ಕುವೈಟ್‌ – ಮಂಗಳೂರು ಏರಿಂಡಿಯಾ ಎಕ್ಸ್‌ಪ್ರೆಸ್‌ ವೇಳಾಪಟ್ಟಿ ಬದಲು


Team Udayavani, Mar 5, 2018, 3:25 PM IST

Air-india.jpg

ಮಂಗಳೂರು: ವಾರಕ್ಕೆ ಮೂರು ಬಾರಿ ಕುವೈಟ್‌- ಮಂಗಳೂರು ನಡುವೆ ಹಾರಾಟ ನಡೆಸುತ್ತಿರುವ ಏರ್‌ ಇಂಡಿಯಾ
ಎಕ್ಸ್‌ಪ್ರೆಸ್‌ ವಿಮಾನದ ವೇಳಾಪಟ್ಟಿ ಬದಲಾವಣೆಯಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಸದ್ಯದ ವೇಳಾಪಟ್ಟಿಯನ್ನು ತತ್‌ಕ್ಷಣವೇ ಮಾರ್ಪಾಟುಗೊಳಿಸುವಂತೆ ಕೋರಿ ಪ್ರಯಾಣಿಕರು ಸ್ಥಳೀಯ ಸಂಸದರಿಗೆ ಮನವಿ ಮಾಡಿದ್ದಾರೆ.

ಈ ಮಾರ್ಗದಲ್ಲಿ ವಿಮಾನ ಸೇವೆ ಪ್ರಾರಂಭಿಸಿದ್ದ ದಿನಗಳಲ್ಲಿ ಪ್ರತಿದಿನ ಮಂಗಳೂರಿನಿಂದ ರಾತ್ರಿ 8.45ಕ್ಕೆ ಹೊರಟು ರಾತ್ರಿ 11.15ಕ್ಕೆ ಕುವೈಟ್‌ಗೆ ಹಾಗೂ ಅದೇ ದಿನ ತಡರಾತ್ರಿ 12.30ಕ್ಕೆ ಕುವೈಟ್‌ನಿಂದ ವಾಪಸ್‌ ಹೊರಟು ಬೆಳಗ್ಗೆ 7.30ಕ್ಕೆ ಮಂಗಳೂರಿಗೆ ತಲುಪುತ್ತಿತ್ತು. ಈ ವೇಳಾಪಟ್ಟಿ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿತ್ತು. ಆದರೆ ನಾಲ್ಕು ತಿಂಗಳ ಹಿಂದೆಯಷ್ಟೇ ಏರ್‌ ಇಂಡಿಯಾ ಸಂಸ್ಥೆಯು ಏಕಾಏಕಿ ಈ ವಿಮಾನದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದ್ದು, ಬೆಳಗ್ಗೆ 7ಕ್ಕೆ ಮಂಗಳೂರಿನಿಂದ ಹೊರಟು ಬೆಳಗ್ಗೆ 11.15ಕ್ಕೆ ಕುವೈಟ್‌ಗೆ ಹಾಗೂ ಮಧ್ಯಾಹ್ನ 12.15ಕ್ಕೆ ಕುವೈಟ್‌ನಿಂದ ಹೊರಟು ರಾತ್ರಿ 7.15ಕ್ಕೆ ಮಂಗಳೂರಿಗೆ ತಲುಪುವಂತೆ ಮಾಡಲಾಗಿದೆ.

ಈ ಪರಿವರ್ತಿತ ವೇಳಾಪಟ್ಟಿಯಿಂದಾಗಿ ಮುಂಜಾನೆ ಬೇಗನೆ ವಿಮಾನವು ಮಂಗಳೂರಿನಿಂದ ಕುವೈಟ್‌ಗೆ ನಿರ್ಗಮಿಸುವ ಕಾರಣ ಕಾಸರಗೋಡು, ಕಣ್ಣೂರು, ಕುಂದಾಪುರ, ಭಟ್ಕಳ ಮುಂತಾದ ದೂರದ ಊರುಗಳಿಂದ ಬರುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಮಧ್ಯರಾತ್ರಿಯೇ ಹೊರಟು ಬಂದು ವಿಮಾನ ನಿಲ್ದಾಣದಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಕೇವಲ ನಾಲ್ಕು ತಾಸುಗಳ ಪ್ರಯಾಣಕ್ಕೆ ರಾತ್ರಿಯೆಲ್ಲ ಪರದಾಡುವ ಸ್ಥಿತಿ ಇದೆ. ಈ ಕಾರಣಕ್ಕೆ ವೇಳಾಪಟ್ಟಿಯನ್ನು ಬದಲಿಸುವಂತೆ ಕೋರಿ ಕುವೈಟ್‌ನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು ಅವರಿಗೆ ಮನವಿ ನೀಡಲಾಗಿದೆ. ಸಂಸದರ ಭರವಸೆಯಂತೆ ಶೀಘ್ರದಲ್ಲೇ ವೇಳಾಪಟ್ಟಿಯನ್ನು ಪ್ರಯಾಣಿಕರಿಗೆ ಅನುಕೂಲಕರವಾಗಿ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿ ಪ್ರಯಾಣಿಕರು ಇದ್ದರು.

ಆದರೆ ಆದದ್ದೇ ಬೇರೆ. ಮನವಿ ಕೊಟ್ಟ ಕೆಲವು ದಿನಗಳ ಬಳಿಕ ಮತ್ತೆ ಏರ್‌ ಇಂಡಿಯಾವು ಮಂಗಳೂರು-ಕುವೈಟ್‌ ವಿಮಾನದ ವೇಳಾಪಟ್ಟಿಯನ್ನು ಬದಲಾಯಿಸಿದೆ. ಆದರೆ ಈ ಹೊಸ ವೇಳಾಪಟ್ಟಿ ಈ ಹಿಂದಿನ ಅನನುಕೂಲಕಾರಿ ವೇಳಾಪಟ್ಟಿಗಿಂತಲೂ ಬಹಳ ಅಧ್ವಾನದ್ದಾಗಿದ್ದು, ಪ್ರಯಾಣಿಕರನ್ನು ಹೈರಾಣಾಗಿಸಿದೆ. ಮಂಗಳೂರು-ಕುವೈಟ್‌ ನಡುವೆ ಸಂಚರಿಸುವ ಪ್ರಯಾಣಿಕರ ಪರಿಸ್ಥಿತಿ ಈಗ ಬೆಂಕಿಯಿಂದ ಬಾಣಲೆಗೆ ಬಿದ್ದಂತೆ ಆಗಿದೆ. ನೂತನ ವೇಳಾಪಟ್ಟಿಯಂತೆ ವಿಮಾನವು ಮಾ. 25ರಿಂದ ಬೆಳಗ್ಗೆ 6.30ಕ್ಕೆ ಮಂಗಳೂರಿನಿಂದ ಹೊರಟು 10.45ಕ್ಕೆ ಕುವೈಟ್‌ ತಲುಪುತ್ತದೆ. ಅಲ್ಲಿಂದ ಬೆಳಗ್ಗೆ 11.45ಕ್ಕೆ ಹೊರಟು ಸಂಜೆ 6.30ಕ್ಕೆ ಮಂಗಳೂರು ತಲುಪುತ್ತದೆ. ಈ ಸಮಯ ಪಟ್ಟಿಯಿಂದ ಪ್ರಯಾಣಿಕರ ಇಡೀ ದಿನ ಪ್ರಯಾಣಕ್ಕೆ ವ್ಯರ್ಥವಾಗಲಿದೆ. ಹೀಗಾಗಿ ವಿಮಾನದ ವೇಳಾಪಟ್ಟಿಯನ್ನು ಆರಂಭದಲ್ಲಿ ಇದ್ದಂತೆಯೇ ಬದಲಾಯಿಸಬೇಕು ಎಂಬುದು ಪ್ರಯಾಣಿಕರ ಮನವಿ.

ಪ್ರಯಾಣಿಕರ ಪರದಾಟ
ವಿಮಾನ ನಿಲ್ದಾಣದ ನಿಯಮದಂತೆ ವಿಮಾನ ಪ್ರಯಾಣಕ್ಕಿಂತ ಮೂರು ತಾಸು ಮೊದಲು ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದು, ವಿವಿಧ ತಪಾಸಣೆಗೆ ಒಳಪಡಬೇಕಾಗುತ್ತದೆ. ಪ್ರಸ್ತುತ ವಿಮಾನ ಹೊರಡುವ ಸಮಯ ಬೆಳಗ್ಗೆ 6.30ಕ್ಕೆ ಆಗಿರುವ ಕಾರಣ ಕುವೈಟ್‌ಗೆ ಪ್ರಯಾಣಿಸುವ ಪ್ರಯಾಣಿಕರು ಮೂರು ತಾಸು ಮುಂಚಿತವಾಗಿ ಅಂದರೆ ರಾತ್ರಿ 2.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಬೇಕಾಗುತ್ತದೆ. ಈ ಅನನುಕೂಲಕರ ವೇಳಾಪಟ್ಟಿಯಿಂದಾಗಿ ಹೆಚ್ಚು ತೊಂದರೆ ಅನುಭವಿಸುತ್ತಿರುವವರು ಕಾಸರಗೋಡು, ಕುಂದಾಪುರದಂಥ ದೂರ ಪ್ರದೇಶದಿಂದ ಬರುವ ಪ್ರಯಾಣಿಕರು. ಕುವೈಟ್‌ನಿಂದ ಮಂಗಳೂರಿಗೆ ಬರುವ ವಿಮಾನ ಹಾಲಿ ವೇಳಾಪಟ್ಟಿಯಂತೆ ಸಂಜೆ 6.30ಕ್ಕೆ ಮಂಗಳೂರು ತಲುಪುತ್ತದೆ. ಇದರಿಂದಲೂ ಪ್ರಯಾಣಿಕರಿಗೆ ಅನನುಕೂಲವಾಗುತ್ತಿದೆ.

ಏರ್‌ ಇಂಡಿಯಾ ಮಾತ್ರವಲ್ಲ, ಎಲ್ಲ ವಿಮಾನ ಗಳೂ ಬೇಸಗೆಯಲ್ಲಿ ವೇಳಾಪಟ್ಟಿಯನ್ನು ಬದಲಾಯಿಸುತ್ತವೆ. ಆದರೆ ಏರ್‌ ಇಂಡಿಯಾವು ಕುವೈಟ್‌ ಹಾಗೂ ಅಬುಧಾಬಿ ಪ್ರಯಾಣದ ವೇಳಾಪಟ್ಟಿಯನ್ನು ಮಾತ್ರ ಬದಲಾಯಿಸಿದೆ. ನೂತನ ವೇಳಾಪಟ್ಟಿ ಮಾ. 25ರಿಂದ ಜಾರಿಗೆ ಬರಲಿದೆ ಎಂದು ಏರ್‌ ಇಂಡಿಯಾ ಸಂಸ್ಥೆಯ ಅಧಿಕಾರಿ ತಿಳಿಸಿದ್ದಾರೆ.

10 ದಿನದೊಳಗೆ ಮನವಿ
ಈ ಸಮಸ್ಯೆಯ ಬಗ್ಗೆ ಮನವರಿಕೆಯಾಗಿದೆ. ಹತ್ತು ದಿನಗಳ ಒಳಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿ ಮಾಡಿ ಮನವಿ ನೀಡಲಿದ್ದೇನೆ. ಶೀಘ್ರವೇ ಈ ಸಮಸ್ಯೆಗೆ ಪರಿಹಾರ ಸಿಗಲಿದೆ.
– ನಳಿನ್‌ ಕುಮಾರ್‌ ಕಟೀಲು, ಸಂಸದ

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.