ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ: ಮೇಯರ್
Team Udayavani, Feb 19, 2018, 4:04 PM IST
ಮಹಾನಗರ: ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮೇಯರ್ ಕವಿತಾ ಸನಿಲ್ ಹೇಳಿದರು.
ನಗರದ ಕೆ.ಎಸ್. ರಾವ್ ರಸ್ತೆಯ ಮಿಸ್ಚಿಫ್ ಮಾಲ್ನಲ್ಲಿ ನೂತನವಾಗಿ ಪ್ರಾರಂಭಗೊಂಡಿರುವ ರೂಪ್ ರಂಗ್ ಬ್ಯೂಟಿಕ್ ಆ್ಯಂಡ್ ಟೈಲರಿಂಗ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನೂತನವಾಗಿ ಆರಂಭಗೊಂಡ ಸಂಸ್ಥೆಯು ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಉತ್ತಮ ಸೇವೆಯನ್ನು ನೀಡಲಿ ಎಂದು ಹಾರೈಸಿದರು.
ಯಾವುದೇ ಸಂಸ್ಥೆಯನ್ನು ಪ್ರಾರಂಭಿಸುವುದು ಸುಲಭದ ಕೆಲಸ. ಇದಾದ ಬಳಿಕ ಗ್ರಾಹಕಸ್ನೇಹಿಯಾಗಿಸುವುದು ಕಷ್ಟದ ಕೆಲಸ. ಬಟ್ಟೆ ಅಂಗಡಿಗಳಲ್ಲಿ ಹೆಚ್ಚಾಗಿ ಗ್ರಾಹಕ ಖರೀದಿಯ ಅನಂತರ ಸಮಸ್ಯೆಗಳು ಎದು ರಾಗುತ್ತವೆ. ಈ ಸಮಯದಲ್ಲಿ ಸಮಸ್ಯೆ ಪರಿಹರಿಸುವಲ್ಲಿ ಗಮನಕೊಡಬೇಕು ಎಂದು ತಿಳಿಸಿದರು. ಕಾರ್ಪೊರೇಟರ್ ಪೂರ್ಣಿಮಾ ಮಾತನಾಡಿ, ರೂಪ್ರಂಗ್ ಬ್ಯೂಟಿಕ್ ಆ್ಯಂಡ್ ಟೈಲರಿಂಗ್ ಸಂಸ್ಥೆಯು ಮಂಗಳೂರಿನ ಹೃದಯ ಭಾಗದಲ್ಲಿದೆ. ಮುಂದಿನ ದಿನಗಳಲ್ಲಿ ಯಶಸ್ಸು ಕಾಣಲಿ ಎಂದರು.
ರೂಪ್ರಂಗ್ ಬ್ಯೂಟಿಕ್ ಆ್ಯಂಡ್ ಟೈಲರಿಂಗ್ ಸಂಸ್ಥೆಯ ರಾಧಿಕಾ ವಿ. ಪ್ರಭು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಟೈಲರಿಂಗ್ ಮತ್ತು ಮಹಿಳಾ ಉಡುಪುಗಳ ಕಲೆಕ್ಷನ್ ಗಳು ಇವೆ. ಗ್ರಾಹಕರಿಗೆ ಅವರ ಇಚ್ಛೆಯಂತೆ ಡಿಸೈನ್ ಮತ್ತು ಎಂಬ್ರಾಯಡ್ ಕಸೂತಿ ಮಾಡಿ ಕೊಡಲಾಗುವುದು ಎಂದರು. ರೂಪಾ ಅಶೋಕ್, ನೃತ್ಯಗಾರ್ತಿ ಅದ್ವಿಕಾ ಶೆಟ್ಟಿ, ನಟಿ ಶಿಫಾಲಿ ನಾೖಕ್, ವಿ.ಜೆ. ಸ್ಟೀಲರ್ ದೇವಿಪ್ರಸಾದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ