“ಅಲ್ಪಸಂಖ್ಯಾಕ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಕಲ ವ್ಯವಸ್ಥೆ’


Team Udayavani, Aug 11, 2017, 7:20 AM IST

1008ule7.jpg

ಉಳ್ಳಾಲ: ಅಲ್ಪಸಂಖ್ಯಾಕ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ದೊರೆಯಬೇಕು ಅನ್ನುವ ದೃಷ್ಟಿಯಿಂದ  ಕೇಂದ್ರ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಭವಿಷ್ಯದ ಚಿಂತನೆ ಮುಂದಿಟ್ಟುಕೊಂಡು  ಪ್ರಧಾನಿಯವರು ಜಾರಿಗೊಳಿಸಿದ ಯೋಜನೆಯಿಂದ ಅಲ್ಪಸಂಖ್ಯಾಕರ ಅಭಿವೃದ್ಧಿಯಾಗಲಿದೆ ಎಂದು  ಬಿಜೆಪಿ ಕ್ಷೇತ್ರ ಅಧ್ಯಕ್ಷ ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌ ಹೇಳಿದರು.

ಅವರು ಬೋಳಿಯಾರು ಸಭಾಂಗಣದಲ್ಲಿ ಗುರುವಾರ  ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಮುಸ್ಲಿಂ ಧಾರ್ಮಿಕ  ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸೆಸೆಲ್ಸಿಯಲ್ಲಿ  ಶೇ. 75ರಷ್ಟು  ಅಂಕ ಪಡೆದ ಅಲ್ಪಸಂಖ್ಯಾಕ ವಿದ್ಯಾರ್ಥಿಗಳಿಗೆ  ಉನ್ನತ ಶಿಕ್ಷಣ ಪಡೆಯಲು ಸರಕಾರದಿಂದ ಬೇಕಾದ ಸಕಲ ವ್ಯವಸ್ಥೆಯನ್ನು ಒದಗಿಸುವ ಆದೇಶ ಹೊರಡಿಸಿದ್ದಾರೆ. ಪದವಿ ಪಡೆದ ವಿದ್ಯಾರ್ಥಿನಿ ಮದುವೆಗೆ ರೂ. 51,000 ಸಹಾಯಧನ ನೀಡುವ ಘೋಷಣೆಯನ್ನು ಹೊರಡಿಸಿದ್ದಾರೆ ಎಂದರು.  

ಅಲ್ಪಸಂಖ್ಯಾಕರ ಮತ ಬೇಕು. ಆದರೆ  ಅವರು ಮೇಲೆ ಬರಬಾರದು ಅನ್ನುವ ದೃಷ್ಟಿಯಲ್ಲಿ ಕಾಂಗ್ರೆಸ್‌ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಧಾರ್ಮಿಕ ಮುಖಂಡ  ಎ.ಬಿ. ಹನೀಫ್ ನಿಝಾಮಿ ಮಾತನಾಡಿ, ದೇಶಾದ್ಯಂತ ಅಲ್ಪಸಂಖ್ಯಾಕರಿಗೆ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಜನಪ್ರತಿನಿಧಿಗಳು ಅದನ್ನು ತಲುಪಿಸುವಲ್ಲಿ ವಿಫಲವಾಗಿದ್ದಾರೆ ಎಂದರು.  

ರಮ್ಜಾನ್‌  ಸಂದರ್ಭದಲ್ಲಿ ಅಸೈಗೋಳಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸಿತ್ತು.  ಪಂಚಾಯತ್‌ನ ಸಹಕಾರವೂ ದೊರೆತಿರಲಿಲ್ಲ.  ಆದರೆ ವಾಟ್ಸಪ್‌  ಗ್ರೂಪ್‌ನಲ್ಲಿ ಸಮಸ್ಯೆ ಬಗ್ಗೆ ತಿಳಿಸಿದ ತತ್‌ಕ್ಷಣ ಬಿಜೆಪಿ ಮುಖಂಡರು  ಟ್ಯಾಂಕರ್‌ ಮೂಲಕ ನೀರು ಒದಗಿಸುವ ಮೂಲಕ ಇಡೀ ಜನರಿಗೆ ಸಹಕರಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಅಲ್ಪಸಂಖ್ಯಾಕ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಫಝಲ್‌  ಅಸೈಗೋಳಿ   ಮಾತನಾಡಿದರು.ಬಂಟ್ವಾಳ ಬಿಜೆಪಿ ಅಧ್ಯಕ್ಷ ರಾಮದಾಸ್‌ ಶೆಟ್ಟಿ,  ಬಿಜೆಪಿ ಮುಖಂಡ ರಾಜೇಶ್‌ ನಾೖಕ್‌ ಉಳೇಪಾಡಿಗುತ್ತು, ಬಿಜೆಪಿ ಮುಖಂಡರಾದ  ಟಿ.ಜಿ. ರಾಜಾರಾಂ ಭಟ್‌, ಜಿಲ್ಲಾ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ಜೋಯಲ್‌ ಡಿ’ಸೋಜಾ, ಬೋಳಿಯಾರು ಗ್ರಾಮ ಪಂಚಾಯತ್‌ ಅಧ್ಯಕ್ಷ  ಸತೀಶ್‌ ಆಚಾರ್ಯ,   ಅಲ್ಪಸಂಖ್ಯಾಕ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ| ಮುನೀರ್‌ ಬಾವ,  ಅಝೀಝ್ ಫ್ರಾನ್ಸಿ,   ಹನೀಫ್‌ ಮಿಝಾಮಿ,  ಸಿದ್ದೀಖ್‌ ಇಮಾಮಿ,  ಉಸ್ಮಾನ್‌ ಮದನಿ, ಹೈದರ್‌ ಸಅದಿ, ಗೋಪಾಲ್‌ ಇರಾ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಪ್ರಶಾಂತ್‌ ಗಟ್ಟಿ,  ಜಗದೀಶ್‌ ಆಳ್ವ  ಕುವೆತ್ತಬೈಲ್‌,  ಬಿಜೆಪಿ ಕ್ಷೇತ್ರ  ಕಾರ್ಯದರ್ಶಿ ಮನೋಜ್‌ ಆಚಾರ್ಯ,  ಖಲಂದರ್‌ ಅಸೈಗೋಳಿ,  ಎಪಿಎಂಸಿ ಸದಸ್ಯ ವಿಠಲ್‌,  ನಿಝಾಮುದ್ದೀನ್‌ ಸಅದಿ, ಮಂಗಳೂರು ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಕಾರ್ಯದರ್ಶಿ ಮುನೀರ್‌ ಮಾಸ್ಟರ್‌,  ಪ್ರೇಮ್‌, ಚಂದ್ರ,  ಅಲ್ಪಸಂಖ್ಯಾಕ ಮೋರ್ಚಾದ ಕ್ಷೇತ್ರ ಅಧ್ಯಕ್ಷ ಅಶ್ರಫ್‌ ಹರೇಕಳ, ದೇವದಾಸ್‌ ಶೆಟ್ಟಿ, ಮುಸ್ತಾಫ ಕಲ್ಲಡ್ಕ  ಉಪಸ್ಥಿತರಿದ್ದರು.ಬೋಳಿಯಾರ್‌ ಗ್ರಾಮ ಪಂಚಾಯತ್‌ ಸದಸ್ಯ ಸಿ. ರಿಯಾಜ್‌ ಬೋಳಿಯಾರ್‌ ಕಾರ್ಯಕ್ರಮ ನಿರೂಪಿಸಿದರು.ಮಂಗಳೂರು ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಆಸYರ್‌ ಮುಡಿಪು ಸ್ವಾಗತಿಸಿ, ಖಜಾಂಚಿ ಶರೀಫ್‌ ಬೋಳಿಯಾರ್‌ ವಂದಿಸಿದರು.

ಇತಿಹಾಸ ನಿರ್ಮಿಸಿದ ಸಭೆ
ಬಿಜೆಪಿ ವತಿಯಿಂದ ಜಿಲ್ಲೆಯಲ್ಲಿ ಪ್ರಥಮವಾಗಿ ಆಯೋಜಿಸಲಾದ ಈ  ಸಭೆಯಲ್ಲಿ 100ಕ್ಕೂ ಅಧಿಕ  ಮುಸ್ಲಿಂ ಧಾರ್ಮಿಕ ಮುಖಂಡರು ಭಾಗಿಯಾಗುವ ಮೂಲಕ ಇತಿಹಾಸ ನಿರ್ಮಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.