ಸರಣಿ ರಜೆ: ದೇವಸ್ಥಾನಗಳಲ್ಲಿ ಭಕ್ತ ಜನಸಾಗರ
Team Udayavani, Mar 31, 2018, 9:50 AM IST
ಉಡುಪಿ/ಮಂಗಳೂರು: ನಾಡಿನ ವಿವಿಧ ದೇವಸ್ಥಾನಗಳಿಗೆ ಭೇಟಿ ಕೊಡುವ ಭಕ್ತರ ಸಂಖ್ಯೆ ಜಾಸ್ತಿಯಾಗಿದೆ. ಗುರುವಾರದಿಂದ ಮೊದಲ್ಗೊಂಡು ನಾಲ್ಕು ದಿನ ಸತತ ರಜೆಗಳು ಇರುವುದರಿಂದ ಮತ್ತು ಪಿಯುಸಿ ಪರೀಕ್ಷೆ ಮುಗಿದಿರುವುದರಿಂದ ಮಕ್ಕಳೊಂದಿಗೆ ಪೋಷಕರು ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗಳಿಂದ ಕೊಲ್ಲೂರು, ಉಡುಪಿ, ಧರ್ಮಸ್ಥಳ, ಸುಬ್ರಹ್ಮಣ್ಯ, ಕಟೀಲು ಮೊದಲಾದದೇವಸ್ಥಾನಗಳಿಗೆ ಆಗಮಿಸಿದ್ದರು. ಎಲ್ಲ ಕಡೆ ದೇವರ ದರ್ಶನ ವ್ಯವಸ್ಥೆ ಮಾಡಲು ಆಡಳಿತದವರು, ಸಿಬಂದಿ, ಭದ್ರತಾ ಸಿಬಂದಿ ಪ್ರಯತ್ನ ಪಡಬೇಕಾಯಿತು. ಕೊಲ್ಲೂರಿನಲ್ಲಿ ಮುಂಜಾನೆ ಆರಂಭಗೊಂಡ ಸರತಿ ಸಾಲು ಆರ್.ಎನ್. ಶೆಟ್ಟಿ ಅತಿಥಿಗೃಹದವರೆಗೆ, ಉಡುಪಿಯಲ್ಲಿ ಗೀತಾ ಮಂದಿರದವರೆಗೆ ಸರತಿ ಸಾಲು ಬೆಳೆದಿತ್ತು.
ವಸತಿಗೃಹ ಭರ್ತಿ: ಕೊಲ್ಲೂರು ದೇಗುಲ ಅಧೀನದಲ್ಲಿರುವ ವಸತಿಗೃಹ ಸಹಿತ ಎಲ್ಲ ವಸತಿಗೃಹಗಳು ಭರ್ತಿಯಾಗಿದ್ದು, ಅನ್ಯ ರಾಜ್ಯಗಳಿಂದ ಆಗಮಿಸಿದ ಭಕ್ತರು ಕುಂದಾಪುರ ಪರಿಸರದ ವಸತಿಗೃಹಗಳಿಗೆ ತೆರಳಬೇಕಾದ ಪರಿಸ್ಥಿತಿ ಕಂಡುಬಂತು. ಕೆಲವೊಂದು ವಸತಿಗೃಹಗಳಲ್ಲಿ ದುಬಾರಿ ಬಾಡಿಗೆ ವಸೂಲಿ ಮಾಡುತ್ತಿರುವ ಬಗ್ಗೆ ಅನೇಕ ಭಕ್ತರು ಆರೋಪಿಸಿದ್ದಾರೆ. ಉಡುಪಿ ಮೊದಲಾದೆಡೆಯೂ ಅತಿಥಿಗೃಹಗಳು ತುಂಬಿ ಹೋಗಿವೆ. ಹಟ್ಟಿಯಂಗಡಿ, ಆನೆಗುಡ್ಡೆ, ಮಂದಾರ್ತಿ ಮೊದಲಾದ ದೇವಸ್ಥಾನಗಳಲ್ಲೂ ಭಕ್ತರ ಸಂಖ್ಯೆ ಹೆಚ್ಚಿಗೆ ಕಂಡುಬಂತು.
— ಚಿತ್ರ: ರಮೇಶ್ ಕೊಲ್ಲೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ