ಯಕ್ಷಗಾನಕ್ಕೆ ಗಣೇಶ್‌ ಕೊಲೆಕಾಡಿ ಕೊಡುಗೆ ಅನನ್ಯ


Team Udayavani, Jan 24, 2018, 12:32 PM IST

24-Jan-14.jpg

ಮೂಲ್ಕಿ: ಯಕ್ಷಗಾನದ ಹೊಸ ಅವಿಷ್ಕಾರದ ಪ್ರಯೋಗಗಳಿಂದ ಯಕ್ಷಗಾನದ ಮೂಲ ವಸ್ತುವಿನ ಸ್ವರೂಪಕ್ಕೆ ಧಕ್ಕೆ ಉಂಟಾಗಬಹುದು ಎಂಬ ಆತಂಕದ ವಾತಾವರಣ ಜನರಲ್ಲಿ ನಿರ್ಮಾಣವಾಗಿದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಡಾ| ಭಾಸ್ಕರಾನಂದ ಕುಮಾರ್‌ ಹೇಳಿದರು.

ಅವರು ಮೂಲ್ಕಿಯ ಕುಂಜಾರುಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಸಾಧಕ, ಕವಿ
ಹಾಗೂ ಛಂದಸ್ಸು ಪ್ರವೀಣಾ ಯಕ್ಷಗುರು ಗಣೇಶ್‌ ಕೊಲೆಕಾಡಿಯವರಿಗೆ ಅವರ ಅಭಿಮಾನಿಗಳಿಂದ ನಡೆದ ಸಮ್ಮಾನ ಹಾಗೂ ಗೌರವಾರ್ಪಣೆಯ ಸಮಾರಂಭದಲ್ಲಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡಿದರು.

ಗಣೇಶ್‌ ಕೊಲೆಕಾಡಿ ಅವರು ಯಕ್ಷಗಾನ ಪ್ರಪಂಚಕ್ಕೆ ನೀಡಿರುವ ಕೊಡುಗೆ ಅತ್ಯಮೂಲ್ಯವಾದದ್ದು. ಅವರು
ಯಕ್ಷಗಾನದ ಉಳಿವಿನಲ್ಲಿ ಕ್ರಾಂತಿಕಾರಿಯಾಗಿ ಹಲವು ಸಾಧನೆ ಮಾಡುವ ಮೂಲಕ ವಿಶೇಷ ವ್ಯಕ್ತಿತ್ವವನ್ನು ಪಡೆದಿರುವ ಅಸಮಾನ್ಯ ಸಾಧಕ ಎಂದರು.

ಶಿಷ್ಯರಿಗೆ ತರಬೇತಿ
ಧಾರ್ಮಿಕ ಮುಂದಾಳು ವಾದಿರಾಜ ಉಪಾಧ್ಯಾಯ ಮಾತನಾಡಿ, ಗಣೇಶ್‌ ಕೊಲೆಕಾಡಿಯವರು ಹಲವು ವರ್ಷ
ಗಳಿಂದ ಒಂದು ತಪಸ್ಸಿನಂತೆ ತನ್ನ ಅನಾರೋಗ್ಯದ ಕಾಲದಲ್ಲೂ ಯಕ್ಷಗಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ ಶಿಷ್ಯವೃಂದದವರಿಗೆ ತರಬೇತಿ ನೀಡಿ ಪ್ರಬುದ್ಧ ಕಾಲವಿದರನ್ನು ಬೆಳೆಸಿದ್ದಾರೆ ಎಂದರು.

ಖ್ಯಾತ ಛಂದಸ್ಸುಕಾರ ಡಾ| ನಾರಾಯಣ ಶೆಟ್ಟಿ ಶಿಮಂತೂರು, ರಾಜ್ಯ ಕ.ಸಾ.ಪ. ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,
ನಾಡೋಜ ಕೆ.ಪಿ.ರಾವ್‌, ತೆಂಕು ತಿಟ್ಟಿನ ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರೀ ಅವರು ಗಣೇಶ ಕೊಲಕಾಡಿಯ
ವರನ್ನು ಅಭಿನಂದಿಸಿ ಮಾತನಾಡಿದರು. ಸಮ್ಮಾನಕ್ಕೆ ಉತ್ತರಿಸಿದ ಗಣೇಶ ಕೊಲೆಕಾಡಿ, ನನ್ನ ಬದುಕು ಇರುವುದೇ
ಅಭಿಮಾನಿಗಳ ಪ್ರೀತಿಯಿಂದ. ನಾನು ಮಾಡಿರುವ ಸಾಧನೆಯೆಲ್ಲ ನನ್ನ ಗುರುಗಳಿಗೆ ಹಾಗು ಅಭಿಮಾನಿಗಳಿಗೆ ಸಲ್ಲಬೇಕು ಎಂದರು.

ಗಣೇಶ್‌ ಕೊಲೆಕಾಡಿಯವರಿಗೆ ಅವರ ತಾಯಿಯ ಜತೆಗೆ ಶಿಷ್ಯರಿಂದ ಹಾಗೂ ಸಮಿತಿಯ ವತಿಯಿಂದ ಗೌರವಾರ್ಪಣೆ
ಹಾಗೂ ನಿಧಿಸಮರ್ಪಣೆ ನಡೆಯಿತು. ಅವರ ಗುರುಗಳಾಗಿದ್ದ ದಿ| ಎಂ.ಡಿ. ಮೂಲ್ಕಿ ಅವರ ಪರವಾಗಿ ಗೋಪಿನಾಥ ಪಡಂಗರಿಗೆ ಹಾಗೂ ದಿ| ಸರಸ್ವತಿ ತಿಮ್ಮಪ್ಪ ಶೆಟ್ಟಿ ಬಾಳಿಕೆ ಮನೆ ಇವರ ಪರವಾಗಿ ರಾಮದಾಸ ಶೆಟ್ಟಿ ಮತ್ತು ಹವ್ಯಾಸಿ
ಕಲಾವಿದ ಸುಕುಮಾರ್‌ ಶೆಟ್ಟಿ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ, ಮುರಳೀಧರ ಭಟ್‌ ಕಟೀಲು, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್‌, ಭುವನಾಭಿರಾಮ ಉಡುಪ, ಸತ್ಯಜಿತ್‌ ಸುರತ್ಕಲ್‌, ಕಿಲ್ಪಾಡಿ ಬಂಡಸಾಲೆ ಶೇಖರ್‌ ಶೆಟ್ಟಿ, ಲಕ್ಷ್ಮೀ ಟಿ.ಎನ್‌. ಕೋಟ್ಯಾನ್‌, ಸುಶೀಲಾ ನಾರಾಯಣ ಶೆಟ್ಟಿ ಅತಿಥಿಗಳಾಗಿದ್ದರು. ಸಮಿತಿಯ ಅಧ್ಯಕ್ಷ ಗೋಪಿನಾಥ ಪಡಂಗ ಸ್ವಾಗತಿಸಿದರು. ಸಾಯಿನಾಥ ಶೆಟ್ಟಿ ನಿರೂಪಿಸಿದರು. ಕಾರ್ಯದರ್ಶಿ ಸಂದೀಪ್‌ ಕೋಟ್ಯಾನ್‌ ವಂದಿಸಿದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.