ವಸ್ತು ವಿಜ್ಞಾನ, ಜೈವಿಕ ಭೌತಶಾಸ್ತ್ರ ಸಂಶೋಧನೆಗಳು ಅಗತ್ಯ
Team Udayavani, Jan 24, 2018, 10:19 AM IST
ಮಂಗಳಗಂಗೋತ್ರಿ: ವಸ್ತು ವಿಜ್ಞಾನ, ಜೈವಿಕ ಭೌತಶಾಸ್ತ್ರದಲ್ಲಿ ವಿಪುಲ ಅವಕಾಶಗಳಿದ್ದು, ಸುಧಾರಣೆಗಳು ನಡೆಯುತ್ತಿವೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಗಳು ನಡೆದರೆ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಬಹುದು ಎಂದು ಆಸ್ಟ್ರೇಲಿಯಾ ಕ್ಯಾನಿಬೇರಾದ ರಾಷ್ಟ್ರೀಯ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ| ಚೆನ್ನುಪತಿ ಜಗದೀಶ್ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯ ಇದರ ಭೌತಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ವಸ್ತು ವಿಜ್ಞಾನ ಮತ್ತು ಜೈವಿಕ ಭೌತಶಾಸ್ತ್ರ ದ ಇತ್ತೀಚಿನ ಬೆಳವಣಿಗೆಗಳು (ಆರ್ಎಎಂಎಸ್ಬಿ) ಎಂಬ ವಿಷಯದ ಬಗ್ಗೆ ಮಂಗಳಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಆಡಿಟೋರಿಯಂನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಕಾರ್ಯಾಗಾರಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ಯಾವುದೇ ಕ್ಷೇತ್ರ ಬೆಳವಣಿಗೆ ಯಾಗಬೇಕಾದರೆ ಆ ಕ್ಷೇತ್ರದಲ್ಲಿ ಸಂಶೋಧನೆಗಳು ಅಗತ್ಯ. ನಮ್ಮ ನಿತ್ಯ ಜೀವನದಲ್ಲಿ ಬಳಸುವ ವಸ್ತುಗಳಿಗೆ ಸಂಬಂಧಿಸಿದಂತೆ ಈ ಸಂಶೋಧನೆಗಳು ಸಹಕಾರಿಯಾಗಲಿದ್ದು, ಕಾರ್ಯಾಗಾರಗಳಿಂದ ಉತ್ತಮ ಮಹಿತಿ ಪಡೆಯಬಹುದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿ.ವಿ.ಯ ಉಪ ಕುಲಪತಿ ಪ್ರೊ| ಕೆ. ಭೈರಪ್ಪ ವಹಿಸಿದ್ದರು. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಸಚಿವ ಪ್ರೊ| ಬಿ.ಎಸ್. ನಾಗೇಂದ್ರ ಪ್ರಕಾಶ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೊ| ಯೆರೊಲ್ ನಾರಾಯಣ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಶೋಧನ ವಿದ್ಯಾರ್ಥಿನಿ ಪಾರ್ವತಿ ವೇಣು ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ರವಿಚಂದ್ರ ಆಚಾರ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?