ವಿನಾಯಕ ಚತುರ್ಥಿ ಬರುವ ಮುನ್ನವೇ ಬಾಳೆಹಣ್ಣು ದುಬಾರಿ


Team Udayavani, Aug 18, 2017, 11:53 PM IST

Banana-18-8.jpg

ಬಜಪೆ: ಗಣೇಶನ ಚತುರ್ಥಿಗೆ ಇನ್ನೂ ಎಂಟು ದಿನ ಇರುವಾಗಲೇ ಕದಳಿ ಬಾಳೆ ಹಣ್ಣಿನ ದರ ಗಗನಕ್ಕೇರಿದೆ. ಈಗಾಗಲೇ ಕೆ.ಜಿ.ಗೆ 100 ರೂ. ದಾಟಿದ್ದು, ಇದುವರೆಗಿನ ಹೆಚ್ಚಿನ ದರವಾಗಿದೆ. ಕೃಷಿಕರ ಅಂದಾಜಿನ ಪ್ರಕಾರ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಲಿದೆ. ಇದಕ್ಕೆ ಕಾರಣ ಕಳೆದ ಸಾಲಿನ ಮಳೆ ಕಡಿಮೆ ಎನ್ನಲಾಗುತ್ತಿದೆ. ಬಾಳೆ ಗಿಡಗಳಿಗೆ ನೀರು ಅವಶ್ಯ. ಆದರೆ ಕಳೆದ ಸಾಲಿನಲ್ಲಿ ಮಳೆ ಸಾಕಷ್ಟು ಕಡಿಮೆಯಾಗಿದ್ದರಿಂದ ಹೆಚ್ಚಿನ ಬಾಳೆ ಗಿಡಗಳು ನೀರಿಲ್ಲದೆ ಒಣಗಿದವು. ಇದರ ಪರಿಣಾಮ ಇಳುವರಿ ಮೇಲೆ ಆಗಿದೆ. ಮೇ ತಿಂಗಳಲ್ಲಿ ಸಾವಿರಾರು ಬಾಳೆಗಿಡ ಸತ್ತಿದ್ದು, ಆಗಸ್ಟ್‌ ತಿಂಗಳಲ್ಲಿ ಬಾಳೆಯ ಫಸಲು ಕಡಿಮೆಯಾಗಿದೆ. ಇದೂ ದರ ಹೆಚ್ಚಾಗಲು ಕಾರಣ ಎನ್ನುತ್ತಾರೆ ವ್ಯಾಪಾರಸ್ಥರು.

ನಾಗಪಂಚಮಿ, ಅಷ್ಟಮಿ. ಸೋಣ ತಿಂಗಳು, ಚೌತಿ ಹಬ್ಬಗಳೆಂದು ಒಂದರ ಹಿಂದೆ ಮತ್ತೂಂದು ಹಬ್ಬ ಸಾಲಾಗಿ ಬರುತ್ತಿವೆ. ಈ ಸಂದರ್ಭದಲ್ಲಿ ಬಾಳೆ ಹಣ್ಣಿಗೂ ಹೆಚ್ಚಿನ ಬೇಡಿಕೆ ಇರಲಿದೆ. ದೇವಸ್ಥಾನಗಳಲ್ಲಿ ಹೆಚ್ಚಾಗಿ ಕದಳಿ ಬಾಳೆ ಹಣ್ಣುಗಳನ್ನೇ ಬಳಸುವುದರಿಂದ ದರ ಏರಿಕೆಯಾಗಿದೆ.

ಮಾರುಕಟ್ಟೆಯಲ್ಲಿ ಒಂದು ವಾರದ ಹಿಂದೆ ಒಂದು ಕೆ.ಜಿ.ಗೆ ಕದಳಿ (ಪುತ್ತೂರು) 25 ರೂ ಇದ್ದರೆ, ಈಗ 75 ರೂ. ಆಗಿದೆ. ಕದಳಿ (ಅರಸೀಕೆರೆ) ಬಾಳೆಹಣ್ಣಿಗೆ 50 ರೂ. ಇದ್ದದ್ದು 85 ರೂ. ಗೆ ಏರಿದೆ. ನೇಂದ್ರ 30 ರೂ. ಇದ್ದದ್ದು ಈಗ 55 ರೂ., ಪಚ್ಚೆ ಬಾಳೆ 15 ರೂ. ಇದ್ದದ್ದು 50 ರೂ. ಗೆ ಏರಿಕೆಯಾಗಿದೆ. ಕೆಲವೆಡೆ ಕದಳಿ ಬಾಳೆಹಣ್ಣಿಗೆ ನೂರು ರೂ. ಗಳೂ ಇದೆ.

ಕೃಷಿಕರಲ್ಲಿ ಹೆಚ್ಚಿದ ಆಸಕ್ತಿ
ಬಾಳೆಹಣ್ಣಿಗೆ ಬೆಲೆ ಬಂದಿರುವುದು ಗ್ರಾಹಕರಿಗೆ ಕೊಂಚ ನಿರಾಸಕ್ತಿ ಮೂಡಿಸಿದ್ದರೂ ಕೃಷಿಕರಿಗೆ ಆಸಕ್ತಿ ಮೂಡಿಸಿದೆ. ಬಾಳೆ ಗಿಡಕ್ಕೆ ಬೇಡಿಕೆ ಹೆಚ್ಚಿದೆ. ಹಾಗಾಗಿ 15 ರೂ. ಗೆ ಇದ್ದ ಬಾಳೆಸಸಿಗೆ 25 ರೂ. ಆಗಿದೆ. ಎಲ್ಲ ಕೃಷಿಕರು ಬಾಳೆ ಕೃಷಿಯತ್ತ ಒಲವು ತೋರುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಮತ್ತೆ ದರ ಕಡಿಮೆಯಾಗಬಹುದು ಎನ್ನುತ್ತಾರೆ ಪಡುಪೆರಾರ ಕತ್ತಲ್‌ಸಾರ್‌ನ ಕೃಷಿಕ ಆಶೋಕ್‌ ಶೇಣವ.

ಕದಳಿಗೆ ಬೇಡಿಕೆ
ಸುಮಾರು 15 ರಿಂದ 20 ಬಾಳೆ ಗೊನೆಗಳು ಸದಾ ನೇತಾಡುತ್ತಿದ್ದವು. ಕದಳಿ ಬಾಳೆಹಣ್ಣಿಗೆ ಹೆಚ್ಚು ಬೇಡಿಕೆಯಿದೆ. ಅರಸೀಕೆರೆ, ಪುತ್ತೂರು, ತಮಿಳುನಾಡು ಕಡೆಯಿಂದ ಈ ಬಾಳೆಹಣ್ಣುಗಳು ಬರುತ್ತಿದ್ದವು.ಈಗ ಫಸಲು ಕಡಿಮೆಯಾಗಿದೆ. ತಮಿಳುನಾಡಿನ ಬಾಳೆಹಣ್ಣು ಬರುವುದಿಲ್ಲ. ಅರಸೀಕೆರೆ ಬಾಳೆಹಣ್ಣು 48 ರಿಂದ 78 ಕ್ಕೆ ಏರಿದೆ. ಈ ತನಕ ಕೆ.ಜಿ.ಗೆ 100 ರೂ.ನಂತೆ ಇದುವರೆಗೆ ಮಾರಿಲ್ಲ. ಇದೇ ಪ್ರಥಮ ಬಾರಿ ಎಂಬುದು ಬಜಪೆ ಮಾರುಕಟ್ಟೆಯ ವ್ಯಾಪಾರಿ ಫಾರೂಕ್‌ ಅಭಿಪ್ರಾಯ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.