ಇಂದು ನೆಹರೂ ಮೈದಾನದಲ್ಲಿ ಸಮಾವೇಶಕ್ಕೆ ಅನುಮತಿ


Team Udayavani, Sep 7, 2017, 8:30 AM IST

samavesha.jpg

ಮಹಾನಗರ : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಬಿಜೆಪಿ ಯುವಮೋರ್ಚಾದ ಮಂಗಳೂರು ಚಲೋ ಬೈಕ್‌ ರ್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸೆ. 7ರಂದು ಬೆಳಗ್ಗೆ 11ರಿಂದ 2 ಗಂಟೆಯೊಳಗೆ ನೆಹರೂ ಮೈದಾನದಲ್ಲಿ ಸಮಾವೇಶ ನಡೆಸಲು ಅವಕಾಶ ನೀಡಿದ್ದಾರೆ. 

ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರವೂ ಸಹಿತ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ನೆಹರೂ ಮೈದಾನದಲ್ಲಿ ಬುಧವಾರವೇ ಪೊಲೀಸರು ಬೀಡುಬಿಟ್ಟಿದ್ದಾರೆ. 

ಬಿಜೆಪಿ ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನರಲ್ಲಿ ಭಯದ ವಾತಾವರಣ ನಿವಾರಿಸಲು ಬುಧವಾರ ಬೆಳಗ್ಗೆ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ಪಥ ಸಂಚಲನ ನಡೆಸಿದರು. ನೆಹರೂ ಮೈದಾನದಲ್ಲಿ ಆರಂಭಗೊಂಡ ಜಾಥಾವು ಹಂಪನಕಟ್ಟ ವೃತ್ತ, ಲೈಟ್‌ಹೌಸ್‌ ಹಿಲ್‌ ರಸ್ತೆ, ಜ್ಯೋತಿ, ಬಲ್ಮಠ, ಕರಾವಳಿ ಸರ್ಕಲ್‌, ಕಂಕನಾಡಿ, ಫ‌ಳ್ನೀರ್‌ ಮೂಲಕ ಸಾಗಿ ಮತ್ತೆ ನೆಹರೂ ಮೈದಾನದಲ್ಲಿ ಸಮಾಪನಗೊಂಡಿತು. 

ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌ ಹಾಗೂ ಡಿಸಿಪಿ(ಕಾನೂನು ಹಾಗೂ ಸುವ್ಯವಸ್ಥೆ) ಹನುಮಂತರಾಯ ಅವರ ನೇತೃತ್ವದಲ್ಲಿ ನಡೆದ ಪಥ ಸಂಚಲನದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ, ಕೆಎಸ್‌ಆರ್‌ಪಿ ಹಾಗೂ ಇತರ ಪೊಲೀಸ್‌ ಸಿಬಂದಿ ಪಾಲ್ಗೊಂಡಿದ್ದರು. 

ಸಮಾವೇಶದಲ್ಲಿ ಪಾಲ್ಗೊಳ್ಳಲು ದ.ಕ.ಜಿಲ್ಲೆ ಸಹಿತ ವಿವಿಧ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವುದರಿಂದ ನಗರದಲ್ಲಿ ಸಂಚಾರ ವ್ಯತ್ಯಯದ ಜತೆಗೆ ದೂರದೂರಿನಿಂದ ಆಗಮಿಸಿದ ವಾಹನಗಳ ಪಾರ್ಕಿಂಗ್‌ ಸಮಸ್ಯೆಯೂ ತಲೆದೋರುವ ಸಾಧ್ಯತೆ ಇದೆ. 

ಈ ತನಕ ಸಂಚಾರ ಬದಲಾವಣೆಯ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಮಾವೇಶದ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ಸಂಚಾರ ಬದಲಾವಣೆ ಮಾಡಲಾಗುವುದು. ಈ ಕುರಿತು ಪೊಲೀಸ್‌ ಇಲಾಖೆ ಸನ್ನದ್ಧವಾಗಿದೆ ಎಂದು ಸಂಚಾರ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಈ ಮಧ್ಯೆ ಪುತ್ತೂ¤ರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳಲ್ಲಿ ಈಗಾಗಲೇ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

ರ್ಯಾಲಿ ನಡೆಸಿಯೇ ಸಿದ್ಧ
ರ್ಯಾಲಿಗೆ ಅವಕಾಶ ನೀಡದಿದ್ದರೂ ನಾವು ಬೆಳಗ್ಗೆ 11ಕ್ಕೆ ಜ್ಯೋತಿ ವೃತ್ತದಿಂದ ರ್ಯಾಲಿ ನಡೆಸುತ್ತೇವೆ. ಸುಮಾರು 10 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸುವರು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದಲೂ ಕಾರ್ಯಕರ್ತರು ಆಗಮಿಸುತ್ತಾರೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹರೀಶ್‌ ಪೂಂಜಾ ಉದಯವಾಣಿಗೆ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.