ತೆಂಗು ಕೀಟ ಬಾಧೆ, ಮೀನು ಸಾಕಣೆ ಪ್ರಾತ್ಯಕ್ಷಿಕೆ, ಕಾರ್ಯಾಗಾರ 


Team Udayavani, Jan 24, 2018, 12:12 PM IST

24-Jan-12.jpg

ಮೂಡಬಿದಿರೆ: ಸಮಗ್ರ ಕೃಷಿಯಿಂದ ಮಾತ್ರ ನ್ಯಾಯಬದ್ಧ ಲಾಭ ಸಿಗಲು ಸಾಧ್ಯ. ರೈತರಿಗೆ ವಿಜ್ಞಾನದ ಅಂಶಗಳನ್ನು ಮಾತ್ರ ತಿಳಿಸಿದರೆ ಸಾಲದು. ಜತೆಗೆ ಅರ್ಥಶಾಸ್ತ್ರದ ಲೆಕ್ಕಾಚಾರಗಳನ್ನೂ ಕಲಿಸಬೇಕಾಗಿದೆ ಎಂದು ಜಿಲ್ಲಾ ಕೃಷಿ
ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಶಿವಕುಮಾರ ಮಗದ ಹೇಳಿದರು.

ಮೂಡಬಿದಿರೆಯ ಎಂಸಿಎಸ್‌ ಬ್ಯಾಂಕ್‌ ಕಲ್ಪವೃಕ್ಷ ಸಭಾಂಗಣದಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರ, ಮಂಗಳೂರಿನ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮೂಡಬಿದಿರೆ ಇನ್ನರ್‌ವೀಲ್‌ ಕ್ಲಬ್‌ ಮತ್ತು ಎಂ.ಸಿ.ಎಸ್‌. ಬ್ಯಾಂಕ್‌ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ತೆಂಗು ಕೀಟ ಬಾಧೆ ಮತ್ತು ಮೀನು ಸಾಕಣೆ ಕುರಿತಾದ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.  ರೈತರು ಹೆಚ್ಚುವರಿ ವೆಚ್ಚವಿಲ್ಲದೆ ವೈವಿಧ್ಯಮಯ ಮೀನು ಸಾಕಣೆಯನ್ನು ಕೈಗೊಂಡು ಬದುಕನ್ನು ಹಸನಾಗಿಸಿ ಕೊಳ್ಳಬಹುದು. ಮೂರು ನಾಲ್ಕು ಅಡಿ ಗಳಷ್ಟು ನೀರು ನಿಲ್ಲುವ ಹೊಲಗಳು, ಸಾಂಪ್ರದಾಯಿಕ ಕಟ್ಟಗಳು, ಕೆರೆಗಳು, ಸಿಮೆಂಟ್‌ ತೊಟ್ಟಿಗಳು, ಭತ್ತದ ಬೆಳೆಯ ನಡುವಿನ ಬಸಿಗಾಲುವೆಗಳೂ ಸೇರಿದಂತೆ ವಿವಿಧೆಡೆ ಮೀನು ಸಾಕಬಹುದು. ಈ ಬಗ್ಗೆ ಇಲಾಖೆಯಿಂದ ಆಸಕ್ತರಿಗೆ ಮಾಹಿತಿ, ಯೋಜನ ವರದಿ, ಮೀನುಮರಿಗಳನ್ನು ಒದಗಿಸಲಾಗುವುದು. ಊರಿನ ಕೋಳಿ ಯಂತೆ ಸ್ವರ್ಣಧಾರಾ ಕೋಳಿಯನ್ನು ಸಾಕಿ ಗರಿಷ್ಟ ಲಾಭ ಮಾಡಿಕೊಳ್ಳಬಹುದು ಎಂದರು.

ತೆಂಗು ಕೀಟ ಬಾಧೆ ಮತ್ತು ನಿವಾರಣೆ
ಕಾಸರಗೋಡು ಸಿಪಿಸಿಆರ್‌ಐ ಮುಖ್ಯ ವಿಜ್ಞಾನಿ ಡಾ| ವಿನಾಯಕ ಹೆಗ್ಡೆ ಅವರು ತೆಂಗು ಕೀಟ ಬಾಧೆ ಮತ್ತು ನಿವಾರಣೆಯ ಕುರಿತು ಮಾಹಿತಿ ನೀಡಿದರು. ಗರಿ ತಿನ್ನುವ ಕೀಟ, ಬಿಳಿ ಹುಳ, ಬಿಳಿ ನೊಣ, ನುಸಿ ಪೀಡೆ ಮೊದಲಾದ ಕೀಟ ಬಾಧೆಗಳ ಬಗ್ಗೆ ವಿವರಿಸಿ ಕೀಟನಾಶಕಗಳು ಮಾತ್ರವಲ್ಲ ಜೈವಿಕ ವಿಧಾನಗಳ ಮೂಲಕ ಅವುಗಳನ್ನು ನಿಯಂತ್ರಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿಜ್ಞಾನಿಗಳೊಂದಿಗೆ ರೈತರು ಸಂವಾದ ನಡೆಸಿದರು.

ಉದ್ಘಾಟನೆ
ಮೂಡಬಿದಿರೆ ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೇಮನಾಥ ಆಳ್ವ, ಸಿಇಒ
ಉದಯ ಹೆಗ್ಡೆ ಆಡಳಿತ ಮಂಡಳಿ ಸದಸ್ಯ ಸಂಪತ್‌ ಸಾಮ್ರಾಜ್ಯ, ಸಹಾಯಕ ಕೃಷಿ ಅಧಿಕಾರಿ ಪ್ರದೀಪ್‌ ಡಿ’ಸೋಜಾ
ಭಾಗವಹಿಸಿದ್ದರು. ಎಂಸಿಎಸ್‌ ಬ್ಯಾಂಕ್‌ ಸಿಇಒ ಚಂದ್ರಶೇಖರ ಎಂ., ಕೃ.ವಿ.ವಿ. ಕೇಂದ್ರದ ಉಪಾಧ್ಯಕ್ಷ ಸುಭಾಶ್ಚಂದ್ರ
ಚೌಟ ಉಪಸ್ಥಿತರಿದ್ದರು. ವಲಯ ರೈತ ಸಂಘದ ಅಧ್ಯಕ್ಷ ಧನಕೀರ್ತಿ ಬಲಿಪ ಸ್ವಾಗತಿಸಿದರು. ಕೃ. ವಿ. ವಿ. ಕೇಂದ್ರದ ಜತೆ ಕಾರ್ಯದರ್ಶಿ ಸುಜಾತಾ ರಮೇಶ್‌ ನಿರೂಪಿಸಿದರು. ಕಾರ್ಯದರ್ಶಿ ಜಿನೇಂದ್ರ ಜೈನ್‌ ವಂದಿಸಿದರು.

ಮರಳಿ ಸಾವಯವದತ್ತ
ನೀರು ನಿಲ್ಲುವ ಗದ್ದೆಗಳು ನಾಶವಾಗಿ ಜಲಮೂಲ ಕ್ಷೀಣಿಸುತ್ತಿರುವುದು, ರಾಸಾಯನಿಕಗಳ ಎಗ್ಗಿಲ್ಲದ ಬಳಕೆಯಿಂದ ಪರಿಸರ ನಾಶವಾಗುತ್ತಿದೆ. ಸ್ವಯಂಕೃತ ಅಪರಾಧಗಳಿಂದಾಗಿ ನಮ್ಮ ಭವಿಷ್ಯವನ್ನು ನಾವೇ ಹಾಳುಗೆಡಹುತ್ತಿದ್ದೇವೆ. ನಾವು ಮತ್ತೆ ಸಾವಯವದತ್ತ ಹೊರಳಿಕೊಳ್ಳಬೇಕಾಗಿದೆ.
ರಾಜವರ್ಮ ಬೈಲಂಗಡಿ,
  ಅಧ್ಯಕ್ಷ, ಕೃಷಿ ವಿಚಾರ ವಿನಿಮಯಕೇಂದ್ರ 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.