ದ.ಕ. ಜಿಲ್ಲೆಗೆ ಸಕ್ಕರೆ, ಸನ್‌ ಫ್ಲವರ್; ಉಡುಪಿಗೆ ಸಕ್ಕರೆ, ಪಾಮೋಲಿನ್‌


Team Udayavani, Jul 21, 2017, 8:40 AM IST

ut.jpg

ಮಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ರಾಜ್ಯದ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಆಗಿ ವಿತರಣೆಯಾಗದೆ ಬಾಕಿ ಉಳಿದಿರುವ ಸಕ್ಕರೆ, ಸನ್‌ ಫ್ಲವರ್ ಆಯಿಲ್‌ ಮತ್ತು ಪಾಮೋ ಲಿನ್‌ ದಾಸ್ತಾನನ್ನು ವಿಲೇವಾರಿ ಮಾಡುವ ನಿಟ್ಟಿ ನಲ್ಲಿ ಈ ತಿಂಗಳಲ್ಲಿ ಬಿಪಿಎಲ್‌ ಕಾರ್ಡುಗಳಿಗೆ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಸಕ್ಕರೆ ಮತ್ತು ಸನ್‌ ಫ್ಲವರ್ ಆಯಿಲ್‌ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಕ್ಕರೆ ಮತ್ತು ಪಾಮೋಲಿನ್‌ ಎಣ್ಣೆಯನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. 

ಬಿಪಿಎಲ್‌ ಕಾರ್ಡುಗಳಿಗೆ ಸಕ್ಕರೆ, ಪಾಮೋಲಿನ್‌ ಮತ್ತು ಉಪ್ಪು ವಿತರಣೆಯನ್ನು ಎರಡು ತಿಂಗಳ ಹಿಂದೆ ನಿಲ್ಲಿಸ ಲಾಗಿತ್ತು. ಉಪ್ಪು ಬೇಡಿಕೆ ಇಲ್ಲದ ಕಾರಣ ಸಕ್ಕರೆಗೆ ಕೇಂದ್ರ ಸರಕಾರ ಸಬ್ಸಿಡಿ ನಿಲ್ಲಿಸಿದ್ದರಿಂದ ಹಾಗೂ ಪಾಮೋಲಿನ್‌ ಮಾರಾಟದಲ್ಲಿ ಅವ್ಯವಹಾರ ಆರೋಪ ಕೇಳಿ ಬಂದ ಕಾರಣ ಇವುಗಳ ವಿತರಣೆಯನ್ನು ನಿಲ್ಲಿಸಲಾಗಿತ್ತು. ಈಗ ದಾಸ್ತಾನನ್ನು ಖಾಲಿ ಮಾಡುವ ಉದ್ದೇಶದಿಂದ ಈ ಒಂದು ತಿಂಗಳ ಮಟ್ಟಿಗೆ ಮಾತ್ರ ಸಕ್ಕರೆ, ಪಾಮೋಲಿನ್‌ ಮತ್ತು ಸನ್‌ ಫÉವರ್‌ ಆಯಿಲನ್ನು ಕಾರ್ಡುದಾರರಿಗೆ ವಿತರಣೆ ಮಾಡಲು ನಿರ್ಧರಿಸ ಲಾಗಿದೆ ಎಂದವರು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಪಾಮೋಲಿನ್‌ ಎಣ್ಣೆಯ ಲಕೋಟೆಯಲ್ಲಿ “ಬೆಸ್ಟ್‌ ಫೋರ್‌ ಯೂಸ್‌ ಬಿಫೋರ್‌ 4 ಮಂತ್ಸ್’ ಎಂದು ಬರೆಯ ಲಾಗಿ ದ್ದರೂ ಅದನ್ನು ಬಳಕೆ ಮಾಡಬಹುದೆಂದು ಬೆಂಗ ಳೂರಿನ ಸೆಂಟ್ರಲ್‌ ಲ್ಯಾಬ್‌ನಲ್ಲಿ ಪರೀಕ್ಷಿಸಿ ಶಿಫಾರಸು ಪತ್ರ ಪಡೆಯ ಲಾಗಿದೆ. ಹಾಗೆಯೇ ಜಿಲ್ಲಾ ಮಟ್ಟದಲ್ಲಿ ಟೆಸ್ಟ್‌ ಮಾಡಿ ವಿತರಿಸಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. 

ಕಾರ್ಡ್‌ಗೆ ಮನೆಯಿಂದಲೇ ತಿದ್ದುಪಡಿ
ಹೊಸ ಪಡಿತರ ಚೀಟಿಗಳ ಮುದ್ರಣ ಕಾರ್ಯ ಪ್ರಗತಿ ಯಲ್ಲಿದೆ. ಮುಂದೆ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಕಚೇರಿ ಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಮನೆ ಯಲ್ಲಿಯೇ ಕುಳಿತು ಮೊಬೈಲ್‌ ಫೋನ್‌ನಲ್ಲಿ ಸರಿ ಪಡಿಸುವ ವ್ಯವಸ್ಥೆ ಬರಲಿದೆ. ಇದರ ಸಾಫ್ಟ್‌ ವೇರ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಶೀಘ್ರ  ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಕರ್ನಾಟಕ ಬಾವುಟ-ತಪ್ಪೇನಿದೆ
ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಬಾವುಟ ರಚಿಸುವುದರಲ್ಲಿ ತಪ್ಪೇನಿದೆ? ದೇಶದ ಸಂವಿಧಾನದ ಆಶಯಗಳಿಗೆ ಪೂರಕ ವಾದ ಧ್ವಜ ಬರುವುದಾದರೆ ಅದನ್ನು ಬೇಡ ಎನ್ನುವುದೇಕೆ ಎಂದು ಸಚಿವ ಯು.ಟಿ. ಖಾದರ್‌ ಪ್ರಶ್ನಿಸಿದ್ದಾರೆ. 
ಏನಿದ್ದರೂ ಈಗ ಯಾವುದೂ ಅಂತಿಮಗೊಂಡಿಲ್ಲ. ಈಗ ಸಮಿತಿಯೊಂದನ್ನು ರಚಿಸಲಾಗಿದೆ. ಅಧ್ಯಯನ ಸಮಿತಿ ವರದಿ ಬಂದ ಬಳಿಕ ನೋಡೋಣ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಹರೀಶ್‌ ಕುಮಾರ್‌, ಮೆಲ್ವಿನ್‌ ಡಿ’ಸೋಜಾ, ಮಲಾರ್‌ ಮೋನು, ಚಂದ್ರಹಾಸ ಕರ್ಕೇರಾ, ಹರ್ಷರಾಜ್‌ ಮುಧ್ಯ, ಸದಾಶಿವ ಉಳ್ಳಾಲ, ಎನ್‌.ಎಸ್‌. ಕರೀಂ, ಸಂತೋಷ್‌ ಕುಮಾರ್‌ ಶೆಟ್ಟಿ, ನಝೀರ್‌ ಬಜಾಲ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.