ಬಿಸಿಯೂಟ ನಿರಾಕರಣೆ ನೀಚ ರಾಜಕೀಯ: ಎಂ.ಎಸ್. ಮಹಮ್ಮದ್
Team Udayavani, Feb 11, 2018, 8:15 AM IST
ಮಂಗಳೂರು: ಕಲ್ಲಡ್ಕ ಹಾಗೂ ಪುಣಚದ ಶಾಲೆಗಳು ಅನುದಾನಿತ ಶಾಲೆಗಳಲಾಗಿದ್ದು, ಅವು ಸರಕಾರದ ಬಿಸಿಯೂಟ ಯೋಜನೆಯನ್ನು ಪಡೆಯಲು ಅರ್ಹವಾಗಿವೆ. ಶಾಲೆಯ ಆಡಳಿತ ಮಂಡಳಿ ಸರಕಾರದ ಇತರ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಬಿಸಿಯೂಟವನ್ನು ನಿರಾಕರಿಸುವ ಮೂಲಕ ನೀಚ ರಾಜಕೀಯ ಮಾಡುತ್ತಿದೆ ಎಂದು ದ.ಕ.ಜಿ.ಪಂ. ವಿಪಕ್ಷ ನಾಯಕ ಎಂ.ಎಸ್. ಮಹಮ್ಮದ್ ಆರೋಪಿಸಿದರು.
ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಎರಡು ಶಾಲೆಗಳಿಗೆ ಮಧ್ಯಾಹ್ನದ ಊಟಕ್ಕಾಗಿ ಕೊಲ್ಲೂರು ದೇಗುಲದಿಂದ ಬರುತ್ತಿದ್ದ ಅನುದಾನವನ್ನು ಸರಕಾರ ನಿಲ್ಲಿಸಿದೆ ಎಂಬ ಆರೋಪ ಮಾಡಲಾಗುತ್ತಿದೆ. ಈ ರೀತಿ ದೂರದ ಶಾಲೆಗಳಿಗೆ ಅನುದಾನ ನೀಡಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಸರಕಾರ ಅನುದಾನ ನಿಲ್ಲಿಸಿದೆ.
ಆದರೆ ಇದನ್ನೇ ಕಾರಣವಾಗಿಟ್ಟುಕೊಂಡು ಶಾಲಾ ಆಡಳಿತ ಮಂಡಳಿ ಮಕ್ಕಳಿಂದ ಭಿಕ್ಷೆ ಬೇಡಿಸುವ ಕೆಲಸ ಮಾಡಿದೆ. ಅನುದಾನ ನಿಲ್ಲಿಸಿರುವ ವಿಚಾರ ಜಿ.ಪಂ. ಸಾಮಾನ್ಯ ಸಭೆಯಲ್ಲೂ ಚರ್ಚೆಯಾಗಿದ್ದು, ಆ ಶಾಲೆಗಳಿಗೆ ಅಕ್ಷರ ದಾಸೋಹ ಯೋಜನೆಯಲ್ಲಿ ಬಿಸಿಯೂಟ ನೀಡುವಂತೆ ಕಾಂಗ್ರೆಸ್ ಜಿ.ಪಂ. ಸದಸ್ಯರು ಆಗ್ರಹಿಸಿದ್ದೇವೆ.
ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿ ಅವರು ಅನುದಾನ ಕಡಿತ ಮಾಡಿರುವ ವಿಚಾರವನ್ನು ವಿಧಾನ ಪರಿಷತ್ ಕಲಾಪದಲ್ಲೂ ಪ್ರಸ್ತಾಪಿಸಿರುವುದು ಖಂಡನೀಯ. ಕೊಲ್ಲೂರಿನ ಅನುದಾನವನ್ನು ಸ್ಥಳೀಯ ಶಾಲೆಗಳಿಗೆ ನೀಡುವುದರಲ್ಲಿ ನಮ್ಮ ವಿರೋಧವಿಲ್ಲ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ, ಜಿ.ಪಂ. ಸದಸ್ಯರಾದ ಡಿ.ಎಸ್. ಮಮತಾ ಗಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಬಿ. ಪದ್ಮಶೇಖರ್ ಜೈನ್, ಧರಣೇಂದ್ರ, ಮಂಜುಳಾ ಮಾವೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ