ವಿವಿಧೆಡೆ ಆಲಿಕಲ್ಲು  ಮಳೆ; ಹಾನಿ


Team Udayavani, Apr 9, 2018, 8:21 AM IST

alikallu.jpg

ವೇಣೂರು: ರವಿವಾರ ಸಂಜೆ ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆ ಸುರಿದಿದೆ. ವೇಣೂರು ಪರಿಸರದಲ್ಲಿ ಅಡಿಕೆ ಗಾತ್ರದ ಆಲಿಕಲ್ಲುಗಳು ಭಾರೀ ಪ್ರಮಾಣದಲ್ಲಿ ಬಿದ್ದು ಜನರು ಗಾಬರಿಗೊಂಡರು.

ರವಿವಾರ ಸಂಜೆ 3.30ರ ಸುಮಾರಿಗೆ  ವೇಣೂರು, ಹೊಸಂಗಡಿ, ಕುಕ್ಕೇಡಿ ಭಾಗದಲ್ಲಿ ಗುಡುಗು ಮಿಂಚಿನ ಮಳೆಯ ಜತೆಗೆ ಆಲಿಕಲ್ಲು ಬೀಳಲು ಪ್ರಾರಂಭವಾಯಿತು. ದೊಡ್ಡ ಗಾತ್ರದ ಆಲಿಕಲ್ಲು ಗಳು ಭಾರೀ ಪ್ರಮಾಣದಲ್ಲಿ ಬಿದ್ದದ್ದರಿಂದ ಜನರು ದಿಗಿಲುಗೊಂಡರು. ದ್ವಿಚಕ್ರ ಸವಾರರು ಮಾತ್ರವಲ್ಲದೆ ಘನ ವಾಹನಗಳಿಗೂ ಸಂಚರಿಸಲು ಸಾಧ್ಯವಾಗದೆ ರಸ್ತೆ ಬದಿ ನಿಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ಮನೆ, ಕಟ್ಟಡಗಳ ಛಾವಣಿ ಮೇಲೆ ಆಲಿ ಕಲ್ಲುಗಳು ಬಿದ್ದು ಭಾರೀ ಸದ್ದು ಉಂಟಾಗಿ ಜನರು ಗಾಬರಿಗೀಡಾದರು. ವೇಣೂರು ಪರಿಸರದ ಮರಗಳಲ್ಲಿದ್ದ ಮಾವಿನ ಮಿಡಿ ಉದುರಿವೆ. ಗೇರು, ಬಾಳೆ ಕೃಷಿಗೂ ಹಾನಿಯಾಗಿದೆ.

ಪುತ್ತೂರು ತಾಲೂಕಿನ ಕೆದಿಲ, ಕಬಕ, ವಡ್ಯ, ಉಪ್ಪಿ ನಂಗಡಿ, ಬೆಳ್ತಂಗಡಿ ತಾಲೂಕಿನ ನಿಡ್ಲೆ, ಕಾವಳ ಮುಡೂರು, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ಐನೆಕಿದು ಗಳಲ್ಲಿಯೂ ಆಲಿಕಲ್ಲು ಸಹಿತ ಮಳೆಯಾಗಿದೆ. 

ಮರ ಬಿದ್ದು ಮನೆಗೆ ಹಾನಿ, ಗಾಯ
ಮಳೆ ಜತೆಗೆ ಬೀಸಿದ ಭಾರೀ ಗಾಳಿಯಿಂದ ಗುಂಡೂರಿ ರಾಮಪ್ಪ ಆಚಾರಿ ಅವರ ಮನೆ ಮೇಲೆ ಮರ ಬಿದ್ದು, ಅವರ ಸಹೋದರ ಸುಂದರ ಆಚಾರಿ ಗಾಯಗೊಂಡಿದ್ದಾರೆ. ಅವರನ್ನು ಸಿದ್ದಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಸುಮಾರು ಸಿಮೆಂಟ್ ಶೀಟ್ಗಳು ಪುಡಿಯಾಗಿದ್ದು, ಅಂಗಳದಲ್ಲಿ ನಿಲ್ಲಿಸಲಾಗಿದ್ದ 2 ಬೈಕ್ಗಳಿಗೂ ಹಾನಿಯಾಗಿದೆ. 

ಇಷ್ಟು ದೊಡ್ಡ ಆಲಿಕಲ್ಲು ಕಂಡಿಲ್ಲ
ವೇಣೂರಿನ ಹಿರಿಯ ವೈದ್ಯ 87ರ ಹರೆಯದ ಡಾ| ಬಿ.ಪಿ. ಇಂದ್ರ ಹೇಳುವಂತೆ ಅವರು ಯುವಕರಾಗಿದ್ದ ವೇಳೆ ಆಲಿಕಲ್ಲು ಮಳೆ ಬಿದ್ದಿದೆ. ಆದರೆ ಅದು ಹೆಕ್ಕುವಷ್ಟರಲ್ಲಿ ನೀರಾಗುತ್ತಿತ್ತು. ಇಷ್ಟೊಂದು ದೊಡ್ಡ ಗಾತ್ರದ ಆಲಿಕಲ್ಲುಗಳು ಭಾರೀ ಪ್ರಮಾಣದಲ್ಲಿ ಬಿದ್ದಿರುವುದನ್ನು ಕಂಡಿಲ್ಲ. ಮಾವು, ಅಡಿಕೆ, ಗೇರು, ಬಾಳೆ ಸಹಿತ ಕೃಷಿಗೆ ಆಲಿಕಲ್ಲು ಮಳೆ ಒಳ್ಳೆಯದಲ್ಲ. ಆದರೆ ಬಿರುಬೇಸಗೆಯಲ್ಲಿ ಸುರಿದ ಮಳೆ ಜೀವರಾಶಿಗೆ ಈ ಮಳೆ ತಂಪು ಒದಗಿಸಿದೆ ಎಂದಿದ್ದಾರೆ. 

ವೇಣೂರಿನ ಕೃಷ್ಣ ಭಟ್ ಅವರು ಮಾಹಿತಿ ನೀಡಿ, ಸುಮಾರು 100 ಚದರ ಅಡಿ ವಿಸ್ತೀರ್ಣದಲ್ಲಿ ಎರಡ ರಿಂದ ಮೂರು ಬಕೆಟುಗಳಷ್ಟು ಆಲಿಕಲ್ಲು ಬಿದ್ದಿವೆ ಎಂದಿದ್ದಾರೆ. ಬಾಳೆ ಎಲೆಗಳು ಚಿಂದಿಯಾಗಿವೆ, ಇತರ ಮರಗಳೂ ಹಾನಿಗೊಂಡಿವೆ ಎಂದು ವಿವರಿಸಿದ್ದಾರೆ.  
 

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.