ಈ ಬಾರಿಯೂ ಕರಾವಳಿಯಲ್ಲಿ  ಮಳೆ ಕೊರತೆ


Team Udayavani, Sep 7, 2017, 9:40 AM IST

07-REP-11.jpg

ಮಂಗಳೂರು: ಕರಾವಳಿಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಹವಾಮಾನ ಇಲಾಖೆಯ ಅಂಕಿ-ಅಂಶ ಪ್ರಕಾರ ವಾಡಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಶೇ. 25ರಷ್ಟು ಮಳೆ ಕೊರತೆ ಇದೆ. ಉಡುಪಿ ಜಿಲ್ಲೆಯಲ್ಲೂ ಶೇ. 10ರಷ್ಟು ಮಳೆ ಕೊರತೆ ಇದ್ದು, ಒಟ್ಟಾರೆ ಕರಾವಳಿ ಪ್ರದೇಶದಲ್ಲಿ ಶೇ. 19ರಷ್ಟು ಮಳೆ ಕೊರತೆ ಎದ್ದು ಕಾಣುತ್ತಿದೆ.

ಜೂನ್‌ ತಿಂಗಳಿನಿಂದ ಆಗಸ್ಟ್‌ ತಿಂಗಳವರೆಗೆ ವಾಡಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,116 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇಲ್ಲಿಯವರೆಗೆ ದಾಖಲಾದದ್ದು ಕೇವಲ 2,387 ಮಿ.ಮೀ. ಮಾತ್ರ. ಕಳೆದ ವರ್ಷ 3,351 ಮಿ.ಮೀ. ಮಳೆ ಬೀಳಬೇಕಿತ್ತು. ಆದರೆ ದಾಖಲಾಗಿರುವುದು  2,550 ಮಿ.ಮೀ. ಮಾತ್ರ. ಇದುವರೆಗಿನ ಅಂಕಿ – ಅಂಶ ಪ್ರಕಾರ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಜೂನ್‌ ತಿಂಗಳಿನಿಂದ ಆಗಸ್ಟ್‌ ತಿಂಗಳ ವರೆಗೆ ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಕಡಿಮೆಯಾಗಿದೆ. ಕಳೆದ ವರ್ಷ 3,405 ಮಿ.ಮೀ. ಮಳೆಯಾಗಿತ್ತು. ಆದರೆ ಈ ವರ್ಷ ದಾಖಲಾದದ್ದು 2,627 ಮಿ.ಮೀ. ಮಾತ್ರ. ಆದರೆ ವಾಡಿಕೆ ಮಳೆಗಿಂತ ಸ್ವಲ್ಪ ಜಾಸ್ತಿ ಮಳೆಯಾಗಿದೆ. ವಾಡಿಕೆಯಂತೆ 2,401 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 3,405 ಮಿ.ಮೀ. ಮಳೆಯಾಗಿರುವುದು ತುಸು ಸಂತಸ ಮೂಡಿಸಿದೆ.

ಮಳೆ ಕೊರತೆಗೇನು ಕಾರಣ?
ಈ ಬಾರಿ ರಾಜ್ಯದಲ್ಲಿಯೇ ಮಳೆಯ ಪರಿಣಾಮ ಕಡಿಮೆ ಯಾಗಿದೆ. ರಾಜ್ಯದಲ್ಲಿ ಆಗಸ್ಟ್‌ ತಿಂಗಳಿನಲ್ಲಿ ದಾಖಲಾದ ಮಳೆಯಲ್ಲಿ ಶೇ.40ರಷ್ಟು ಕೊರತೆ ಉಂಟಾಗಿದೆ. ಸಮುದ್ರದಲ್ಲಿನ ಹವಾಮಾನ ಬದಲಾವಣೆಯಾದಾಗ ತೇವಾಂಶದ ಮೋಡ ಹೆಚ್ಚಾಗಿ ಮಳೆಯಾಗುತ್ತದೆ. ಆದರೆ ಈ ಬಾರಿ ಇಂತಹ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಇದರಿಂದಾಗಿ ಮೋಡಗಳು ಉತ್ತರದ ಭಾಗಕ್ಕೆ ಹೋದವು. ಯಾವಾಗಲೂ ಪಶ್ಚಿಮದಿಂದ ಪೂರ್ವಕ್ಕೆ ಮೋಡಗಳು ಹೋದಾಗ ಮಳೆಯ ಪ್ರಮಾಣ ಹೆಚ್ಚಾಗುತ್ತದೆ.

ಇನ್ನು ದೊಡ್ಡ ಮಳೆಯಾಗೋದು ಸಂಶಯ
ಹವಾಮಾನ ಇಲಾಖೆಯೇ ಹೇಳುವ ಪ್ರಕಾರ ಕರಾವಳಿ ಪ್ರದೇಶದಲ್ಲಿನ್ನು ದೊಡ್ಡ ಮಟ್ಟಿನ ಮಳೆಯಾಗುವುದು ಸಂಶಯ. ಸಾಮಾನ್ಯವಾಗಿ ಈ ಭಾಗದಲ್ಲಿ ಬೀಳುವ ಶೇ. 80ರಷ್ಟು ಮಳೆ ಈಗಾಗಲೇ ಬಿದ್ದಿದೆ. ಹೆಚ್ಚಾಗಿ ಜೂನ್‌, ಜುಲೈ, ಆಗಸ್ಟ್‌ ತಿಂಗಳಿನಲ್ಲಿ ಮಳೆಯಾಗುತ್ತದೆ. ಮುಂದಿನ ತಿಂಗಳುಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುತ್ತದೆ.

ತೋಟಕ್ಕೆ ಸಾಕು; ಭತ್ತಕ್ಕೆ ಸಾಕಾಗದು
ಕರಾವಳಿಯಲ್ಲಿ ಮಳೆಯ ಪರಿಣಾಮ ಕಡಿಮೆಯಾದರೂ ಇಲ್ಲಿ ಬೆಳೆಯುವ ತೋಟಗಾರಿಕಾ ಬೆಳೆಗಳಿಗೆ ಇದು ಪೂರಕವೇ ಆಗಿದೆ. ಆಗಾಗ ಕೆಲವು ದಿನಗಳ ವಿಶ್ರಾಂತಿ ಬಳಿಕ ಮಳೆ ಸುರಿದಿರುವುದರಿಂದ ಕೊಳೆರೋಗದಂತಹ ಸಮಸ್ಯೆ ಕಡಿಮೆಯಾಗಿದೆ. ಇನ್ನು ನವೆಂಬರ್‌-ಡಿಸೆಂಬರ್‌ ವೇಳೆ ಒಮ್ಮೆ ಜೋರಾಗಿ ಮಳೆ ಬಂದರೆ ಬೇಸಗೆ ಕಾಲದವರೆಗೂ ನೀರು ಸಾಕಾಗಬಹುದು. ಆದರೆ ಭತ್ತದ ಬೆಳೆಗೆ ಮಾತ್ರ ಇನ್ನೂ ಒಂದು ತಿಂಗಳ ಮಳೆ ಬೇಕು. ಸಾಧಾರಣವಾಗಿ ಸುರಿದರೂ ಭತ್ತ ಕೃಷಿಕರು ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಒಣಗಿ ಫ‌ಸಲು ಬಾರದಿರುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮಾನ್ಸೂನ್‌ ದುರ್ಬಲವಾದ ಕಾರಣ ಮಳೆ ಪ್ರಮಾಣದಲ್ಲಿ ಇಳಿಮುಖ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದ ಮಳೆ ಬರುವುದು ಸಂಶಯ.
ಡಾ| ಜಿ.ಎಸ್‌. ಶ್ರೀನಿವಾಸ ರೆಡ್ಡಿ, ಕೆಎಸ್‌ಎನ್‌ಡಿಎಂಸಿ ನಿರ್ದೇಶಕ

ಮಳೆ ಪ್ರಮಾಣದಲ್ಲಿ ಕಡಿಮೆ ಇದ್ದರೂ ಕರಾವಳಿಯಲ್ಲಿ ಬೆಳೆಯುವ ಬೆಳೆಗಳಿಗೆ ಯಾವುದೇ ರೀತಿಯ ಹಾನಿಯಾಗದು. ಮಳೆ ಪ್ರಮಾಣ ಕಡಿಮೆ ಇದೆ. ಅಡಿಕೆ ಬೆಳೆಯಲ್ಲಿನ ಕೊಳೆ ರೋಗ ಕಡಿಮೆಯಾಗಿದೆ.
ಎಚ್‌.ಆರ್‌. ನಾಯಕ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.