ಸಂದರ್ಶನ:ಅಪ್ಪಯ್ಯಮಣಿಯಾಣಿ ಸುಳ್ಯವಿಧಾನಸಭಾ ಕ್ಷೇತ್ರ ಬಿಜೆಪಿಉಸ್ತುವಾರಿ


Team Udayavani, Mar 17, 2018, 12:15 PM IST

17-March-7.jpg

ಚುನಾವಣೆ ತಯಾರಿ ಯಾವ ರೀತಿ ಸಾಗಿದೆ?
ಸಂಘಟನಾತ್ಮಕ ನೆಲೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಕಾರ್ಯ ನಡೆಯುತ್ತಿದೆ. ಬೂತ್‌ ಮಟ್ಟದಲ್ಲಿ ಸಶಕ್ತೀಕರಣ ಹಮ್ಮಿಕೊಂಡಿದ್ದೇವೆ. ಬೂತ್‌ ವ್ಯಾಪ್ತಿಯಲ್ಲಿ 12 ಜನರ ತಂಡ ರಚಿಸಿ ಸಕ್ರಿಯವಾಗುವುದು, ಮತದಾರರ ಪಟ್ಟಿಗೆ ಸೇರ್ಪಡೆ ಇತ್ಯಾದಿ ರೀತಿಯಲ್ಲಿ ಸಂಘಟನ ಕಾರ್ಯ ಪ್ರಗತಿಯಲ್ಲಿದೆ. ಕ್ಷೇತ್ರದ ಸಮಿತಿ, ಶಕ್ತಿ ಕೇಂದ್ರ, ಅನಂತರ ಐದೈದು ಕೇಂದ್ರಗಳಿಗೆ ಶಕ್ತಿ ಕೇಂದ್ರ ರಚಿಸಿ ಸಂಘಟನಾತ್ಮಕ ನೆಲೆಗಟ್ಟಿನಲ್ಲಿ ಪಕ್ಷವನ್ನು ತಯಾರುಗೊಳಿಸಲಾಗುತ್ತಿದೆ.

ಯಾವ ಅಂಶಗಳನ್ನು ಮತದಾರರ ಮುಂದೆ ಇಡಲಿದ್ದೀರಿ?
ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರಕಾರ ತಳೆದಿರುವ ಹಿಂದೂ ವಿರೋಧಿ ಧೋರಣೆ ಪ್ರಮುಖ ಅಸ್ತ್ರವಾಗಲಿದೆ. ಕಾಂಗ್ರೆಸ್‌ನ ಧರ್ಮ ಒಡೆಯುವ ತಂತ್ರಗಾರಿಕೆ, ಮಠ ಮಂದಿರಗಳನ್ನು ವಶಕ್ಕೆ ತೆಗೆದುಕೊಳ್ಳುವ ಯತ್ನ, ವ್ಯಾಪಕ ಭ್ರಷ್ಟಾಚಾರಗಳನ್ನು ಜನರ ಮುಂದಿಡಲಿದ್ದೇವೆ. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ದೇಶ, ರಾಜ್ಯದ ವ್ಯವಸ್ಥೆಗೆ ತೊಡಕಾಗುವ ಸಂಗತಿಗಳನ್ನು ಜನರ ಮುಂದಿರಿಸಿಸಲಾಗುವುದು.

ಅಭಿವೃದ್ಧಿ ವಿಷಯದ ಬಗ್ಗೆ ಪ್ರಸ್ತಾವ ಇಲ್ಲವೇ?
ಖಂಡಿತ ಇದೆ. ಮೋದಿ ಸರಕಾರದ ಜನಪರ ಯೋಜನೆಗಳು, ಈ ಹಿಂದೆ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದೆ ಇಡಲಾಗುವುದು. ಭ್ರಷ್ಟಾಚಾರ ರಹಿತ ಮತ್ತು ಜನಪರ ಆಡಳಿತವನ್ನು ನೀಡುವ ಬಗ್ಗೆ ಜನರ ಮುಂದಿಡಲಾಗುವುದು.

ಸುಳ್ಯದಲ್ಲಿ ಈ ಬಾರಿ ಯಾರು ಬಿಜೆಪಿ ಅಭ್ಯರ್ಥಿ?
ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಚುನಾವಣಾ ಉಸ್ತುವಾರಿಗಳ ಮಟ್ಟದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿಲ್ಲ. ಎಪ್ರಿಲ್‌ ಮೊದಲ ವಾರದ ಅನಂತರ ಅದಕ್ಕೆ ಸಂಬಂಧಿಸಿದ ಸಮಿತಿಯಿಂದ ಪ್ರಕ್ರಿಯೆ ಆರಂಭವಾಗ ಬಹುದು. ಅರ್ಹ ಅಭ್ಯರ್ಥಿ ಯಾರೆಂಬ ಬಗ್ಗೆ ಸರ್ವೆ ನಡೆಸಿ, ಸೂಕ್ತ ವ್ಯಕ್ತಿಗೆ ಟಿಕೇಟ್‌ ನೀಡಲಾಗುತ್ತದೆ. ಈ ಬಗ್ಗೆ ನಮಗೆ ಇನ್ನೂ ಮಾಹಿತಿ ಬಂದಿಲ್ಲ.

ಸುಳ್ಯದಲ್ಲಿ ಪಕ್ಷದ ಜವಾಬ್ದಾರಿ ಇದು ಪ್ರಥಮವೇ?
ಹೌದು. ಆದರೆ ಈ ಹಿಂದೆ ಬಂಟ್ವಾಳ ಕ್ಷೇತ್ರದಲ್ಲಿ ಎರಡು ಬಾರಿ ಚುನಾವಣಾ ಪ್ರಭಾರಿಯಾಗಿ ಕೆಲಸ ಮಾಡಿದ ಅನುಭವ ಇದೆ. ಬೇರೆಬೇರೆ ಸಂದರ್ಭಗಳಲ್ಲಿ ಸುಳ್ಯದಲ್ಲಿ ಪಕ್ಷದ ಬೆಳವಣಿಗೆಯ ಬಗ್ಗೆ ಗಮನಿಸುವ ಅವಕಾಶ ಸಿಕ್ಕಿತ್ತು. ಈಗ ಉಸ್ತುವಾರಿಯಾಗಿ ಕ್ಷೇತ್ರ, ಶಕ್ತಿ ಕೇಂದ್ರದ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಶಕ್ತಿ ಕೇಂದ್ರದಲ್ಲಿ ಒಂದು ಸುತ್ತಿನ ಪ್ರಚಾರ ಸಭೆ ಮುಗಿಸಿದ್ದೇನೆ.

„ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.