ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ
Team Udayavani, Oct 5, 2017, 3:25 PM IST
ಮಂಗಳೂರು: ಇಲ್ಲಿನ ಕಂಕನಾಡಿ ಬಳಿ ನೇತ್ರಾವತಿ ನದಿಯ ಸೇತುವೆ ಮೇಲಿಂದ ಜಿಗಿದು ರಿಕ್ಷಾ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಅಶೋಕನಗರದ ಬಶೀರ್ ಅಹಮ್ಮದ್ ಎಂಬ ರಿಕ್ಷಾ ಚಾಲಕ ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದು ಬಂದಿದೆ.ರಿಕ್ಷಾ ನಿಲ್ಲಿಸಿ ಕೂಡಲೇ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.