ವಿದ್ಯಾರ್ಥಿಗಳ ಕುಂಚದಲ್ಲಿ ಅರಳಿ ನಿಂತ ಕಲೆ
Team Udayavani, Mar 1, 2018, 5:14 PM IST
ಸುರತ್ಕಲ್ : ಶುಭ್ರ ಆಕಾಶ, ಅಲ್ಲಿ ಹಾರಾಡುತ್ತಿರುವ ಪಕ್ಷಿಗಳು, ಕೆಳ ಭಾಗದಲ್ಲಿ ಸಸಿಗಳನ್ನು ಪೋಷಿಸುತ್ತಿರುವ ಮಕ್ಕಳು, ಸುತ್ತಲೂ ಕಸ ಕಡ್ಡಿಗಳನ್ನು ಗುಡಿಸಿ ಸ್ವಚ್ಛತೆ ಕಾಪಾಡುವ ಜನರು. ಇದು ನೈಜ ಚಿತ್ರಣ ಅಲ್ಲ ಬದಲಾಗಿ ಸ್ವಚ್ಛತೆ, ಪರಿಸರದ ಕುರಿತು ವಿದ್ಯಾರ್ಥಿಗಳ ಕುಂಚದಲ್ಲಿ ಅರಳಿ ನಿಂತ ಕಲೆ.
ಸುರತ್ಕಲ್ ಫ್ಲೈ ಓವರ್ ತಳ ಭಾಗದ ಕೊನೆಯ ಸ್ಲ್ಯಾಬ್ ಗಳನ್ನು ಸ್ವಚ್ಛಗೊಳಿಸಿ, ವಿದ್ಯಾರ್ಥಿಗಳು ಸುಂದರ ಚಿತ್ರ ಬಿಡಿಸಿ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಸುಂದರೀಕರಣದಲ್ಲಿ ಭಾಗಿಯಾದ ಮಕ್ಕಳು ತೈಲವರ್ಣದ ಚಿತ್ರ ಬಿಡಿಸಿದರೆ ಕಲಾ ಶಿಕ್ಷಕರಾದ ಸುಹಾನ್ ನಾನಿಲ್, ಲಾವಣ್ಯ ಅವರು ಮಾರ್ಗದರ್ಶನ ನೀಡಿದರು.
ಸುರತ್ಕಲ್ ಸ್ಲ್ಯಾಬ್ ಉದ್ದಕ್ಕೂ ಇಂತಹ ಬಣ್ಣ ಬಣ್ಣದ ಚಿತ್ರಗಳು ನೋಡುಗರನ್ನು ಆಕರ್ಷಿಸುತ್ತಿದೆ. ಪ್ರತೀ ವರ್ಣ ಚಿತ್ರಗಳು ಸ್ವಚ್ಛತೆ, ಪಾರಂಪರಿಕ ಆಚರಣೆ, ಕಲೆಗಳನ್ನು ಬಿಂಬಿಸುತ್ತಿವೆ.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಚಿತ್ರ ಬಿಡಿಸುವಲ್ಲಿ ಸಂಭ್ರಮಿಸಿದ ಮಕ್ಕಳು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರಲ್ಲದೆ, ಅವರು ಕಲಿಯುತ್ತಿರುವ ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವರ್ಗದಿಂದ ಪ್ರೋತ್ಸಾಹವೂ ಲಭಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ