ಉತ್ತಮ ಜೀವನಶೈಲಿ, ಆಹಾರ ಕ್ರಮದಿಂದ ಆರೋಗ್ಯ ರಕ್ಷಣೆ


Team Udayavani, Apr 7, 2018, 12:07 PM IST

7-April-9.jpg

ಇಂದು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಹಲವು ಬದಲಾವಣೆಗಳು ಕಂಡರೂ ಮನುಷ್ಯರ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಹದಗೆಡುತ್ತಲೇ ಹೋಗುತ್ತಿದೆ. ಹೊಸ ಹೊಸ ಕಾಯಿಲೆಗಳು ಹುಟ್ಟಿಕೊಳ್ಳುವುದರೊಂದಿಗೆ ಜೀವ ಹಿಂಡುವ ಕಾಯಿಲೆಗಳು ಅತಿಯಾಗುತ್ತಿವೆ. ಇವುಗಳಿಂದ ದೂರವಿರಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದೊಂದೇ ದಾರಿ ಎನ್ನಬಹುದು.

‘ಆರೋಗ್ಯ ಮತ್ತು ಯುವ ಸಮೂಹ’
ಉತ್ತಮ ಆರೋಗ್ಯ ಪ್ರತಿಯೊಬ್ಬರಿಗೂ ಅಗತ್ಯ. ಆದರೆ ಅದನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯೂ ಅವರದ್ದೇ. ಆರೋಗ್ಯ ಕಾಪಾಡುವುದೆಂದರೆ ಕೇವಲ ದೇಹಕ್ಕಂಟಿದ ರೋಗ ಶಮನವಷ್ಟೇ ಎಂದರ್ಥವಲ್ಲ. ಶಾರೀರಿಕ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ. ‘ಆರೋಗ್ಯ ಮತ್ತು ಯುವ ಸಮೂಹ’ ನಮ್ಮ ಥೀಂ.

ಆಧುನಿಕತೆ, ಜೀವನಶೈಲಿ, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿರುವುದರ ಪರಿಣಾಮ ಆರೋಗ್ಯ ಕೆಡುವುದರೊಂದಿಗೆ ಸಾಮಾಜಿಕ ಸ್ವಾಸ್ಥ್ಯವೂ ಹದಗೆಡುತ್ತಿರುವುದು ಕಳವಳಕಾರಿ.

ವಿಶ್ವ ಆರೋಗ್ಯ ದಿನ ಯಾಕಾಗಿ?
ಆರೋಗ್ಯದ ಬಗ್ಗೆ ಜಾಗೃತಿ ದಿನವಾಗಿ ‘ವಿಶ್ವ ಆರೋಗ್ಯ ದಿನ’ವನ್ನು ಆಚರಿಸಲಾಗುತ್ತಿದೆ. ವಿಶ್ವಸಂಸ್ಥೆಯ ಅಂಗ ಸಂಸ್ಥೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಈ ಜಾಗೃತಿ ದಿನವನ್ನು ಎ.7ರಂದು ಆಚರಿಸಲು ಶುರು ಮಾಡಿತು. ಇದೀಗ ವಿಶ್ವಾದ್ಯಂತ ಈ ದಿನವನ್ನು ಆಚರಿಸಲಾಗುತ್ತಿದೆ.

ಎ. 7ರಂದೇ ಏಕೆ?
1945ರಲ್ಲಿ ವಿಶ್ವಸಂಸ್ಥೆಯ ಸಭೆ ನಡೆದಿದ್ದು, ಈ ವೇಳೆ ವಿಶ್ವ ಆರೋಗ್ಯ ಕುರಿತ ಸಮಿತಿಯೊಂದನ್ನು ಸ್ಥಾಪಿಸುವ ಬಗ್ಗೆ ಚರ್ಚಿಸಲಾಯಿತು. ಇದು ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಹುಟ್ಟಿಗೆ ಕಾರಣವೂ ಆಯಿತು. ಅದರಂತೆ, 1948 ಎ.7ರಂದು ಜಾಗತಿಕ ಆರೋಗ್ಯ ಸಮ್ಮೇಳನ ಮತ್ತು ಸಂಸ್ಥೆಯ ಸ್ಥಾಪನೆ ನಡೆದಿತ್ತು. ಅಂದು ಕೈಗೊಂಡ ನಿರ್ಣಯದಂತೆ ಪ್ರತಿ ವರ್ಷ ಎ.7ರಂದು ಆರೋಗ್ಯ ಜಾಗೃತಿ ದಿನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, 1950ರಿಂದ ಅಧಿಕೃತವಾಗಿ ಜಾರಿಗೆ ಬಂತು. ಈ ವರ್ಷ 68ನೇ ಜಾಗೃತಿ ದಿನ ಹಮ್ಮಿಕೊಳ್ಳಲಾಗುತ್ತಿದೆ. 

ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಅಗತ್ಯ 
.ಇಂದು ಪ್ರಪಂಚದಲ್ಲಿ ಅರ್ಧದಷ್ಟು ಮಂದಿಗೆ ಅಗತ್ಯ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

 .ವಿಶ್ವದಲ್ಲಿ ಇಂದು ಸುಮಾರು 10 ಕೋಟಿಯಷ್ಟು ಮಂದಿ ಕಡುಬಡತನದಲ್ಲಿ ಜೀವಿಸುತ್ತಿದ್ದು, ಅವರ ದಿನದ ಆದಾಯ 110 ರೂ. ಗಳಿಗೂ ಕಡಿಮೆ ಇದೆ. ಇದರಿಂದಾಗಿ ಅವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

 .ವಿಶ್ವದಲ್ಲಿ ಶೇ.12ರಷ್ಟು ಮಂದಿ ತಮ್ಮ ಆದಾಯದ ಬಹುತೇಕ ಭಾಗವನ್ನು ಕುಟುಂಬದವರ ವೈದ್ಯಕೀಯ ಖರ್ಚುವೆಚ್ಚಕ್ಕಾಗಿಯೇ ವಿನಿಯೋಗಿಸುತ್ತಿದ್ದಾರೆ. ಇದರಿಂದಾಗಿ ಆಪತ್ಕಾಲದಲ್ಲಿ ಅವರಿಗೆ ಹೆಚ್ಚಿನ ವೈದ್ಯಕೀಯ ವೆಚ್ಚ ಸಾಧ್ಯವಾಗುತ್ತಿಲ್ಲ.

 .ಆಪತ್ಕಾಲದಲ್ಲಿ ಹೆಚ್ಚಿನ ವೈದ್ಯಕೀಯ ವೆಚ್ಚ ಮಾಡಲಾಗದ ಸಮಸ್ಯೆ ಎಲ್ಲೆಡೆ ಇದೆ. ಆದರೆ ಮುಂದುವರಿದ ದೇಶಗಳಲ್ಲಿ ವಿಶೇಷವಾಗಿ ಯುರೋಪ್‌, ಲ್ಯಾಟಿನ್‌ ಅಮೆರಿಕಾ, ಏಷ್ಯಾದ ಕೆಲ ಭಾಗಗಳಲ್ಲಿ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳ ಲಭ್ಯತೆ ಇದ್ದು, ಅಲ್ಲಿನ ಮಂದಿ ಶೇ. 10ರಷ್ಟು ತಮ್ಮ ಆದಾಯದ ಭಾಗವನ್ನು ಖರ್ಚು ಮಾಡದೇ, ಉತ್ತಮ ಆರೋಗ್ಯ ಸೇವೆಯನ್ನು ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.