ಸುರಕ್ಷಾ ಯಾತ್ರೆ ಜನರ ದಾರಿ ತಪ್ಪಿಸುವ ತಂತ್ರ: ಸಚಿವ ರೈ


Team Udayavani, Mar 6, 2018, 1:40 PM IST

rai.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷ ಹುಟ್ಟುಹಾಕಿ ಹಿಂಸೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಬಿಜೆಪಿಯ ಜನ ಸುರಕ್ಷಾ ಯಾತ್ರೆ ಜನರನ್ನು ದಾರಿತಪ್ಪಿಸುವ ತಂತ್ರ ಎಂದು ಸಚಿವ ಬಿ.ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದ್ದಾರೆ.

ಜಿಲ್ಲೆಯಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸಗಳನ್ನು ಮಾಡಿದವರು, ನೈತಿಕ ಪೊಲೀಸ್‌ ಗಿರಿ ಹೆಸರಿನಲ್ಲಿ ಶಾಂತಿ ಕದಡುತ್ತಿರುವವರು, ನಿಯೋಜಿತ ಕೊಲೆಗಳನ್ನು ನಡೆಸಿದವರು ಮತ್ತು ಅದನ್ನು ಸಮರ್ಥನೆ ಮಾಡಿಕೊಂಡು ಬಂದವರು ಯಾರು ಎಂಬುದು ಜನರಿಗೆ ತಿಳಿದಿದೆ. ಹಿಂಸೆಗೆ ಪ್ರಚೋದನೆ ನೀಡುತ್ತಾ ಬಂದಿರುವ ಬಿಜೆಪಿಗೆ ಜನಸುರಕ್ಷಾ ಮಾಡುವ ಅರ್ಹತೆ ಇಲ್ಲ ಎಂದರು.

ಜೈಲಿನಲ್ಲೇ ಇದ್ದುಕೊಂಡು ಕೊಲೆ ಸಂಚು ನಡೆಸಲಾಗುತ್ತಿದೆ. ಯಾರಧ್ದೋ ಪ್ರತೀಕಾರಕ್ಕಾಗಿ ಅಮಾಯಕರನ್ನು ಕೊಲೆ ಮಾಡುವ ಕೃತ್ಯ ಮಾಡಲಾಗಿದೆ ಮತ್ತು ಇದನ್ನು ಬಹಿರಂಗ ವೇದಿಕೆಗಳಲ್ಲಿ ಸಮರ್ಥನೆ ಮಾಡಲಾಗುತ್ತಿದೆ ಎಂದ ಅವರು, ಇದೀಗ ಬಿಜೆಪಿ ಕೈಗೊಂಡಿರುವ ಜನ ಸುರಕ್ಷಾ ಯಾತ್ರೆ ಕರಾವಳಿಯಲ್ಲಿ ಶಾಂತಿ, ಸಾಮರಸ್ಯವನ್ನು ಕದಡಲು ನಡೆಸುತ್ತಿರುವ ಹುನ್ನಾರವಾಗಿದೆ. ಯಾತ್ರೆ ಸಂದರ್ಭದಲ್ಲಿ ಸುಳ್ಯದಲ್ಲಿ ಪ್ರಚೋದನಕಾರಿ ಟ್ಯಾಬ್ಲೊ ಪ್ರದರ್ಶಿಸ ಲಾಗಿದೆ. ಸಂಸದ ಪ್ರತಾಪಸಿಂಹ ಹಾಗೂ ಸಚಿವ ಅನಂತ ಕುಮಾರ್‌ ಹೆಗಡೆ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ ಎಂದರು. ಜಿಲ್ಲೆಯಲ್ಲಿ ಶಾಂತಿಯ ವಾತಾವರಣವಿದ್ದು, ಯಾರೂ ಪ್ರಚೋದನೆಗೆ ಒಳಗಾಗದೆ ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಮಾಡಿದರೆ ಕುದುರೆ ವ್ಯಾಪಾರ; ಬಿಜೆಪಿ ಮಾಡಿದರೆ ಚಾಣಕ್ಯತನ!
ಈಶಾನ್ಯ ರಾಜ್ಯಗಳ ಚುನಾ ವಣಾ ಫಲಿತಾಂಶದ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ತ್ರಿಪುರ, ನಾಗಲ್ಯಾಂಡ್‌ನ‌ಲ್ಲಿ ಈ ಮೊದಲು ಕೂಡ ಕಾಂಗ್ರೆಸ್‌ ಅಧಿಕಾರದಲ್ಲಿರಲಿಲ್ಲ. ಮೇಘಾಲಯದಲ್ಲಿ ಎರಡು ಸ್ಥಾನ ಗಳನ್ನು ಗೆದ್ದಿರುವ ಬಿಜೆಪಿಯು ಸರಕಾರ ರಚಿಸಲು ಹೊರ ಟಿದೆ. ಒಂದು ವೇಳೆ ಇದನ್ನು ಕಾಂಗ್ರೆಸ್‌ನವರು ಮಾಡಿ ದ್ದರೆ ಕುದುರೆ ವ್ಯಾಪಾರ, ಪ್ರಜಾ ಪ್ರಭುತ್ವದ ಕಗ್ಗೊಲೆ ಎಂದು ಆರೋ ಪಿಸ ಲಾ ಗುತ್ತಿತ್ತು. ಈಗ ಬಿಜೆಪಿ ಯವರು ಮಾಡುತ್ತಿರುವುದನ್ನು ಅಮಿತ್‌ಶಾ ಚಾಣಕ್ಯತನ, ತಂತ್ರಗಾರಿಕೆ ಎಂದು ಹೇಳುತ್ತಾರೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.