ನಂತೂರು ಮೇಲ್ಸೇತುವೆ ಕಾಮಗಾರಿಗೆ ಒತ್ತಾಯ
Team Udayavani, Dec 29, 2017, 12:03 PM IST
ನಂತೂರು: ಇಲ್ಲಿನ ಜಂಕ್ಷನ್ ನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಮೇಲ್ಸೇತುವೆ ಕಾಮಗಾರಿಯನ್ನು ಆರಂಭಿಸಬೇಕು ಎಂದು ಪ್ರಜಾವಿಕಾಸ ಸೇವಾ ಟ್ರಸ್ಟ್ನ ಧರ್ಮೇಂದ್ರ ಒತ್ತಾಯಿಸಿದ್ದಾರೆ. ಪ್ರಜಾವಿಕಾಸ ಸೇವಾ ಟ್ರಸ್ಟ್ ಸಹಿತ ವಿವಿಧ ಸಂಘಟನೆಗಳ ಒಕ್ಕೂಟದಿಂದ ನಂತೂರು ಜಂಕ್ಷನ್ ಮೇಲ್ಸೇತುವೆ ಕಾಮಗಾರಿಗೆ ಒತ್ತಾಯಿಸಿ ನಂತೂರು ವೃತ್ತದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ನಗರದಲ್ಲಿ ಜನಸಂದಣಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೂಡುರಸ್ತೆಗಳ ಸಂಚಾರವನ್ನು ನಿಭಾಯಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲವೊಂದು ಕಡೆ ರಸ್ತೆ ವಿಸ್ತರಣೆ, ಮೇಲ್ಸೇತುವೆ, ಅಂಡರ್ ಪಾಸ್ನಂತಹ ಅಗತ್ಯವನ್ನು ಮನಗಂಡು ನಂತೂರು, ಬಸವಣ್ಣ ವೃತ್ತಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ನೀಡಲು ಶಾಸಕ, ಸಂಸದರು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಕಾಲಹರಣ: ಆರೋಪ
ಆಮ್ ಆದ್ಮಿ ಪಕ್ಷದ ಸಂಚಾಲಕ ರಾಜೇಂದ್ರ ಮಾತನಾಡಿ, ನಂತೂರು ವೃತ್ತದ ಅಪಾಯಕಾರಿಯಾಗಿ ಮಾರ್ಪಾಡಾಗುತ್ತಿದೆ. ಜಿಲ್ಲಾಡಳಿತಕ್ಕೆ 2004ರಿಂದಲೂ ಮೇಲ್ಸೇತುವೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ,ಕಾಮಗಾರಿ ನಡೆಸಲು ಸರಕಾರ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು. ನಂತೂರು ವೃತ್ತ ಪಕ್ಕದಲ್ಲಿಯೇ ಇರುವ ಬಸ್ ನಿಲ್ದಾಣವನ್ನು ಸ್ಥಳಾಂತರ ಮಾಡಿ ಫುಟ್ಪಾತ್ ನಿರ್ಮಾಣ ಮಾಡುತ್ತೇವೆ ಎಂದು ಮೇಯರ್ ಕವಿತಾ ಸನಿತ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದು, ಇದರಿಂದ ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ ಎಂದರು.
ನಂತೂರು ವೃತ್ತದ ಮೂಲಕ ಕೆಪಿಟಿ ಕಡೆಗೆ ತೆರಳುವ ಬಸ್ಗಳ ನಿಲ್ದಾಣವನ್ನು ಇಲ್ಲೇ ಪಕ್ಕದಲ್ಲಿರುವ ಉಲ್ಲಾಸ್ ಬಾರ್ ಪಕ್ಕಕ್ಕೆ ಸ್ಥಳಾಂತರಿಸಲಿ, ಅಲ್ಲದೆ ವೃತ್ತದ ಬಳಿಯೇ ಎರಡು ಬದಿಯಲ್ಲಿ ರಿಕ್ಷಾ ನಿಲ್ದಾಣವಿದ್ದು, ಒಂದು ಸರದಿಯ ರಿಕ್ಷಾಗಳು ಕೆಪಿಟಿ ಕಡೆಗೆ ಮಾತ್ರ ತೆರಳಲಿ ಮತ್ತೂಂದು ಸಾಲಿನ ರಿಕ್ಷಾಗಳು ಕದ್ರಿ ಮಾರ್ಗದಲ್ಲಿ ತೆರಳಲಿ, ಹೀಗಿದ್ದಾಗ ಅಪಘಾತ ಪ್ರಮಾಣ ಕಡಿಮೆಯಾಗಬಹುದು ಎಂದು ಸಲಹೆ ನೀಡಿದರು. ಇದೇ ವೇಳೆ ವಿಶ್ವನಾಥ್ ಕೆ.ಬಿ., ಪದ್ಮನಾಭ ಉಳ್ಳಾಲ್, ಮೊಹಮ್ಮದ್ ಮೊಹಿಸಿನ್, ಅಜಯ್ ಡಿ’ಸಿಲ್ವ, ರಾಜೇಂದ್ರ ಕುಮಾರ್, ಲೋಕೇಶ್ ಉಳ್ಳಾಲ್, ನಿತಿನ್ ಪಾಂಡೇಶ್ವರ್ ಸಹಿತ ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?