ಸಮೂಹ ಶಿಕ್ಷಣ ಸಂಸ್ಥೆಗಳ ದಿನಾಚರಣೆ
Team Udayavani, Jan 20, 2018, 12:48 PM IST
ಉಳ್ಳಾಲ: ಇಲ್ಲಿನ ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಧರ್ಮಕೇಂದ್ರದ ಶತಮಾನೋತ್ಸವ ಸಂಭ್ರಮದ ಪ್ರಥಮ ದಿನವಾದ ಶುಕ್ರವಾರ ಧರ್ಮಕೇಂದ್ರದ ಸಮೂಹ ಶಿಕ್ಷಣ ಸಂಸ್ಥೆಗಳ ದಿನಾಚರಣೆಯ ಅಂಗವಾಗಿ ಕೃತಜ್ಞತಾ ಪೂಜೆಯು ಧರ್ಮಕೇಂದ್ರದಲ್ಲಿ ನಡೆಯಿತು.
ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಫ್ರಾನ್ಸಿಸ್ ಸೆರಾವೊ,ಪೂಜೆ ನೆರವೇರಿಸಿ, ಶಿಕ್ಷಣ ಸಂಸ್ಥೆಗಳು ಜಾತಿ, ಮತ, ಭೇದ ಮರೆತು ಇತರರಿಗೆ ಬೆಳಕು ನೀಡುವ ದೀಪವಾಗಬೇಕು ಎಂದರು. ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಧರ್ಮಕೇಂದ್ರದ ಧರ್ಮಗುರು ವಂ| ಡಾ| ಜೆ.ಬಿ. ಸಲ್ದಾನ್ಹ, ಕೆಥೋಲಿಕ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಂದನೀಯ ಜೆರಾಲ್ಡ್ ಡಿ’ಸೋಜಾ, ಸಂತ ಸೆಬಾಸ್ಟಿಯನ್ ಧರ್ಮಕೇಂದ್ರದ ಸಹಾಯಕ ಧರ್ಮಗುರುಗಳಾದ ಫಾ| ಸ್ಟಾನಿ ಪಿಂಟೋ, ಫಾ| ಲೈಝಿಲ್ ಡಿ’ಸೋಜಾ, ಸಂತ ಸೆಬಾಸ್ಟಿಯನ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಫಾ| ಎಡ್ವಿನ್ ಮಸ್ಕರೇನ್ಹಸ್, ವಂ| ಫೆಲಿಕ್ಸ್ ನೊರೊನ್ಹಾ , ಧರ್ಮಭಗಿನಿಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ