ಸಾರಿಗೆ,ಪ್ರವಾಸೋದ್ಯಮ ಪ್ರದರ್ಶನ 


Team Udayavani, Oct 28, 2017, 11:55 AM IST

28-Mng–6.jpg

ಮಹಾನಗರ: ಇಂಡಿಯಾ ಇಂಟರ್‌ ನ್ಯಾಷನಲ್‌ ಟ್ರಾವೆಲ್‌ಎಕ್ಸಿಬಿಷನ್‌ ಅನ್ನು ಶುಕ್ರವಾರ ನಗರದ ನವಭಾರತ ಸರ್ಕಲ್‌ ಬಳಿಯಿರುವ ಟಿ.ವಿ. ರಮಣ ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ಮೇಯರ್‌ ಕವಿತಾ ಸನಿಲ್‌ ಉದ್ಘಾಟಿಸಿದರು.

ಐಐಟಿಇ ಬೆಂಗಳೂರಿನ ನಿರ್ದೇಶಕ ಅನುರಾಗ್‌ ಗುಪ್ತಾ, ಕಲ್ಕೂರ ಜಾಹೀರಾತು ಸಂಸ್ಥೆಯ ಎಂ. ನಾರಾಯಣ ಭಟ್‌
ಮೊದಲಾದವರು ಉಪಸ್ಥಿತರಿದ್ದರು.

ಐಐಟಿಟಿಇ ವತಿಯಿಂದ ಏರ್ಪಡಿಸಲಾಗಿರುವ ಎಕ್ಸಿಬಿಷನ್‌ನಲ್ಲಿ ಸಾರಿಗೆ, ಪ್ರವಾಸ, ರೈಲ್ವೇ, ಆತಿಥ್ಯ ಮತ್ತಿತರ ಇದಕ್ಕೆ ಪೂರಕವಾದ ಸಂಗತಿಗಳನ್ನು ಜನರಿಗೆ ಪರಿಚಯಿಸಲಾಗುತ್ತದೆ. ಈ 3 ದಿನಗಳ ಪ್ರವಾಸಿ ಪ್ರದರ್ಶನದಲ್ಲಿ ಮುಖ್ಯವಾಗಿ ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಪ್ರವಾಸಿ ಕೇಂದ್ರಗಳು, ಹೊಟೇಲ್‌ಗ‌ಳು, ರೆಸಾರ್ಟ್‌ಗಳು ಹಾಗೂ ಇನ್ನಿತರ ಸೇವೆಗಳು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸದ ಸಂಯೋಜಕರು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸೇವೆಗಳನ್ನು ಪೂರೈಸುವವರ ಕುರಿತಾದ ವಿಸ್ತೃತ ಮಾಹಿತಿ ಒದಗಿಸಲಾಗುತ್ತದೆ.

ಮಧ್ಯ ಪ್ರದೇಶದ ಪ್ರವಾಸೋದ್ಯಮ, ಜಾರ್ಖಂಡ್‌ ಪ್ರವಾಸೋದ್ಯಮ, ಉತ್ತರಾಖಂಡ ಪ್ರವಾಸೋದ್ಯಮ, ಗುಜರಾತ್‌ ಪ್ರವಾಸೋದ್ಯಮ ಮತ್ತು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಗಳು ಇನ್ನಿತರ ರಾಜ್ಯ ಪ್ರವಾಸೋದ್ಯಮ ಇಲಾಖೆಗಳು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಗಳು ಈ ಎಕ್ಸಿಬಿಷನ್‌ನಲ್ಲಿ ಪ್ರಸ್ತುತಗೊಳ್ಳಲಿರುವುದು. ಮಾತ್ರವಲ್ಲ ಅನೇಕ ಪ್ರಮುಖ ಟ್ರಾವೆಲ್‌ ಏಜೆಂಟ್‌ಗಳು, ಹೊಟೇಲ್‌ಗ‌ಳು, ರೆಸಾರ್ಟ್‌ಗಳು ಪಾಲ್ಗೊಳ್ಳುತ್ತಲಿವೆ. ಅಡಿಗಾಸ್‌ ಯಾತ್ರಾ, ಟ್ರೀಬೋ ಹೊಟೇಲ್ಸ್‌, ರಾಶಿ ಎಕೊಟ್ಯೂರಿಸಂ, ಮುಸ್ಲಿಂ ಟ್ರಾವೆಲ್‌ ಆ್ಯಂಡ್‌ ಟೂರ್ ಇತ್ಯಾದಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಅವರ ಪ್ಯಾಕೇಜ್‌ಗಳು, ಸೇವೆಗಳ ಮಾಹಿತಿ ಒದಗಿಸಲಿದ್ದಾರೆ.

ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮವನ್ನು ಉತ್ತೇಜಿಸುವುದೇ ಎಕ್ಸಿಬಿಷನ್‌ನ
ಮೂಲ ಉದ್ದೇಶವಾಗಿದೆ. ಜನರ ಆಸಕ್ತಿಗೆ ತಕ್ಕಂತೆ ಪ್ರವಾಸೋದ್ಯಮದ ಕುರಿತಾದ ಮಾಹಿತಿಗಳನ್ನು ಒಂದೇ ಸೂರಿನಡಿ ಒದಗಿಸುವ ಪ್ರಯತ್ನ ಇದಾಗಿದೆ. ಕ್ರಿಸ್‌ ಮಸ್‌ ಸಂಭ್ರಮ, ವಾರದ ಪ್ರವಾಸ, ಹನಿಮೂನ್‌ ವೆಕೇಷನ್‌ ಮತ್ತು ಬ್ಯುಸಿನೆಸ್‌ ಟೂರುಗಳನ್ನು ನಡೆಸಲು ಈ ಚಳಿಗಾಲವು ಪ್ರಶಸ್ತವಾಗಿದ್ದು, ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಸೂಕ್ತವಾಗಿದೆ.

ವಿವಿಧ ಅತ್ಯಾಕರ್ಷಣೀಯ ಪ್ರವಾಸೋದ್ಯಮ ಪ್ಯಾಕೇಜ್‌ಗಳಿದ್ದು, ಈಗಾಗಲೇ ಪ್ರವಾಸದ ಪ್ಲಾನಿಂಗ್‌ ಮಾಡುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಕಾರ್ಪೊರೇಟ್‌ ಸಂಸ್ಥೆಗಳು, ಟ್ರಾವೆಲರ್‌ ಸಂಸ್ಥೆಗಳು ಕೂಡ ವಿಸ್ತತವಾದ ಮಾಹಿತಿಯನ್ನು ಈ ಪ್ರದರ್ಶನದಲ್ಲಿ ಪಡೆದುಕೊಳ್ಳಬಹುದಾಗಿದೆ. ಅ.29ರ ವರೆಗೆ ಪ್ರತಿ ದಿನ ಬೆಳಗ್ಗೆ 11.30ರಿಂದ ರಾತ್ರಿ 7.30ರ ವರೆಗೆ ಪ್ರದರ್ಶನ ತೆರೆದುಕೊಂಡಿದ್ದು, ಪ್ರವೇಶ ಉಚಿತವಾಗಿರುತ್ತದೆ.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.