ಕಾಳಸಂತೆಯಲ್ಲಿ ಬಿಕರಿಯಾಗುತ್ತಿವೆ ಬಡವರ ಜನೌಷಧ!


Team Udayavani, Dec 9, 2017, 7:34 AM IST

09-3.jpg

ಮಂಗಳೂರು: ಕೇಂದ್ರ ಸರಕಾರವು ಬಡವರಿಗಾಗಿ ಕೈಗೆಟಕುವ ದರದಲ್ಲಿ ಔಷಧ ಒದಗಿಸುವ ಉದ್ದೇಶದಿಂದ ಪ್ರಾರಂಭಿಸಿರುವ ಜನೌಷಧ ಕೇಂದ್ರದಲ್ಲೀಗ ಅಕ್ರಮದ ವಾಸನೆ ಹೊಡೆದಿದೆ. ಕಡಿಮೆ ಬೆಲೆಯ ಇಲ್ಲಿನ ಔಷಧಗಳು ಖಾಸಗಿ ಮೆಡಿಕಲ್‌ಗ‌ಳ ಮೂಲಕ ಮಾರಾಟವಾಗುತ್ತಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರದ
ನಿವಾಸಿಯೊಬ್ಬರು ನೇರವಾಗಿ ಪ್ರಧಾನಿ ನರೇಂದ್ರ ಮೋದಿಗೇ ದೂರು ನೀಡಿದ್ದಾರೆ. ಜನೌಷಧ ಕೇಂದ್ರಕ್ಕೆ ಔಷಧ ಪೂರೈಕೆ ಮಾಡುವ ಡೀಲರ್‌ಗಳು ಅಕ್ರಮಕ್ಕೆ ಮೂಲ ಕಾರಣರಾಗಿದ್ದಾರೆ.

ಪ್ರಧಾನಿಗೆ ದೂರು: ಅಕ್ರಮ ಬಗ್ಗೆ ಖಚಿತ ಮಾಹಿತಿ ಪಡೆದಿರುವ ನಗರದ ಬಿಜೈ ನಿವಾಸಿ ಸರಸ್ವತಿ ಅವರು ಪಿಜಿ ಪೋರ್ಟಲ್‌ ಮೂಲಕ ಪ್ರಧಾನಿ ಕಚೇರಿಗೆ ದೂರು ನೀಡಿದ್ದಾರೆ. ಜತೆಗೆ ಪ್ರಧಾನಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರ ಟ್ವಿಟರ್‌ ಖಾತೆಗೂ ದೂರು ನೀಡಿದ್ದಾರೆ. ಸರಸ್ವತಿ ಅವರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ಕಾರ್ಯಾಲಯ ಕ್ರಮಕ್ಕೆ ಮುಂದಾಗಿದೆ. ದೂರಿನ
ಬಗ್ಗೆ ಹಿಮ್ಮಾಹಿತಿಯನ್ನೂ ನೀಡಿದೆ. ಸರಸ್ವತಿ ಅವರು ನ. 18ರಂದು ದೂರು ನೀಡಿದ್ದು, ನ. 20ರಂದು ದೂರನ್ನು ಫಾರ್ಮಾ
ಸುಟಿಕಲ್ಸ್‌ ವಿಭಾಗಕ್ಕೆ ವರ್ಗಾಯಿಸಲಾಗಿದೆ. ನ. 21ರಂದು ನ್ಯಾಷನಲ್‌ ಫಾರ್ಮಸಿಟಿಕಲ್ಸ್‌ ಪ್ರೈಸಿಂಗ್‌ ಅಥಾರಿಟಿಗೆ ವರ್ಗಾಯಿಸಲಾಗಿದೆ ಎಂದು ಈಮೇಲ್‌ ಮೂಲಕ ತಿಳಿಸಲಾಗಿದೆ. ನ. 28ರಂದು ತನಿಖೆ ಪ್ರಗತಿಯಲ್ಲಿದೆ ಎಂಬ ಉತ್ತರ ಬಂದಿದೆ.

ಪ್ರಸ್ತುತ ದ.ಕ.ಜಿಲ್ಲೆಯ ಮಂಗಳೂರಿನಲ್ಲಿ ಎರಡು ಕೇಂದ್ರಗಳು ಹಾಗೂ ಪುತ್ತೂರು, ಬೆಳ್ತಂಗಡಿಯಲ್ಲಿ ಒಂದೊಂದು ಜನೌಷಧ 
ಕೇಂದ್ರಗಳು ಕಾರ್ಯಾಚರಿಸುತ್ತಿವೆ. ನಗರದ ವೆನಾಕ್‌ ಹಾಗೂ ಲೇಡಿಗೋಷನ್‌ ಆಸ್ಪತ್ರೆಯ ಬಳಿ ಇರುವ ಕೇಂದ್ರಗಳು ಆಸ್ಪತ್ರೆಯ ಅಧೀನದಲ್ಲಿದ್ದರೆ, ಪುತ್ತೂರು ಹಾಗೂ ಬೆಳ್ತಂಗಡಿಯ ಕೇಂದ್ರಗಳು ಆರೋಗ್ಯ ಇಲಾಖೆ ಅಧೀನದಲ್ಲಿದೆ. 

ಖಾಸಗಿ ಮೆಡಿಕಲ್‌ಗೆ ಪೂರೈಕೆ: ಜನೌಷಧ ಕೇಂದ್ರಗಳ ಮೂಲಕ ಔಷಧಗಳನ್ನು ಸುಮಾರು ಶೇ.90ರವರೆಗೂ ರಿಯಾಯಿತಿ ದರದಲ್ಲಿ
ನೀಡಲಾಗುತ್ತಿದೆ. ಇದೇ ಔಷಧಗಳು ಖಾಸಗಿ ಮೆಡಿಕಲ್‌ನಲ್ಲೂ ಸಿಗುತ್ತಿವೆ. ಪೂರೈಕೆದಾರರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಖಾಸಗಿ ಮೆಡಿಕಲ್‌ಗ‌ಳು ಜನೌಷಧ ಕೇಂದ್ರಕ್ಕೆ ಪೂರೈಕೆ ಯಾಗಬೇಕಾದ ರಿಯಾಯಿತಿ ದರದ ಔಷಧ ಅಕ್ರಮವಾಗಿ ಪಡೆದು ಎಂಆರ್‌ಪಿ ಬೆಲೆಗೇ ಮಾರಾಟ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದಿದೆ. ಇದರಿಂದ ಜನೌಷಧಿ ಕೇಂದ್ರಗಳಲ್ಲಿ ಔಷಧಗಳ ಕೊರತೆ ಕಂಡುಬಂದಿದೆ. ಮುಖ್ಯವಾಗಿ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಾಗುವ ಔಷಧಗಳಲ್ಲಿ ರಿಯಾಯಿತಿ ದರದ ಔಷಧ ಎಂದು ನಮೂದಿಸದ ಹಿನ್ನೆಲೆಯಲ್ಲಿ ಈ ರೀತಿಯ ತೊಂದರೆಗಳು ಎದುರಾಗಿದೆ.

ದ.ಕ. ಜಿಲ್ಲೆಯ ಎಲ್ಲಾ ಜನೌಷಧ ಕೇಂದ್ರಗಳು ಉತ್ತಮವಾಗಿ ಕಾರ್ಯಾಚರಿಸುತ್ತಿವೆ. ಔಷಧ ಕೊರತೆಯ ಯಾವುದೇ ದೂರುಗಳು ಬಂದಿಲ್ಲ. ಜತೆಗೆ ಖಾಸಗಿ ಮೆಡಿಕಲ್‌ಗ‌ಳಿಗೆ ಔಷಧ ಮಾರಾಟದ ಕುರಿತು ಕೂಡ ನಮ್ಮ ಗಮನಕ್ಕೆ ಬಂದಿಲ್ಲ.’ 
 ●ಡಾ| ರಾಮಕೃಷ್ಣ ರಾವ್‌, ಆರೋಗ್ಯಾಧಿಕಾರಿ, ದ.ಕ. ಜಿಲ್ಲೆ

ನಾನು ಜನೌಷಧಿ ಕೇಂದ್ರ ಆರಂಭಗೊಂಡ ಬಳಿಕ ಅಲ್ಲಿಂದಲೇ ಔಷಧಗಳನ್ನು ಖರೀದಿಸುತ್ತೇನೆ. ಕೆಲವೊಂದು ಔಷಧಗಳು ಶೇ.90ರವರೆಗೂ ರಿಯಾಯಿತಿಯಲ್ಲಿ ಸಿಗುತ್ತಿದೆ. ಆದರೆ ಕೆಲವು ದಿನ ಸ್ಟಾಕ್‌ ಇಲ್ಲ ಎಂದು ಹೇಳುತ್ತಾರೆ. ಜತೆಗೆ ಖಾಸಗಿ ಮೆಡಿಕಲ್‌ಗೆ
ಮಾರಾಟವಾಗುವ ವಿಚಾರವನ್ನು ಮೆಡಿಕಲ್‌ ಶಾಪ್‌ ನಡೆಸುತ್ತಿರುವ ಗೆಳೆಯರೊಬ್ಬರು ತಿಳಿಸಿದ್ದಾರೆ.
 ● ಶಂಕರ್‌ ಭಟ್‌, ಬಿಜೈ ನಿವಾಸಿ

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.