4 ದಶಕದ ಹಿಂದೆ ಕ್ರೈಸ್ತ ಮತವನ್ನಪ್ಪಿದ ಹಿಂದೂ ಕುಟುಂಬ ಮಾತೃಧರ್ಮಕ್ಕೆ


Team Udayavani, Jul 25, 2017, 11:30 AM IST

Religion-24-7.jpg

ಮಂಗಳೂರು: ನಾಲ್ಕುದಶಕ ಹಿಂದೆ ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಗುರುಪುರದ ವಜ್ರದೇಹಿ ಮಠದಲ್ಲಿ ಸೋಮವಾರ ಹಿಂದೂ ಧರ್ಮಕ್ಕೆ ಮರಳಿದೆ. ಹಿಂದೂ ಜಾಗರಣ ವೇದಿಕೆಯ ಮುಖಂಡರ ನೇತೃತ್ವದಲ್ಲಿ ಸೀಮಿತ ಜನರ ಸಮಕ್ಷಮದಲ್ಲಿ ಜರಗಿದ ಪೂರಕ ವಿಧಿವಿಧಾನಗಳಿಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮತಾಂತರ ಬಳಿಕ ಅರುಣ್‌ ಮೊಂತೆರೋ ತನ್ನ ಹೆಸರನ್ನು ಅರುಣ್‌ ಪೂಜಾರಿ ಎಂದು, ಪತ್ನಿ ಸುನೀತಾ ಸಂಗೀತಾ ಆಗಿ, ಆವರ ತಾಯಿ ಐಡಾ ಥಾಮಸ್‌ ಗೌರಿ ಪೂಜಾರ್ತಿಯಾಗಿ, ಅರುಣ್‌ ಅವರ ಇಬ್ಬರು ಪುತ್ರರು ಅಜಯ್ ಹಾಗೂ ಅನೀಶ್‌ ಪೂಜಾರಿ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಅರುಣ್‌ ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು, ತಮ್ಮ ಕುಟುಂಬದೊಂದಿಗೆ ಮಂಗಳೂರಿನ ಪದವಿನಂಗಡಿಯಲ್ಲಿ ನೆಲೆಸಿದ್ದಾರೆ. ಮಾತೃಧರ್ಮಕ್ಕೆ ಮರಳಿದ ಕುಟುಂಬದ ಸದಸ್ಯರಿಗೆ ಶುದ್ಧಿ ಕಲಶ ಪ್ರೋಕ್ಷಣೆ ನಡೆಯಿತು. ಭವಿಷ್ಯದಲ್ಲಿ ಪವಮಾನ ಪ್ರಾಯಶ್ಚಿತ ಹೋಮ ಹಾಗೂ ಗಣಪತಿ ಹೋಮ ನಡೆಯಲಿದೆ. ಜತೆಗೆ ಕಾನೂನಾತ್ಮಕ ತೊಡಕುಗಳ ನಿವಾರಣೆಗೆ ಕೂಡ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀ ರಾಜಶೇಖರಾನಂದ ಸ್ವಾಮೀಜಿ ತಿಳಿಸಿದ್ದಾರೆ.

‘ಕ್ರೈಸ್ತ ಧರ್ಮಕ್ಕೆ ಮತಾಂತರದ ಬಳಿಕ ಅರುಣ್‌ ಕುಟುಂಬ ಹಲವಾರು ಸಮಸ್ಯೆ ಎದುರಿಸಬೇಕಾಗಿ ಬಂತು. ಮೂರು ತಿಂಗಳ ಹಿಂದೆ ಅರುಣ್‌ ಹಿಂದೂ ಜಾಗರಣ ವೇದಿಕೆಯ ಸದಸ್ಯರನ್ನು ಸಂಪರ್ಕಿಸಿದ್ದು, ಸಂಘಟನೆ ಮುಖಂಡರು ನನ್ನಲ್ಲಿ ವಿಷಯ ತಿಳಿಸಿದ್ದರು. ಯಾವುದೇ ಕಾರಣಕ್ಕೂ ಬಲವಂತದ ಮತಾಂತರಕ್ಕೆ ಅವಕಾಶ ನೀಡಬಾರದು, ಅವರ ಇಚ್ಛೆಯಂತೆ ಆಗುವುದಾದರೆ ಆಗಲಿ ಎಂದು ಸಂಘಟನೆ ಮುಖಂಡರಿಗೆ ನಾನು ತಿಳಿಸಿದ್ದೆ’ ಎಂದು ವಿವರಿಸಿದ್ದಾರೆ. ಅರುಣ್‌ ಮೊಂತೆರೋ ಅವರು ಕಳೆದ ಸುಮಾರು 10 ವರ್ಷಗಳಿಂದ ಗುರುಪುರ ಮಠದ ಜತೆ ಸಂಪರ್ಕ ಇರಿಸಿಕೊಂಡಿದ್ದಾರೆ. ಹಿಂದೂ ಜಾಗರಣ ವೇದಿಕೆ ಪದವಿನಂಗಡಿ ಘಟಕದ ಜತೆ ಕೂಡ ಅವರು ಉತ್ತಮ ಸಂಬಂಧ ಹೊಂದಿದ್ದು, ಅವರ ಜತೆ ತಾನು ಮತ್ತೆ ಹಿಂದೂ ಧರ್ಮಕ್ಕೆ ಮರಳುವ ಇಚ್ಛೆ ವ್ಯಕ್ತಪಡಿಸಿದ್ದರು.

ಅರುಣ್‌ ಅವರ ತಾಯಿ ಐಡಾ ಥಾಮಸ್‌ ಮೂಲತಃ ಕಾಸರಗೋಡಿನವರಾಗಿದ್ದು ಹಿಂದೂ ಕುಟುಂಬದಲ್ಲಿ ಜನಿಸಿದ್ದು, 40 ವರ್ಷ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಮೂರು ತಿಂಗಳ ಹಿಂದೆ ಅರುಣ್‌ ತಮ್ಮ ಸಂಘಟನೆ ಸಂಪರ್ಕಿಸಿ ಹಿಂದೂ ಆಗುವ ಹಂಬಲ ವ್ಯಕ್ತಪಡಿಸಿದ್ದರು. ಸದ್ಯದ ಪರಿಸ್ಥಿತಿ ಸರಿ ಇಲ್ಲ ಎಂಬ ಕಾರಣಕ್ಕೆ ಒಂದಷ್ಟು ಕಾಲ ನಾವು ಮುಂದೂಡಿದರೂ ಪದೇ ಪದೇ ಅವರ ಮನವಿಯಿಂದಾಗಿ ವಜ್ರದೇಹಿ ಸ್ವಾಮೀಜಿಯವರನ್ನು ಸಂಪರ್ಕಿಸಿ ಅವರ ಮಾರ್ಗದರ್ಶನದಂತೆ ಅರುಣ್‌ ಕುಟುಂಬವನ್ನು ಮರಳಿ ಹಿಂದೂ ಧರ್ಮಕ್ಕೆ ಸ್ವೀಕರಿಸಲಾಗಿದೆ ಎಂದು ಹಿಂ.ಜಾ.ವೇ. ಜಿಲ್ಲಾ ಕಾರ್ಯದರ್ಶಿ ಶರತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.