ್ರಕಲಾ ನಂದಾವರ ಅವರು ಹೇಳಿದ್ದಾರೆ.
ಸಂದೇಶ ಕಲಾ ಮತ್ತು ಶಿಕ್ಷಣ ಪ್ರತಿಷ್ಠಾನವು ಕೆನರಾ ಕಮ್ಯುನಿಕೇಶನ್ ಸೆಂಟರ್, ದಾಯಿjವರ್ಲ್ಡ್ ವೀಕ್ಲಿಯ ಸಹಯೋಗದಲ್ಲಿ ಏರ್ಪಡಿಸಿರುವ ಪತ್ರಿಕೋದ್ಯಮ ಶಿಬಿರವನ್ನು ಅವರು ಸೋಮವಾರ ಉದ್ಘಾಟಿಸಿದರು.
ಪತ್ರಕರ್ತರು ಪರಿಪೂರ್ಣ ವೃತ್ತಿಪರತೆಯನ್ನು ಹೊಂದಿರಬೇಕು. ಈ ಕಾರಣ ದಿಂದ ಪತ್ರಿಕಾರಂಗವನ್ನು ಪ್ರಜಾತಂತ್ರದ ನಾಲ್ಕನೆಯ ಆಯಾಮವೆಂದು ಗೌರವಿಸಲಾಗುತ್ತಿದೆ. ಪತ್ರಿಕೋದ್ಯಮದ ಕುರಿತಾದ ಜಾಗೃತಿಯನ್ನು ಮೂಡಿಸುವ ಇಂತಹ ಶಿಬಿರಗಳು ಸ್ವಾಗತಾರ್ಹ ಎಂದು ಸಂಘಟಕರನ್ನು ಅಭಿನಂದಿಸಿದರು.
ಸಂದೇಶದ ನಿರ್ದೇಶಕ ಫಾ| ವಿಕ್ಟರ್ ವಿಜಯ್ ಲೋಬೋ ಅಧ್ಯಕ್ಷತೆ ವಹಿಸಿದ್ದರು. ಆಗಸ್ಟ್ 5ರವರೆಗೆ ಶಿಬಿರ ನಡೆಯಲಿದೆ. 53 ಶಿಬಿರಾರ್ಥಿಗಳನ್ನು ಆರಿಸಲಾಗಿದೆ. ಮಾಧ್ಯಮ ಕ್ಷೇತ್ರದ ತಜ್ಞರು ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ ಎಂದು ತಿಳಿಸಿದರು. ಸ್ಟಾನಿ ಬೇಳ ಉಪಸ್ಥಿತರಿದ್ದರು.
ಸಿಸಿಸಿಯ ನಿರ್ದೇಶಕ ಫಾ| ರಿಚರ್ಡ್ ಡಿ’ ಸೋಜಾ ಸ್ವಾಗತಿಸಿದರು. ಪ್ರಾಯೋಗಿಕ ಪತ್ರಿಕೆಗಳ ರಚನೆ ಸಹಿತ ಮುದ್ರಣ- ವಿದ್ಯುನ್ಮಾನ ಮಾಧ್ಯಮಗಳ ಬಗ್ಗೆ ಸಮಗ್ರ ತರಬೇತಿ ಶಿಬಿರದಲ್ಲಿ ನೀಡಲಾಗುವುದೆಂದು ವಿವರಿಸಿದರು. ಸಂದೇಶದ ಸಹಾಯಕ ನಿರ್ದೇಶಕ ವಿಕ್ಟರ್ ಕ್ರಾಸ್ತಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ