‘ಜಲಮೂಲಗಳ ನಿರ್ವಹಣೆ ಮಾಡದಿದ್ದಲ್ಲಿ ಅಪಾಯ’


Team Udayavani, Mar 22, 2018, 2:20 PM IST

22-March-11.jpg

ಸುರತ್ಕಲ್‌ : ಮುಂಜಾಗ್ರತಾ ಕ್ರಮವನ್ನು ತತ್‌ಕ್ಷಣದಿಂದಲೇ ಆರಂಭಿಸದಿದ್ದಲ್ಲಿ ಸರಸ್ವತಿ ನದಿಯಂತೆ ಗಂಗಾ ನದಿಯೂ ಮಾಯವಾಗುವುದರಲ್ಲಿ ಸಂಶಯವಿಲ್ಲ ಎಂದು ಮಂಗಳೂರು ಮಹಿಳಾ ಕಾಲೇಜಿನ ವಾಣಿಜ್ಯ ವಿಭಾಗದ ಪ್ರೊ| ಜಗದೀಶ್‌ ಬಾಳ ಹೇಳಿದರು. ಸುರತ್ಕಲ್‌ ಗೋವಿಂದ ದಾಸ ಕಾಲೇಜಿನ ಸ್ನಾತಕೋತ್ತರ ವಿಭಾಗ ವಿಶ್ವ ಜಲ ದಿನದ ಪ್ರಯುಕ್ತ ಆಯೋಜಿಸಿದ್ದ ಜಲ ಸಂರಕ್ಷಣೆ ಹಾಗೂ ಪೂರಕ ಕ್ರಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜನರ ಸಹಭಾಗಿತ್ವ ಅಗತ್ಯ
ಗಂಗೆಯ ಶುದ್ಧೀಕರಣಕ್ಕೆ ಕೋಟ್ಯಂತರ ವೆಚ್ಚ ಮಾಡಲಾಗುತ್ತಿದೆ. ಆದರೆ ಜನರ ಸಹಭಾಗಿತ್ವ ದೊರಕದೇ ಹೋದಲ್ಲಿ ಕಾರ್ಯಕ್ರಮ ವಿಫಲವಾಗುತ್ತದೆ. ಜಿಲ್ಲೆಯ ನೇತ್ರಾವತಿ ನದಿಯ ಮೂಲಕ್ಕೆ ಅಣೆಕಟ್ಟು ಕಟ್ಟಲಾಗುತ್ತದೆ. ಇದರಿಂದ ಕೆಳಭಾಗದಲ್ಲಿ ಇರುವ ಅಂತರ್ಜಲ ಉಳಿಸುವ ಬಾವಿ, ಕೆರೆಗಳ ನೀರಿನ ಸಂಗ್ರಹಕ್ಕೆ ಧಕ್ಕೆಯಾಗುತ್ತದೆ. ನೇತ್ರಾವತಿ ಸಮುದ್ರಕ್ಕೆ ಸರಾಗವಾಗಿ ಹರಿಯಲು ಅಡೆ ತಡೆಗಳು ಉಂಟಾದಲ್ಲಿ ಉಪ್ಪು ನೀರು ತುಂಬೆ ಕಿಂಡಿ ಅಣೆಕಟ್ಟು ವರೆಗೂ ಬರಲು ಸಾಧ್ಯತೆಯಿದೆ ಎಂದರು.

ನದಿ ನೀರಿನ ಸಮಸ್ಯೆಯಲ್ಲೂ ರಾಜಕೀಯ
ನಮ್ಮ ದೇಶದಲ್ಲಿ ನದಿ ನೀರಿನ ಸಮಸ್ಯೆ ರಾಜಕೀಯ ವಿಚಾರವಾಗಿರುವುದು ದುರದೃಷ್ಟಕರ. ಹೀಗಾಗಿ ಈ ಹೋರಾಟ, ರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಇಂದಿಗೂ ಬಗೆ ಹರಿದಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

ಅಂತರ್ಜಲ ವೃದ್ಧಿಗೆ ಪಣತೊಡಿ
ಭಾರತ ಇದೀಗ ನೀರಿನ ಸಂಗ್ರಹದಲ್ಲಿ ಅಪಾಯದ ಸ್ಥಿತಿಯನ್ನು ಹೊಂದಿದೆ ಎಂದು ಸಂಶೋಧನ ವರದಿಗಳು ಹೇಳುತ್ತಿವೆಯಾದುದರಿಂದ ಶುದ್ಧ ಕುಡಿಯುವ ನೀರಿನ ಸಂಗ್ರಹ ಕೇಂದ್ರಗಳಾದ ಬಾವಿ, ಕೆರೆ, ಬೃಹತ್‌ ನದಿಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ, ಇದಕ್ಕೆ ಜನರ ಸಹಭಾಗಿತ್ವ ಮುಖ್ಯ. ನಮ್ಮ ನಮ್ಮ ಮನೆಯ ಹಾಗೂ ಸುತ್ತಮುತ್ತ ಸಮುದ್ರಕ್ಕೆ ಹರಿಯುವ ಮಳೆ ನೀರನ್ನು ತಡೆದು ಅಂತರ್ಜಲ ಸೇರಲು ನಾವೆಲ್ಲ ಕಟಿ ಬದ್ಧರಾಗಿ ಕೆಲಸ ಮಡಬೇಕಿದೆ ಎಂದರು.

ಪ್ರಾಂಶುಪಾಲ ಡಾ| ಮುರಳೀಧರ ರಾವ್‌, ಪ್ರೊ| ರಮೇಶ್‌ ಕುಳಾಯಿ, ಡಾ| ಸುರೇಶ್‌ ರಮಣ್‌ ಮಯ್ಯ, ಪ್ರೊ| ಕೃಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.