ಹೆದ್ದಾರಿಯಲ್ಲಿ ದರೋಡೆ: ಮೂವರ ಸೆರೆ
Team Udayavani, Feb 17, 2018, 8:15 AM IST
ಮಂಗಳೂರು: ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ತಣ್ಣೀರುಬಾವಿ ಕಡೆಗೆ ಹಾದು ಹೋಗುವಲ್ಲಿ ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ, ಹಣ ಹಾಗೂ ಚಿನ್ನಾಭರಣ ದರೋಡೆ ಮಾಡುತ್ತಿದ್ದ ತಂಡದ ಮೂವರನ್ನು ಪಣಂಬೂರು ಪೊಲೀಸರು ಶುಕ್ರವಾರ ಬೆಳಗ್ಗಿನ ಜಾವ ಬಂಧಿಸಿದ್ದಾರೆ.
ಉಡುಪಿ ಅಂಬಲಪಾಡಿಯ ಪ್ರದೀಪ್ ಕುಮಾರ್ ಯಾನೆ ಪ್ರದೀಪ್ ಮೆಂಡನ್ (47), ಕುದ್ರೋಳಿ ಬೆಂಗ್ರೆಯ ಸುನಿಲ್ (20) ಮತ್ತು ಬೋಳಾರದ ಚರಣ್ ಶೇಟ್ ಬಂಧಿತರು. ಭರತ್ ಮತ್ತು ನವೀನ್ ಕಾರ್ಯಾಚರಣೆ ವೇಳೆ ಓಡಿ ತಪ್ಪಿಸಿಕೊಂಡಿದ್ದಾರೆ. ಬಂಧಿತರಿಂದ ತಲವಾರು, ಮೆಣಸಿನ ಹುಡಿ, ಹಗ್ಗವನ್ನು ವಶಪಡಿಸಿಕೊಳ್ಳಲಾಗಿದೆ.
ಕೊಲೆಗೆ ಸಂಚು
ತಣ್ಣೀರುಬಾವಿಯಲ್ಲಿ ಇತ್ತೀಚೆಗೆ ನಡೆದ ಭರತೇಶ್ನ ಅಣ್ಣ ಶಿವರಾಜ್ನನ್ನು ಅನೀಶ್ ಹಾಗೂ ಸಹಚರರು ಕೊಲೆ ಮಾಡಿದ್ದರು. ಇದಕ್ಕೆ ಪ್ರತೀಕಾರವಾಗಿ ಅನೀಶ್ ಕಡೆಯವರನ್ನು ಕೊಲೆ ಮಾಡಿದ ಬಳಿಕ ಹೊರ ರಾಜ್ಯಕ್ಕೆ ಪರಾರಿಯಾಗಲು ಸಂಚು ರೂಪಿಸಿದ್ದು, ಅದಕ್ಕಾಗಿ ಹಣದ ಅವಶ್ಯಕತೆ ಇದ್ದುದರಿಂದ ಹೆದ್ದಾರಿ ದರೋಡೆ ನಡೆಸಲು ನಿಂತಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಆರೋಪಿ ಪ್ರದೀಪ್ ಮೇಲೆ ಮಂಗಳೂರು ನಗರ ಮತ್ತು ಹೊರ ಭಾಗದಲ್ಲಿ 14 ವಿವಿಧ ಪ್ರಕರಣಗಳಿವೆ. ಚರಣ್ ಶೇಟ್ ಮೇಲೆ 4 ಪ್ರಕರಣಗಳಿವೆ. ಬೆಳಗ್ಗಿನ ಜಾವ 3.30ಕ್ಕೆ ಲಭಿಸಿದ ಖಚಿತ ಮಾಹಿತಿ ಮೇರೆಗೆ 4.10ಕ್ಕೆ ಪಿಎಸ್ಐ ಉಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದಾಗ ಐದು ಮಂದಿ ಆರೋಪಿಗಳು ದ್ವಿಚಕ್ರ ವಾಹನದೊಂದಿಗೆ ಯಾವುದೋ ದುಷ್ಕೃತ್ಯ ನಡೆಸಲು ನಿಂತಿರುವುದು ಗಮನಕ್ಕೆ ಬಂದಿತ್ತು.
ಪೊಲೀಸರನ್ನು ಕಂಡಾಗ ಆರೋಪಿಗಳು ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ