ಜ. 19, 20: ರಾಷ್ಟ್ರೀಯ ಸಾಂಸ್ಕೃತಿಕ ಮಹೋತ್ಸವ ಮಂಗಳೂರು ಸಜ್ಜು


Team Udayavani, Jan 18, 2018, 10:49 AM IST

18-Jan-4.jpg

ಮಹಾನಗರ: ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಕಾರ್ಯಕ್ರಮದಡಿಯಲ್ಲಿ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ವತಿಯಿಂದ ಅದ್ದೂರಿಯ ರಾಷ್ಟ್ರೀಯ ಸಾಂಸ್ಕೃತಿಕ ಮಹೋತ್ಸವಕ್ಕೆ ಕಡಲನಗರಿ ಮಂಗಳೂರು ಸಜ್ಜಾಗುತ್ತಿದೆ. ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ, ಆಚಾರ- ವಿಚಾರ, ಆಹಾರ ಪದ್ಧತಿಯನ್ನು ಪರಿಚಯಿಸುವ ಈ ಉತ್ಸವವು ಜ. 19 ಮತ್ತು 20ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

ನೃತ್ಯ, ಸಂಗೀತ, ಕಲೆ, ಆಹಾರ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಈ ಉತ್ಸವದ ಪ್ರಮುಖ ಆಕರ್ಷಣೆಯಾಗಲಿದ್ದು, ನೂರಾರು ಕಲಾವಿದರು ತಮ್ಮ ಕಲಾ ಪ್ರದರ್ಶನವನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಈ ಉತ್ಸವವು ಜ. 14ಕ್ಕೆ ಬೆಂಗಳೂರಿನಲ್ಲಿ ಆರಂಭಗೊಂಡಿದ್ದು, ಜ. 17ರಿಂದ ಹುಬ್ಬಳ್ಳಿ- ಧಾರವಾಡದಲ್ಲಿ ನಡೆದು ಇದೀಗ ಜ. 19ರಿಂದ ಮಂಗಳೂರಿನಲ್ಲಿ ನಡೆಯುತ್ತದೆ. ಸಂಜೆ 6ರಿಂದ ಜನರು ಇದನ್ನು ವೀಕ್ಷಿಸಬಹುದಾಗಿದೆ.

26 ನೃತ್ಯ ತಂಡಗಳು
ವಿವಿಧ ರಾಜ್ಯಗಳ ಸುಮಾರು 26 ನೃತ್ಯ ತಂಡಗಳ ನೃತ್ಯ ಪ್ರದರ್ಶನ ಉತ್ಸವದಲ್ಲಿ ಕಾಣಬಹುದಾಗಿದೆ. ಅರುಣಾಚಲ ಪ್ರದೇಶದ ಪಕೀತು, ಉತ್ತರಾಕಾಂಡ್‌ನ‌ ಚೋಲಿಯಾ, ತಾಂಡ್ಯ, ಹೀಗೆ ಅನೇಕ ಬಗೆಯ ನೃತ್ಯ ಶೈಲಿ ಪ್ರದರ್ಶನಗೊಳ್ಳಲಿದೆ. ಸುಮಾರು 400ಕ್ಕೂ ಅಧಿಕ ಕಲಾವಿದರು ತಮ್ಮ ರಾಜ್ಯದ ಸಂಸ್ಕೃತಿಯನ್ನು ನೃತ್ಯದ ಮೂಲಕ ಪ್ರದರ್ಶಿಸಲಿದ್ದಾರೆ.

ವಿವಿಧ ರಾಜ್ಯಗಳ ಸ್ಟಾಲ್‌ಗ‌ಳು
ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವದಲ್ಲಿ ವಿವಿಧ ರಾಜ್ಯಗಳ 21 ಸ್ಟಾಲ್‌ಗ‌ಳಿರುತ್ತವೆ. ಅಲ್ಲಿನ ವಿಶೇಷ ಶೈಲಿಯ ಬಟ್ಟೆಗಳು, ಆಭರಣಗಳು, ಕರಕುಶಲ ವಸ್ತುಗಳು ಸಹಿತ ಇನ್ನಿತರ ಗೃಹೋಪಯೋಗಿ ಉತ್ಪನ್ನಗಳ ಪ್ರದರ್ಶನವಿರುತ್ತದೆ. ಗೋವಾದ ಸೀ ಶೆಲ್‌, ಗುಜರಾತ್‌ನ ಎಂಬ್ರೈಡರಿ, ರಾಜಸ್ಥಾನದ ಕೋಟ ದೋರಿಯಾ ಸಾರಿ, ಮಹಾರಾಷ್ಟ್ರದ ಕೋಲಾಪುರಿ ಚಪ್ಪಲ್‌, ಬೀಡ್‌ ವರ್ಕ್‌ ಜ್ಯುವೆಲ್ಲರಿ, ಮಧ್ಯಪ್ರದೇಶದ ಮಹೇಶ್ವರಿ ಸಾರಿ, ಉತ್ತರಾಖಂಡದ ಲೇಡಿಸ್‌ ಕುರ್ತಾ, ಹೋಮ್‌ ಫರ್ನಿಶಿಂಗ್‌, ಬೆಡ್‌ ಶೀಟ್‌, ಝಾರ್ಖಂಡ್‌ನ‌ ಸಾರೀ, ಪಂಜಾಬ್‌ನ ಪುಲ್ಕರಿ ಸೂಟ್ಸ್‌, ಪಂಜಾಬಿ ಜುಟ್ಟಿ, ಪಶ್ಚಿಮ ಬಂಗಾಲದ ಕಾಂತಾ ಸ್ಟಿಚ್‌, ಟೆರ್ರಾಕೋಟಾ ಜುವೆಲ್ಲರಿ, ಅಸ್ಸಾಂನ ಬ್ಯಾಂಬೋ, ಕೇನ್‌, ವುಡ್‌ ಉತ್ಪನ್ನಗಳು, ಒಡಿಶಾದ ಪಾಮ್‌ ಲೀಫ್‌ ಚಿತ್ರಗಳ ಪ್ರದರ್ಶನವಿರುತ್ತದೆ.

ಆಹಾರ ಮಳಿಗೆಗಳು
ಮಹೋತ್ಸವದಲ್ಲಿ ಬೇರೆ ರಾಜ್ಯಗಳ 5 ಸ್ಟಾಲ್‌ಗ‌ಳು ಕೂಡ ಇರುತ್ತದೆ. ರಾಜಾಸ್ಥಾನ, ಮಹಾರಾಷ್ಟ್ರ, ಬಿಹಾರ, ಇತ ರ ರಾಜ್ಯಗಳ ಖಾದ್ಯಗಳು ಕೂಡ ಪ್ರದರ್ಶನಗೊಳ್ಳಲಿದೆ.

ಏಕತೆ ಸಾರುವ ಪ್ರದರ್ಶನ
ದೇಶದ ವಿವಿಧ ರಾಜ್ಯಗಳ ಜನರ ಸಂಸ್ಕೃತಿಯನ್ನು ಪರಸ್ಪರ ಅರಿತುಕೊಂಡು ಹೊಂದಾಣಿಕೆಯಿಂದ ಬದುಕುವುದೇ
ಮಹೋತ್ಸವದ ಮೂಲ ಉದ್ದೇಶವಾಗಿದೆ. ದೇಶದ ವೈವಿಧ್ಯತೆ ಹಾಗೂ ಏಕತೆ ಸಾರುವ ಉತ್ಸವದಲ್ಲಿ ವಿವಿಧ ರಾಜ್ಯಗಳ ಕಲಾವಿದರು ತಮ್ಮ ಕಲಾನೈಪುಣ್ಯ ಪ್ರದರ್ಶಿಸಲಿದ್ದಾರೆ.
 - ನಳಿನ್‌ಕುಮಾರ್‌ ಕಟೀಲು
    ಸಂಸದರು

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.