ಮಂಗಳೂರ‌ಲ್ಲಿ  ಹೈಟೆಕ್‌ ವೇಶ್ಯಾವಾಟಿಕೆ ಆತಂಕಕಾರಿ ಬೆಳವಣಿಗೆ


Team Udayavani, Sep 26, 2017, 9:48 AM IST

26-STATE-23.jpg

ಮಂಗಳೂರು: ಮಂಗಳೂರಿನ ಅಪಾರ್ಟ್‌ಮೆಂಟ್‌, ರೆಸಾರ್ಟ್‌ಗಳಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಆತಂಕ ಕಾರಿ ಬೆಳವಣಿಗೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಕಳವಳ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಮುಂಜಾಗ್ರತಾ ಕ್ರಮಗಳ ಬಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಪ್ರಜ್ಞಾ ಸಲಹಾ ಕೇಂದ್ರದ ನಿರ್ದೇಶಕಿ ಪ್ರೊ| ಹಿಲ್ಡಾ ರಾಯಪ್ಪನ್‌ ವಿಷಯ ಪ್ರಸ್ತಾವನೆಗೈದು, ನಗರದ ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ವೇಶ್ಯಾ ವಾಟಿಕೆ ಜಾಲಕ್ಕೆ ಸಿಕ್ಕಿದ 20ರ ಹರೆಯದ ಯುವತಿ ಯ ರಿಗೆ ಸ್ವಾಧಾರ ಕೇಂದ್ರಗಳಲ್ಲಿ ರಕ್ಷಣೆ ನೀಡ ಲಾಗಿದೆ. ಹೇಳಿಕೆಯಲ್ಲಿ ಅವರು ದಲ್ಲಾಳಿಗಳ ಮೂಲಕ ಅವರನ್ನು ಪೂರೈಕೆ ಮಾಡಲಾಗುತ್ತಿದೆ. ಬೆಳಗ್ಗಿ ನಿಂದ ಮಧ್ಯಾಹ್ನವರೆಗೆ 3,000 ರೂ. ಮತ್ತು ಸಂಜೆ ವರೆಗೂ ಇದ್ದರೆ 8,000 ರೂ. ವರೆಗೆ ನೀಡು ತ್ತಿರುವು ದಾಗಿ ಆತಂಕಕಾರಿ ಮಾಹಿತಿಗಳನ್ನು ನೀಡಿದ್ದಾರೆ ಎಂದರು.

ನಗರ ಡಿಸಿಪಿ ಹನುಮಂತರಾಯ ಮಾತನಾಡಿ, ಹಲವು ಮಸಾಜ್‌ ಪಾರ್ಲರ್‌, ಸ್ಪಾಗಳಲ್ಲಿ ವೇಶ್ಯಾ ವಾಟಿಕೆ ನಡೆ ಯು ತ್ತಿರುವು ದರ ಬಗ್ಗೆ ಅನೇಕ ದೂರು ಗಳು ಬಂದಿವೆ. ದೂರುಗಳ ಆಧಾರದಲ್ಲಿ ಅಂತಹ ಕೇಂದ್ರಗಳನ್ನು ಪತ್ತೆಹಚ್ಚಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದರು.

ಪುಷ್ಪಲತಾ ಪ್ರಕರಣ ತನಿಖೆ ಪೂರ್ಣಗೊಳಿಸಿ ಉಪ್ಪಿನಂಗಡಿಯ ಪುಷ್ಪಲತಾ ಕೊಲೆ ಪ್ರಕರಣ ಮೂರು ವರ್ಷವಾದರೂ ಯಾಕೆ ಪೂರ್ಣ ಗೊಂಡಿಲ್ಲ ಎಂದು ನಾಗಲಕ್ಷ್ಮೀ ಅವರು  ಪ್ರಶ್ನಿಸಿ ದರು. ಶೀಘ್ರ ಈ ಪ್ರಕರಣದ ತನಿಖೆಯನ್ನು ಪೂರ್ಣ ಗೊಳಿಸಬೇಕೆಂದು ಸೂಚಿಸಿದರು. ಪುಷ್ಪಲತಾ ದೇಹದ ಮೇಲಿನ ಗಾಯಗಳು ಅವರೇ ಮಾಡಿಕೊಂಡಿದ್ದು ಎಂದು ವೈದ್ಯಕೀಯ ವರದಿ ತಿಳಿಸಿರುವುದಾಗಿ ಎಸ್ಪಿ ಸುಧೀರ್‌ ರೆಡ್ಡಿ ಹೇಳಿದಾಗ, ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಶೀಘ್ರ ಮರು ತನಿಖೆ
ನಗರದ ಮೀನುಗಾರಿಕಾ ಕಾಲೇಜಿನಲ್ಲಿ ಮಹಿಳಾ ಪ್ರೊಫೆಸರ್‌ ಮೇಲೆ ಕಾಲೇಜಿನ ಡೀನ್‌ ಆಗಿದ್ದ ಎಚ್‌.ಆರ್‌.ವಿ. ರೆಡ್ಡಿ ಅವರು ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ದವರು ಸರಿಯಾಗಿ ತನಿಖೆ ನಡೆಸಿಲ್ಲ, ದೌರ್ಜನ್ಯ ನಡೆಸಿದ ವ್ಯಕ್ತಿಗೆ ಪೂರಕವಾಗುವಂತೆ ತನಿಖೆ ನಡೆಸಿ ವರದಿ ನೀಡಲಾಗಿದೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿ ಕಾರಿ ಡಾ| ಕೆ. ಜಿ. ಜಗದೀಶ್‌ ಪ್ರಕರಣದ ಮರು ತನಿಖೆಯನ್ನು ಶೀಘ್ರ ನಡೆಸಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವು ಪ್ರಕರಣ, ಜೈಲಿನಲ್ಲಿ ಮಹಿಳಾ ಕೈದಿಗಳ ಸುರಕ್ಷತೆ ಬಗ್ಗೆಯೂ ಅಧ್ಯಕ್ಷರು ಈ ವೇಳೆ ಮಾಹಿತಿ ಪಡೆದರು.

ಲೇಡಿಗೋಶನ್‌ ಬಳಿ ಬೀದಿಕಾಮಣ್ಣರ ಹಾವಳಿ
ಲೇಡಿಗೋಶನ್‌ ಆಸ್ಪತ್ರೆಯ ಸುತ್ತಮುತ್ತ ಬೀದಿ ಕಾಮಣ್ಣರ ಹಾವಳಿ ಹೆಚ್ಚಿದೆ. ಆಸ್ಪತ್ರೆಯ ಮುಂಭಾಗದ ಬಸ್‌ ತಂಗುದಾಣದಲ್ಲಿ ವೇಶ್ಯಾ ವಾಟಿಕೆ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಪೊಲೀಸ್‌ ಜೀಪ್‌ ಇದ್ದರೂ ಅವರು ನಿಗಾ ವಹಿಸುತ್ತಿಲ್ಲ ಎಂದು ಆಸ್ಪತ್ರೆಯ ಆಪ್ತ ಸಮಾಲೋಚಕಿಯೊಬ್ಬರು ದೂರಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ಕ್ರಿಮಿನಲ್‌ಗ‌ಳ ಮುಖ ಕಾಣುವಂತೆ ಕೆಮರಾಗಳನ್ನು ಆಸ್ಪತ್ರೆ ಪರಿಸರದಲ್ಲಿ ಅಳವಡಿಸುವಂತೆ ಸೂಚಿಸಿದರು.

ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್‌, ಆಯೋಗದ ಸದಸ್ಯೆ ಧನಲಕ್ಷ್ಮೀ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಸುಶೀಲಾ, ಅಪರ ಜಿಲ್ಲಾಧಿಕಾರಿ ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.