ಇನ್ನು  ನುಡಿಸಿರಿ ಸಂಭ್ರಮ


Team Udayavani, Dec 1, 2017, 9:57 AM IST

30-Dec-1.jpg

ವಿದ್ಯಾಗಿರಿ: ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್‌ ನುಡಿಸಿರಿ’ಗೆ ಮೂಡಬಿದಿರೆ ತೆರೆದುಕೊಂಡಿದೆ. ಇಂದಿನಿಂದ ಮೂರು ದಿನಗಳ ಪರ್ಯಂತ ನಡೆಯಲಿರುವ ಸಾಹಿತ್ಯ ನುಡಿ ತೇರಿಗೆ ಸರ್ವ ರೀತಿಯಲ್ಲೂ ಸಜ್ಜುಗೊಂಡಿರುವ ವಿದ್ಯಾಗಿರಿ ಸಾಹಿತ್ಯಾಸಕ್ತ ಮನಸ್ಸುಗಳನ್ನು ಕೈ ಬೀಸಿ ಆಮಂತ್ರಿಸುತ್ತಿದೆ.

ಕನ್ನಡ ನುಡಿ ಕುಣಿದಾಡುವ ಮಹಾ ಆಲಯವಾಗಿ ಪರಿವರ್ತನೆಯಾಗಲಿರುವ ಮೂಡಬಿದಿರೆಯ ಆಳ್ವಾಸ್‌ ಪರಿಸರ ಕನ್ನಡಾಂಬೆಯ ಭವ್ಯ ದರ್ಶನಕ್ಕೆ ವೇದಿಕೆ ಒದಗಿಸಿದೆ. ಸಾಹಿತ್ಯ-ಸಾಂಸ್ಕೃತಿಕ-ಕೃಷಿ- ಉದ್ಯೋಗ-ಮನೋರಂಜನ ಕಾರ್ಯ ಕಲಾಪಗಳ ಮುಖೇನ ಇಡೀ ಮೂಡಬಿದಿರೆ ಸಾಹಿತ್ಯ ಲೋಕವೊಂದನ್ನು ಕರುನಾಡಿಗೆ ಪರಿಚಯಿಸಲಿದೆ. ಹಳದಿ ಹಾಗೂ ಕೆಂಪು ಬಣ್ಣದ ಕನ್ನಡ ಬಾವುಟಗಳು ಮೂಡಬಿದಿರೆಯ ಅಷ್ಟೂ ವಠಾರದಲ್ಲಿ ಸ್ವತ್ಛಂದವಾಗಿ ಹಾರಾಡುವ ಮೂಲಕ ನುಡಿಸಿರಿಗೆ ಹುರುಪು ದೊರೆತಂತಾಗಿದೆ.

ಪ್ರತಿಬಾರಿಯೂ ನವ ನವೀನ ಪರಿಕಲ್ಪನೆಯೊಂದಿಗೆ ಸಾಹಿತ್ಯಾಸಕ್ತರನ್ನು ಎದುರುಗೊಳ್ಳಲು ಡಾ| ಆಳ್ವರು ವಿಶೇಷ ಕಾಳಜಿ ವಹಿಸಿಕೊಳ್ಳುವುದು ಸಮ್ಮೇಳನದ ವಿಶೇಷ. ಹೀಗಾಗಿ ಈ ಬಾರಿಯೂ ಅದ್ಭುತ ಮಾಯಾಲೋಕವನ್ನು ಪ್ರಧಾನ ವೇದಿಕೆಯ ಮುಂಭಾಗ ಸಿದ್ಧಗೊಳಿಸಲಾಗಿದೆ. ನುಡಿಸಿರಿ ಆವರಣದಲ್ಲಿ ಒಪ್ಪ ಓರಣವಾಗಿ ನಿಲ್ಲಿಸಿದ ಕೃತಕ ಪ್ರಾಣಿ, ಪಕ್ಷಿಗಳು, ಹಣ್ಣು ಹಂಪಲುಗಳು ಆಕರ್ಷಣೀಯವಾಗಿವೆ. ಯಾಂತ್ರಿಕ ಆನೆ, ಹುಲಿ, ಸಿಂಹ, ಚಿಂಪಾಂಜಿಗಳು ಸಮ್ಮೇಳನಕ್ಕೆ ಇನ್ನಷ್ಟು ಮೆರುಗು ನೀಡಲಿವೆ.

ನುಡಿಸಿರಿ ಉದ್ಘಾಟನೆಯಾದ ಬಳಿಕ ‘ಕರ್ನಾಟಕ; ಬಹುತ್ವದ ನೆಲೆಗಳು’ ಎಂಬ ಪ್ರಧಾನ ಪರಿಕಲ್ಪನೆಯಲ್ಲಿ ಮೂರು ಪ್ರಧಾನಗೋಷ್ಠಿಗಳನ್ನು ಆಯೋಜಿಸಲಾಗಿದೆ. ಒಟ್ಟು ಏಳು ವಿಶೇಷ ಉಪನ್ಯಾಸಗಳು, ಕವಿ ಸಮಯ ಹಾಗೂ ಕವಿ ನಮನ ಕಾರ್ಯಕ್ರಮ ಜರಗಲಿದ್ದು, 9 ಪ್ರಸಿದ್ಧ ಕವಿಗಳು ಭಾಗವಹಿಸಲಿದ್ದಾರೆ. ಇಬ್ಬರು ಶ್ರೇಷ್ಠರ ಸಂಸ್ಮರಣೆ, ಶತಮಾನದ ನಮನ, ಸಾಧಕರ ಜತೆಗೆ ನನ್ನ ಕತೆ ನಿಮ್ಮ ಜತೆಗೆ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

5ರಲ್ಲಿ ಹಗಲು-ರಾತ್ರಿ; 7ರಲ್ಲಿ ಸಂಜೆಯ ಬಳಿಕ
ಗೇರುಕಟ್ಟೆ ಗಂಗಯ್ಯ ಶೆಟ್ಟಿ ವೇದಿಕೆ, ಕುವೆಂಪು ಸಭಾಂಗಣ, ಡಾ| ಶಿವರಾಮ ಕಾರಂತ ಸಭಾಂಗಣ, ಪಳಕಳ ಸೀತಾರಾಮ ಭಟ್ಟ ವೇದಿಕೆ, ಡಾ| ವಿ.ಎಸ್‌.ಆಚಾರ್ಯ ಸಭಾ ಭವನದ ಹರೀಶ್‌ ಆರ್‌. ಭಟ್‌ ವೇದಿಕೆಗಳಲ್ಲಿ ಬೆಳಗ್ಗಿನಿಂದ ರಾತ್ರಿ 10ರ ವರೆಗೆ ಹಾಗೂ ಉಳಿದ 7 ವೇದಿಕೆಗಳಲ್ಲಿ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮವಿದೆ .

ಕನ್ನಡದ ಜತೆಗೆ ತುಳುನಾಡ ಐಸಿರಿ!
ಆಳ್ವಾಸ್‌ ನುಡಿಸಿರಿ ನಡೆಯುವ ಮೂರು ದಿನಗಳವರೆಗೆ ಸಂಜೆ 6 ಗಂಟೆಯಿಂದ ತುಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುವುದು ವಿಶೇಷ. ತುಳು ಸಾಧಕರು, ತುಳು-ಕನ್ನಡ ಸಾಹಿತಿಗಳಾದ ನಾಡೋಜ ಕಯ್ನಾರ ಕಿಂಞಣ್ಣ ರೈ ಅವರ ಹೆಸರಿನ ವೇದಿಕೆಯಲ್ಲಿ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಡಿ.1ರಂದು ಸಂಜೆ 5.30ಕ್ಕೆ ತುಳು ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಉದ್ಘಾಟಿಸಲಿದ್ದು, ಪ್ರೊ| ಬಿ.ಎ.ವಿವೇಕ್‌ ರೈ ಅಧ್ಯಕ್ಷತೆ ವಹಿಸುವರು.

ಕಂಬಳದ ಕೋಣವಿದೆ
ಈ ಬಾರಿ ಕೃಷಿ ಸಿರಿಯನ್ನು ವಿನೂತನ ರೀತಿಯಲ್ಲಿ ಸಂಘಟಿಸಲಾಗಿದೆ. ಶುಕ್ರವಾರ ಜಾನುವಾರುಗಳ ಪ್ರದರ್ಶನ ಆಯೋಜಿಸಲಾಗಿದೆ. ಸಂಜೆ 4.30ರಿಂದ 6ರವರೆಗೆ ಓಟದ ಕೋಣಗಳ ಸೌಂದರ್ಯದ ಸ್ಪರ್ಧೆಯಿದೆ. ವಿಜೇತ ಕೋಣಗಳಿಗೆ ನಗದು ಬಹುಮಾನವಿದೆ. ಕೋಣ ಓಡಿಸುವವರ ದೇಹ ಸೌಂದರ್ಯ ಸ್ಪರ್ಧೆಯೂ ಈ ಬಾರಿ ನಡೆಯಲಿರುವುದು ವಿಶೇಷ. ಜತೆಗೆ ಬೆಕ್ಕುಗಳ ಪ್ರದರ್ಶನ, ಬೆಕ್ಕುಗಳ ಸೌಂದರ್ಯ ಪ್ರದರ್ಶನ, ಶ್ವಾನ-ಶ್ವಾನ ಮರಿ-ಶ್ವಾನ ಪ್ರಾಮಾಣಿಕತೆ ಹಾಗೂ ಶ್ವಾನ ಸೌಂದರ್ಯ ಪ್ರದರ್ಶನವಿದೆ. 600ಕ್ಕೂ ಮಿಕ್ಕಿ ಬೃಹತ್‌ ಮತ್ಸ್ಯಗಳ ಪ್ರದರ್ಶನವಿದೆ. 500ಕ್ಕೂ ಮಿಕ್ಕಿ ಸಮುದ್ರ ಚಿಪ್ಪುಗಳ ಪ್ರದರ್ಶನ, ವಿದೇಶಿ ಪಕ್ಷಿಗಳು ಇಲ್ಲಿರಲಿವೆ.

38,200 ಪ್ರತಿನಿಧಿಗಳು
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತರು 100 ರೂ. ಪಾವತಿಸಿ ಪ್ರತಿನಿಧಿಗಳಾಗಲು ಅವಕಾಶವಿದೆ. ಇವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಗಳನ್ನು ಮಾಡಲಾಗಿದೆ. ಈಗಾಗಲೇ 100 ರೂ.ಪಾವತಿಸಿ ಒಟ್ಟು 38,200ಕ್ಕೂ ಅಧಿಕ ಜನರು ನೋಂದಣಿ ಮಾಡಿದ್ದಾರೆ. ಆಳ್ವಾಸ್‌ನ ಬಹುತೇಕ ಹಾಸ್ಟೆಲ್‌ ಗಳಲ್ಲಿ ಮತ್ತು ಇತರ ವಸತಿ ಕೇಂದ್ರಗಳಲ್ಲಿ ದೂರದೂರಿನಿಂದ ಬಂದವರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. 

ಭರ್ಜರಿ ಭೋಜನ
ಇಲ್ಲಿಯವರೆಗೆ ಒಂದು ಕೇಂದ್ರದಲ್ಲಿ ಮಾತ್ರ ಊಟದ ವ್ಯವಸ್ಥೆ ನಿರ್ವಹಿಸುತ್ತಿದ್ದರೆ, ಈ ಬಾರಿ ಕೃಷಿ ಸಿರಿ ಆಯೋಜಿಸಲಾಗಿರುವ ಸ್ಥಳವೂ ಸಹಿತ ಎರಡು ಕಡೆಗಳಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 100 ಮಂದಿ ಬಾಣಸಿಗರು ಇದನ್ನು ನಿರ್ವಹಿಸುವರು. ಹೆಚ್ಚಾ ಕಡಿಮೆ 100 ಕಡೆಗಳಲ್ಲಿ ಊಟದ ಕೌಂಟರ್‌ ಇರಲಿದೆ. 

‘ನುಡಿ’ಯು ‘ಸಿರಿ’ಯಾಗುವ ಬಗೆ 
ಆಳ್ವಾಸ್‌ ಸಾಹಿತ್ಯ ಸಮ್ಮೇಳನವು ಸಾಹಿತ್ಯ ದುಂದುಭಿಯನ್ನು ಮೊಳಗಿಸಿದರೆ, ಇನ್ನೊಂದೆಡೆ ವಿವಿಧ ಸಿರಿಗಳ ಮುಖೇನ ನುಡಿಸಿರಿಯು ವಿವಿಧತೆಯಿಂದ ಕಂಗೊಳಿಸಲಿದೆ. ರಾಜ್ಯದ 30 ಚಿತ್ರ ಕಲಾವಿದರಿಂದ ಆಳ್ವಾಸ್‌ ಚಿತ್ರಸಿರಿ, ದೇಶದ 2000ಕ್ಕೂ ಮಿಕ್ಕಿ ಛಾಯಾಗ್ರಾಹಕರಿಂದ ಛಾಯಾಚಿತ್ರ ಪ್ರದರ್ಶನದ “ಆಳ್ವಾಸ್‌ ಛಾಯಾಚಿತ್ರ ಸಿರಿ’, ಚುಕ್ಕಿ ಚಿತ್ರ ಕಲಾವಿದರ ಚುಕ್ಕಿ ಚಿತ್ರಗಳ ರಚನೆ ಹಾಗೂ ಪ್ರದರ್ಶನದ ಆಳ್ವಾಸ್‌ ಚುಕ್ಕಿ ಚಿತ್ರಸಿರಿ, ಗಾಳಿಪಟೋತ್ಸವದ ‘ಆಳ್ವಾಸ್‌ ಗಾಳಿಪಟ ಸಿರಿ, ಎಸೆಸೆಲ್ಸಿವರೆಗೆ ಕನ್ನಡ ಮಾಧ್ಯಮಗಳಲ್ಲಿ ಕಲಿತವರಿಗೆ ಮೊದಲ ದಿನ ಉದ್ಯೋಗಾವಕಾಶ ನೀಡುವ ‘ಆಳ್ವಾಸ್‌ ಉದ್ಯೋಗ ಸಿರಿ’, ಕನ್ನಡ ನಾಟಕಗಳ ಪ್ರದರ್ಶನ ‘ಆಳ್ವಾಸ್‌ ರಂಗ ಸಿರಿ’, ಕನ್ನಡ ಚಲನಚಿತ್ರ ಪ್ರದರ್ಶನದ ‘ಆಳ್ವಾಸ್‌ ಸಿನಿ ಸಿರಿ’, ರಾಜ್ಯದ 30 ವ್ಯಂಗ್ಯಚಿತ್ರ ಕಲಾವಿದರಿಂದ ವ್ಯಂಗ್ಯಚಿತ್ರ ರಚನೆ ಹಾಗೂ ಪ್ರದರ್ಶನದ “ಆಳ್ವಾಸ್‌ ವ್ಯಂಗ್ಯಚಿತ್ರ ಸಿರಿ’, ಗೂಡುದೀಪಗಳ ಪ್ರದರ್ಶನದ ‘ಆಳ್ವಾಸ್‌ ಗೂಡುದೀಪ ಸಿರಿ’, ಯಕ್ಷಗಾನ ಪ್ರದರ್ಶನದ “ಆಳ್ವಾಸ್‌ ಯಕ್ಷಸಿರಿ’, ವಿವಿಧ ವಿಜ್ಞಾನ ಮಾದರಿಗಳ ಪ್ರಾತ್ಯಕ್ಷಿಕೆಯ ‘ಆಳ್ವಾಸ್‌ ವಿಜ್ಞಾನ ಸಿರಿ’ ಗಳು ಈ ಬಾರಿ ಮೇಳೈಸಲಿರುವುದು ವಿಶೇಷ.

ದಿನೇಶ್‌ ಇರಾ

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.