ನಗರಕ್ಕೆ ಬೇಕು ಸುಸಜ್ಜಿತ ಸೆಂಟ್ರಲ್ ಮಾರುಕಟ್ಟೆ
Team Udayavani, Apr 1, 2018, 3:34 PM IST
ನಗರದ ಪ್ರಮುಖ ವ್ಯವಹಾರ ಕೇಂದ್ರಗಳ ಪೈಕಿ ಹಂಪನಕಟ್ಟೆ ಬಳಿ ಇರುವ ಸೆಂಟ್ರಲ್ ಮಾರ್ಕೆಟ್ ಕೂಡ ಒಂದಾಗಿದೆ. ನಿತ್ಯವೂ ಇಲ್ಲಿ ತರಕಾರಿ, ಹಣ್ಣು ಮತ್ತಿತರ ದೈನಂದಿನ ಬಳಕೆಯ ವಸ್ತುಗಳ ಖರೀದಿಗಾಗಿ ಜನ ಜಂಗುಳಿಯೇ ಉಂಟಾ ಗುತ್ತದೆ. ಹೇಳಲು ಇದು ಸೆಂಟ್ರಲ್ ಮಾರ್ಕೆಟ್ ಆದರೂ, ಇಲ್ಲೊಂದು ಸುಸಜ್ಜಿತ ಮಾರುಕಟ್ಟೆಯ ವ್ಯವಸ್ಥೆ ಇಲ್ಲದೆ, ವ್ಯಾಪಾರಸ್ಥರು ಬೀದಿಯಲ್ಲೇ ತಮ್ಮ ವಸ್ತುಗಳನ್ನು ಮಾರಾಟ ಮಾಡಬೇಕಾಗಿದೆ.
ಕಳೆದ ಹಲವು ವರ್ಷಗಳಿಂದ ಸೆಂಟ್ರಲ್ ಮಾರುಕಟ್ಟೆ ಅಭಿವೃದ್ಧಿಯ ಆಶ್ವಾಸನೆ ಕೇಳಿ ಬರುತ್ತಿದೆಯಾದರೂ, ಮಾರುಕಟ್ಟೆ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ. ಮಾರುಕಟ್ಟೆ ಅಭಿವೃದ್ಧಿಯ ಬಗ್ಗೆ ಈಗಾಗಲೇ ಹೊಸ ವಿನ್ಯಾಸವನ್ನು ತಯಾರಿಸಲಾಗಿದ್ದರೂ ಯೋಜನೆ ಅನುಷ್ಠಾನದಲ್ಲಿ ಪ್ರಗತಿಯಾಗಿಲ್ಲ.
ಈಗಾಗಲೇ ಈ ಮಾರುಕಟ್ಟೆ ಅಭಿವೃದ್ಧಿ ಸಂಬಂಧ ನೂರಾರು ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಹಣ ಮೀಸಲಿಟ್ಟರೂ ಅಭಿವೃದ್ಧಿ ಮಾತ್ರ ನಡೆದಿಲ್ಲ. ಜನರ ದೈನಂದಿನ ವ್ಯವಹಾರದ ಮುಖ್ಯ ತಾಣವಾದ ಸೆಂಟ್ರಲ್ ಮಾರುಕಟ್ಟೆ ಅಭಿವೃದ್ಧಿಯಾಗಿ ಇಲ್ಲೊಂದು ಸುಸಜ್ಜಿತ ಮಾರುಕಟ್ಟೆ ನಿರ್ಮಾಣವಾದರೆ, ಬಹುಶಃ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ಉತ್ತಮ. ಶ್ರೀಮಂತರು- ಬಡವರು ಎನ್ನದೆ ಎಲ್ಲ ವರ್ಗದ ಜನರೂ ಈ ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸುವುದರಿಂದ ಮಾರುಕಟ್ಟೆ ಅಭಿವೃದ್ಧಿ ಅತೀ ಅಗತ್ಯವಾಗಿದೆ.
ಧನ್ಯಾ ಬಾಳೆಕಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ