ಬಜಪೆ ಗ್ರಾ.ಪಂ.ನಲ್ಲಿ ರೈತರ ಸಭೆ


Team Udayavani, Nov 22, 2017, 12:10 PM IST

22-Nov-7.jpg

ಬಜಪೆ: ಬಜಪೆ ಗ್ರಾಮದ ನೆಲ್ಲಿದಡಿ ಶ್ರೀ ಕಾಂತೇರು ಜುಮಾದಿ ಬಂಟ ದೈವಸ್ಥಾನವನ್ನು ನೆಲ್ಲಿದಡಿ ಕುಟುಂಬ ಹಾಗೂ ಗ್ರಾಮಸ್ಥರಿಗೆ ಶಾಶ್ವತವಾಗಿ ಕೊಡತಕ್ಕದ್ದು. ಕಲ್ಲಜರಿ ರಸ್ತೆಯನ್ನು ಹಿಂದಿನಂತೆ ಯಥಾಸ್ಥಿತಿಯಲ್ಲಿ ಉಳಿಸಬೇಕೆಂದು ಬಜಪೆ ಗ್ರಾಮ ಪಂಚಾಯತ್‌ನ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಜಪೆ ಗ್ರಾಮದ ರೈತರ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಈ ಸಂಬಂಧ ರೈತರು, ಕಂಪೆನಿಗಳು, ಸರಕಾರದ ಜತೆ ಮಾತುಕತೆಗೆ ಸಿದ್ಧರಾಗಬೇಕು. ಪ್ರಾಣತೆತ್ತಾದರೂ ಈ ವಿಚಾರದಲ್ಲಿ ರೈತರು ದೈವಸ್ಥಾನವನ್ನು ಬಿಟ್ಟು ಕೋಡುವುದಿಲ್ಲ. ಜಮೀನು ಕಳೆದುಕೊಂಡವರಿಗೆ ಸೂಕ್ತ ಉದ್ಯೋಗ ಮತ್ತು ಅದಕ್ಕೆ ತಕ್ಕುದಾದ ಪರಿಹಾರ ಸಿಗಲೇಬೇಕೆಂಬ ನಿರ್ಣಯ ತೆಗೆದುಕೊಳ್ಳಲಾಯಿತು. ನೆಲ್ಲಿದಡಿ ಗುತ್ತುಮನೆಯ ಲಕ್ಷ್ಮಣ್‌ ಚೌಟ ಅಧ್ಯಕ್ಷತೆ ವಹಿಸಿದ್ದರು.

ಹಸಿರು ಸೇನೆಯ ಜಿಲ್ಲಾ ಸಂಚಾಲಕ ರೂಪೇಶ್‌ ರೈ ಅಲಿಮಾರು ಮಾತನಾಡಿ, 8 ವರ್ಷಗಳಿಂದ ರೈತ ಸಂಘವು ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿನ ರೈತರು ಕಂಪೆನಿಗಳಿಂದ ತೊಂದರೆಯಾಗಿದೆ ಎಂದು ದೂರಿದ್ದಾರೆ. ಇದರಿಂದ ರೈತರ ಸಮಸ್ಯೆಯನ್ನು ಈಡೇರಿಸಿಕೊಡುವ ನಿಟ್ಟಿನಲ್ಲಿ ಈ ಸಭೆಯನ್ನು ಅಯೋಜಿಸಲಾಗಿದೆ. ದೈವಸ್ಥಾನದ ಉಳಿಸುವ ಬಗ್ಗೆ ಈಗಾಗಲೇ ಪಂಚಾಯತ್‌, ಗ್ರಾಮ ಸಭೆ ನಿರ್ಣಯ ತೆಗೆದುಕೊಂಡಿದೆ. ಜಿಲ್ಲಾಧಿಕಾರಿಯವರಿಗೆ ಈ ಬಗ್ಗೆ ಸ್ಥಳ ಪರಿಶೀಲನೆಗೆ ಮನವಿ ಮಾಡಲಾಗುತ್ತದೆ ಎಂದರು.

ಗ್ರಾಮ ಪಂಚಾಯತ್‌ ಅಧ್ಯಕ್ಷೆ ರೋಜಿ ಮಥಾಯಸ್‌ ಮಾತನಾಡಿ, ನೆಲ್ಲಿದಡಿ ದೈವಸ್ಥಾನ ಹಾಗೂ ರಸ್ತೆಯ ಬಗ್ಗೆ ಈಗಾಗಲೇ ಪಂಚಾಯತ್‌ ನಿರ್ಣಯ ತೆಗೆದುಕೊಂಡಿದೆ. ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಮನವಿ ಕೂಡ ಮಾಡಲಾಗಿದೆ. ಗ್ರಾಮಸ್ಥರ ಸಮಸ್ಯೆ ಪರಿಹಾರಕ್ಕೆ ಪಂಚಾಯತ್‌ ಸಹಕಾರ ನೀಡುತ್ತದೆ ಎಂದರು.

ರೈತ ಸಂಘ ಜಿಲ್ಲಾ ಸಂಘಟನ ಕಾರ್ಯದರ್ಶಿ ವಿನೋದ್‌ ಪಾದೆಕಲ್ಲು ಮಾತನಾಡಿ, ಶೇ.60 ಮಂದಿಗೆ ಭೂಮಿ ಕಳೆದುಕೊಂಡ ಮೇಲೆ ಪರಿಜ್ಞಾನದ ಅನುಭವ ಬಂದಿದೆ. ಪಂಚಾಯತ್‌ ನಿರ್ಣಯ ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ. ಅದು ಗ್ರಾಮಸ್ಥರು ತೆಗೆದುಕೊಂಡ ನಿರ್ಧಾರ. ಅದನ್ನು ಅನುಷ್ಠಾನ ಗೊಳಿಸಬೇಕಾಗಿರುವುದು ಜಿಲ್ಲಾಧಿಕಾರಿಯವರು. ಜನರ ನಿಮ್ಮ ಬೆಂಗಾವಲಾಗಿ ರೈತ ಸಂಘ ಇದೆ. ರೈತ ಶಕ್ತಿಯ ಮುಂದೆ ತಲೆಬಾಗಲೇಬೇಕು. ಒಟ್ಟಾಗಿ ಹೋರಾಟ ಮಾಡೋಣ ಎಂದರು.

ರೈತ ಸಂಘದ ಜಿಲ್ಲಾ ಕೋಶಾಧಿಕಾರಿ ಮಂಜುನಾಥ ರೈ, ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಕಲೀಲ್‌, ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಮಹಮದ್‌ ಶರೀಫ್‌, ರಾಜ್‌ ಮೋಹನ್‌ ಮುದ್ದ ಉಪಸ್ಥಿತರಿದ್ದರು. ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.