‘ಕಾಲೇಜು ರಂಗೋತ್ಸವ’ಕ್ಕೆ ಕಾಲೇಜುಗಳಿಂದ ಅರ್ಜಿ ಆಹ್ವಾನ
Team Udayavani, Jan 20, 2018, 12:42 PM IST
ಮಹಾನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ರಂಗಾಯಣ ವಲಯಕ್ಕೆ ಸೇರಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಕಾಲೇಜು ರಂಗೋತ್ಸವಕ್ಕೆ ಕಲಾ ತಂಡಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯ ಆರು ಕಾಲೇಜುಗಳು ಮಾತ್ರ ಜಿಲ್ಲಾ ಮಟ್ಟದ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಸಕ್ತ ಕಾಲೇಜಿನ ಪ್ರಾಂಶುಪಾಲರು ಅರ್ಜಿ ಸಲ್ಲಿಸಬಹುದು. ನಾಟಕ ಮತ್ತು ಜಾನಪದ ನೃತ್ಯ ವಿಭಾಗಗಳಿಗೆ ಅಥವಾ ಯಾವುದಾದರೂ ಒಂದು ವಿಭಾಗಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು. ನಾಟಕದ ಆಯ್ಕೆ, ನಾಟಕದ ನಿರ್ದೇಶಕರು, ಜನಪದ ಪ್ರಕಾರದ ಆಯ್ಕೆ, ತರಬೇತುದಾರರು ಮುಂತಾದ ವಿವರಗಳನ್ನು ಪರಿಗಣಿಸಿ ಕಾಲೇಜು ರಂಗೋತ್ಸವಕ್ಕೆ ತಂಡಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಕಾಲೇಜುಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕಿದೆ.
ಆಸಕ್ತ ಕಾಲೇಜುಗಳು ಸ್ವಇಚ್ಛೆಯಿಂದ ಖರ್ಚು ವೆಚ್ಚಗಳನ್ನು ಭರಿಸಿ ನಾಟಕ ಮತ್ತು ಜನಪದ ನೃತ್ಯ ತಂಡಗಳನ್ನು ಸಿದ್ಧಗೊಳಿಸಿಕೊಂಡಲ್ಲಿ ಅಂತಹ ತಂಡಗಳಿಗೆ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
ನಾಟಕ ಮತ್ತು ಜನಪದ ಪ್ರಕಾರದಲ್ಲಿ ಭಾಗವಹಿಸುವ ಕಲಾವಿದ ಮತ್ತು ಸಂಗೀತಗಾರ ವಿದ್ಯಾರ್ಥಿ/ನಿಯರ, ನೇಪಥ್ಯಗಾರ ಸಂಖ್ಯೆ ಕನಿಷ್ಠ 10 ಮತ್ತು 20 ಮೀರಬಾರದು. ಒಂದೇ ಕಾಲೇಜಿನವರಾಗಿರಬೇಕು. ಗುರುತಿನ ಚೀಟಿ ಕಡ್ಡಾಯ. ನೇಪಥ್ಯಗಾರ ಸೇವೆಯನ್ನು ಎರವಲು ಪಡೆಯಬಹುದು. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ
ತಂಡವು ವಲಯ ಮಟ್ಟಕ್ಕೆ ಆಯ್ಕೆಗೊಂಡಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳೇ ವಲಯ ಮಟ್ಟದಲ್ಲೂ ಭಾಗವಹಿಸಬೇಕು.
ಸ್ಪರ್ಧೆಯಲ್ಲಿ ಭಾಗವಹಿಸುವ ನಾಟಕದ ಅವಧಿ ಕನಿಷ್ಠ 60 ನಿಮಿಷ ಗರಿಷ್ಠ 90 ನಿಮಿಷ ಜಾನಪದ ನೃತ್ಯಕ್ಕೆ ಕಾಲಾವಕಾಶ ಕನಿಷ್ಠ 10 ನಿಮಿಷ, ಗರಿಷ್ಠ 20 ನಿಮಿಷ. ಆಸಕ್ತ ಕಾಲೇಜುಗಳು ಅರ್ಜಿಗಳನ್ನು ಜ. 21ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ ಉರ್ವ ಸ್ಟೋರ್ ಅಶೋಕನಗರ ಅಂಚೆ, ಮಂಗಳೂರು- 575006 ಇಲ್ಲಿಗೆ ಕಳುಹಿಸಿಕೊಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್