ಕಂಠಪೂರ್ತಿ ಕುಡಿದು ವಿಮಾನ ಚಲಾಯಿಸಲಿದ್ದ ಟರ್ಕಿ ಪೈಲಟ್‌!


Team Udayavani, Jan 18, 2018, 6:00 AM IST

Spicejet.jpg

ಮಂಗಳೂರು: ಮಂಗಳೂರಿನಿಂದ 180 ಮಂದಿ ಪ್ರಯಾಣಿಕರನ್ನು ಹೊತ್ತು ದುಬಾೖಗೆ ಮಂಗಳವಾರ ಮಧ್ಯರಾತ್ರಿ ಹೊರಡಬೇಕಿದ್ದ ಸ್ಪೈಸ್‌ ಜೆಟ್‌ ವಿಮಾನದ ಮುಖ್ಯ ಮಹಿಳಾ ಪೈಲಟ್‌ ಅತಿಯಾದ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಪರಿಣಾಮ ಸುಮಾರು ಐದು ತಾಸು ತಡವಾಗಿ ವಿಮಾನ ಟೇಕ್‌ಆಫ್ ಆದ ವಿಚಿತ್ರ ಹಾಗೂ ಆತಂಕಕಾರಿ ಘಟನೆ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಸಂಭವಿಸಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದ ಏಳೆಂಟು ತಿಂಗಳಿಂದ ಪದೇ ಪದೆ ಒಂದಲ್ಲ  ಒಂದು ರೀತಿಯ ಇಂತಹ ಎಡವಟ್ಟು ಸಂಭವಿಸುತ್ತಿದ್ದು, ಅದಕ್ಕೆ ಮತ್ತೂಂದು ಸೇರ್ಪಡೆಯೇ ಕಂಠ ಪೂರ್ತಿ ಕುಡಿದು ವಿಮಾನ ಚಲಾಯಿಸಲು ಬಂದ ಮಹಿಳಾ ಪೈಲಟ್‌ ಒಬ್ಬರು ಸೃಷ್ಟಿಸಿದ ಅವಾಂತರ. ಇದರಿಂದ ಮಂಗಳೂರು-ದುಬಾೖ ವಿಮಾನದಲ್ಲಿದ್ದ ಸುಮಾರು 180 ಪ್ರಯಾಣಿಕರು ಮಂಗಳವಾರ ಮಧ್ಯರಾತ್ರಿಯಿಂದ ಬೆಳಗಾಗುವ ತನಕ ನಿಲ್ದಾಣದಲ್ಲೇ ತೂಕ‌ಡಿಸುತ್ತ ಕುಳಿತು ಕೊಳ್ಳಬೇಕಾಯಿತು. ಸುಮಾರು ಐದು ಗಂಟೆಗಳ ಅನಂತರ ಬದಲಿ ಪೈಲಟ್‌ನ ವ್ಯವಸ್ಥೆಯೊಂದಿಗೆ ವಿಮಾನ ಟೇಕ್‌ಆಫ್ ಆಗಿದೆ.

ಈ ವಿಮಾನವು ಮಂಗಳವಾರ ರಾತ್ರಿ 12.40ಕ್ಕೆ ದುಬಾೖಗೆ ಹೊರಡಬೇಕಿತ್ತು. 180 ಮಂದಿ ಪ್ರಯಾಣಿಕರು ಬೋರ್ಡಿಂಗ್‌ ಆಗುವುದಕ್ಕೆ ವಿಮಾನ ನಿಲ್ದಾಣದಲ್ಲಿ ಚೆಕ್ಕಿಂಗ್‌ ಮುಗಿಸಿ ಕಾದು ಕುಳಿತಿದ್ದರು. ನಿಗದಿತ ಸಮಯಕ್ಕೆ ಹಾರಾಡುವುದಕ್ಕೆ ರನ್‌ವೇನಲ್ಲಿಯೂ ಎಲ್ಲ ರೀತಿಯ ತಯಾರಿ ನಡೆಸಲಾಗಿತ್ತು. 

ಪ್ರಯಾಣಿಕರು ಬೋರ್ಡಿಂಗ್‌ ಆಗುವುದಕ್ಕೂ ಎರಡು ತಾಸು ಮೊದಲು ಆ ವಿಮಾನದ ಪೈಲಟ್‌ ಅನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆ ಪ್ರಕಾರ, ಮಂಗಳೂರು-ದುಬಾೖ ವಿಮಾನವನ್ನು ಹಾರಾಡಿಸಬೇಕಾಗಿದ್ದ ಟರ್ಕಿ ದೇಶದ ಮುಖ್ಯ ಮಹಿಳಾ ಪೈಲಟ್‌ ಅನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ ಆಕೆಯು ಕಂಠಪೂರ್ತಿ ಕುಡಿದಿರುವ ವಿಚಾರ ವೈದ್ಯಾಧಿಕಾರಿಗಳ ಗಮನಕ್ಕೆ ಬಂತು. ತನ್ನ ಮೇಲೆ ನಿಯಂತ್ರಣವಿಲ್ಲದಷ್ಟರ ಮಟ್ಟಿಗೆ ಮದ್ಯ ಸೇವನೆ ಮಾಡಿರುವುದು ಗೊತ್ತಾದ ತತ್‌ಕ್ಷಣಕ್ಕೆ ಎಚ್ಚೆತ್ತುಕೊಂಡ ವಿಮಾನ ನಿಲ್ದಾಣದ ಸಂಬಂಧಪಟ್ಟ ಅಧಿಕಾರಿಗಳು, ಈ ಮೊದಲು ನಿಗದಿಪಡಿಸಿದ್ದ (ಮಧ್ಯರಾತ್ರಿ 12.40) ಮಂಗಳೂರು-ದುಬಾೖ ವಿಮಾನ ಹಾರಾಟದ ವೇಳೆಯನ್ನು ರದ್ದುಪಡಿಸಿದ್ದಾರೆ. ಜತೆಗೆ ಮಿತಿ ಮೀರಿ ಮದ್ಯ ಸೇವನೆ ಮಾಡಿದ್ದ ಸುಮಾರು 35 ವರ್ಷದ ಟರ್ಕಿಯ ಆ ಮಹಿಳಾ ಪೈಲಟ್‌ ವಿರುದ್ಧವೂ ನಿಯಮಾನುಸಾರ ಕ್ರಮ ಜರಗಿಸಲು ಸಂಬಂಧಪಟ್ಟ ವಿಮಾನ ಕಂಪೆನಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಬೆಳಗ್ಗೆ 6 ಗಂಟೆಗೆ ಹೊರಟ ವಿಮಾನ !
ಸ್ಪೈಸ್‌ ಜೆಟ್‌ನ ಈ ವಿಮಾನವು ನಿಗದಿತ ಸಮಯಕ್ಕೆ ಏಕೆ ಟೇಕ್‌ಅಪ್‌ ಆಗಿಲ್ಲ ಎನ್ನುವುದಕ್ಕೆ ಪ್ರಯಾಣಿಕರಿಗೆ ನಿಜವಾದ ಕಾರಣ ಗೊತ್ತಾಗಿಲ್ಲ. ತಾಂತ್ರಿಕ ದೋಷದ ಕಾರಣದಿಂದ ಮಂಗಳೂರು-ದುಬಾೖ ವಿಮಾನ ಹಾರಾಟ ವಿಳಂಬವಾಗಿರುವುದಾಗಿ ಅಧಿಕೃತ ಘೋಷಣೆ ಮಾಡಿದ್ದು, ಆ ವಿಚಾರವನ್ನೇ ಪ್ರಯಾಣಿಕರಿಗೂ ಮನವರಿಕೆ ಮಾಡಲಾಗಿದೆ.

ಈ ನಡುವೆ ಪೈಲಟ್‌ ಒಬ್ಬರು ಮಿತಿಮೀರಿ ಮದ್ಯಪಾನ ಮಾಡಿಕೊಂಡು ವಿಮಾನ ಚಲಾಯಿಸುವುದಕ್ಕೆ ಬಂದಿದ್ದ ವಿಚಾರ ವಿಮಾನ ನಿಲ್ದಾಣದ ಸಿಬಂದಿಗೆ ಗೊತ್ತಾಗಿದೆ. ಅಲ್ಲದೆ, ಪೈಲಟ್‌ ಮಾಡಿದ ಈ ಎಡವಟ್ಟಿನಿಂದಾಗಿ ವಿಮಾನ ನಿಲ್ದಾಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರಾತ್ರಿಯೆಲ್ಲ ನಿದ್ದೆಗೆಡುವ ಪ್ರಮೇಯ ಸೃಷ್ಟಿಯಾಗಿತ್ತು. ವಿಮಾನದ ತಾಂತ್ರಿಕ ದೋಷ ಗಂಟೆಯೊಳಗೆ ಸರಿಯಾಗಬಹುದು ಎಂಬ ನಿರೀಕ್ಷೆಯಲ್ಲಿ ಮಧ್ಯರಾತ್ರಿಯಿಂದ ಎದುರು ನೋಡುತ್ತ ಕಾದು ಕುಳಿತಿದ್ದವರೆಲ್ಲ ಬೆಳಗ್ಗಿನ ತನಕ ಹಾಗೆಯೇ ಕುಳಿತುಕೊಂಡಿದ್ದರು. ಕೊನೆಗೂ ಬುಧವಾರ ಬೆಳಗ್ಗೆ 6.05ಕ್ಕೆ ವಿಮಾನ ಟೇಕ್‌ಅಪ್‌ ಆಗುವುದಕ್ಕೆ ರನ್‌ವೇ ಸ್ಥಳಾವಕಾಶ ಲಭಿಸಿದ್ದು, ಬದಲಿ ಪೈಲಟ್‌ ನಿಯೋಜನೆಯೊಂದಿಗೆ ವಿಮಾನವು ದುಬಾೖಗೆ ಹಾರಾಟ ನಡೆಸಿದೆ.

ತಪ್ಪಿದ ಮತ್ತೂಂದು ಅನಾಹುತ
ಒಂದು ವೇಳೆ ವಿಮಾನದ ಪೈಲಟ್‌ ಮದ್ಯಸೇವನೆ ಮಾಡಿರುವುದು ವೈದ್ಯಾಧಿಕಾರಿಗಳ ಗಮನಕ್ಕೆ ಬಾರದೆ ಹೋಗಿದ್ದರೆ ಮದ್ಯದ ಅಮಲಿನಲ್ಲಿ ವಿಮಾನ ಚಲಾಯಿಸಿ ದೊಡ್ಡ ಅನಾಹುತಕ್ಕೆ ಎಡೆಯಾಗುವ ಅಪಾಯ ಇತ್ತು. ಈ ವಿಮಾನದ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಬಹುತೇಕ ಎಲ್ಲ ಸಿಬಂದಿ ಕೂಡ ಟರ್ಕಿ ದೇಶದವರೇ ಆಗಿದ್ದರೂ ವೈದ್ಯರ ಕಟ್ಟು ನಿಟ್ಟಿನ ತೀರ್ಮಾನವು ಪೈಲಟ್‌ ಮದ್ಯ ಸೇವನೆ ಮಾಡಿ ವಿಮಾನ ಚಲಾಯಿಸುವ ಸಂದರ್ಭವನ್ನು ತಪ್ಪಿಸುವ ಮೂಲಕ ಮಂಗಳೂರು-ದುಬಾೖ ವಿಮಾನದಲ್ಲಿ ಪ್ರಯಾಣಿಸಬೇಕಾಗಿದ್ದ ಎಲ್ಲ ಪ್ರಯಾಣಿಕರನ್ನು ಬಚಾವ್‌ ಮಾಡಿರುವುದು ಗಮನಾರ್ಹ.

ಟರ್ಕಿ ದೇಶದ ವಿಮಾನ
ಮಂಗಳೂರು-ದುಬಾೖ ಸ್ಪೈಸ್‌ ವಿಮಾನ ಸುಮಾರು ಒಂದು ವರ್ಷದಿಂದ ಮಂಗಳೂರಿನಿಂದ ಹಾರಾಟ ನಡೆಸುತ್ತಿದೆ. ಈ ವಿಮಾನವು ಟರ್ಕಿ ದೇಶದ ಕಾರ್ಡೊಲ್‌ ಕಂಪೆನಿಗೆ ಸೇರಿದ್ದಾಗಿದ್ದು, ಸ್ಪೈಸ್‌ ಜೆಟ್‌ ಕಂಪೆನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು ನಮ್ಮ ದೇಶದಲ್ಲಿ ತನ್ನ ವಿಮಾನಗಳನ್ನು ಹಾರಾಟ ನಡೆಸುತ್ತಿದೆ. ಈ ಕಾರಣದಿಂದಾಗಿ ಮಂಗಳೂರು-ದುಬಾೖ ನಡುವೆ ಸಂಚರಿ ಸುವ ಈ ಸ್ಪೈಸ್‌ ಜೆಟ್‌ನಲ್ಲಿ ಪೈಲಟ್‌ನಿಂದ ಹಿಡಿದು ಹೆಚ್ಚಿನ ಸಿಬಂದಿ ಕೂಡ ಟರ್ಕಿ ಮೂಲದವರೇ ಆಗಿದ್ದಾರೆ. ಮೂಲಗಳ ಪ್ರಕಾರ, ಪಾನಮತ್ತರಾಗಿ ಸಿಕ್ಕಿಬಿದ್ದಿರುವ ಟರ್ಕಿ ಮೂಲದ ಈ ಮಹಿಳಾ ಪೈಲಟ್‌ ಸದ್ಯ ನಗರದಲ್ಲೇ ವಾಸ್ತವ್ಯ ಹೂಡಿದ್ದು, ಸಂಬಂಧಪಟ್ಟ  ಮೇಲಧಿಕಾರಿಗಳಿಂದ ತನಿಖೆಗೆ ಒಳಗಾಗಿ ಆ ಬಗ್ಗೆ ಸೂಕ್ತ ತೀರ್ಮಾನ ಹೊರ ಬೀಳುವವರೆಗೂ ಆಕೆಗೆ ಯಾವುದೇ ವಿಮಾನ ಹಾರಾಟ ನಡೆಸುವುದಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

– ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.