ಕ್ಯಾಂಪ್ಕೋ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ದೂರು
Team Udayavani, Apr 11, 2018, 8:28 AM IST
ಮಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಇದ್ದರೂ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ
ಅವರು ಅಡಿಕೆ ಕ್ಯಾನ್ಸರ್ಕಾರಕ ಅಲ್ಲ ಎಂಬ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವುದು ನೀತಿ ಸಂಹಿತೆ ಉಲ್ಲಂಘನೆ. ಹೀಗಾಗಿ ಅವರ ವಿರುದ್ಧ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದೆ.
ಕ್ಯಾಂಪ್ಕೋ ಅಧ್ಯಕ್ಷರು ಸೋಮವಾರ ಖಾಸಗಿ ಹೊಟೇಲ್ನಲ್ಲಿ ಪತ್ರಿಕಾಗೋಷ್ಠಿ ಕರೆದು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ನೇತೃತ್ವದ ನಿಯೋಗ ವರದಿ ನೀಡಿದೆ ಎಂದು ಹೇಳಿದ್ದಾರೆ. ಸಂಸದ ಓಂಪ್ರಸಾದ್ ಯಾದವ್ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸರಕಾರ ಅಡಿಕೆ ಕ್ಯಾನ್ಸರ್ಕಾರಕ ಎಂದು ಉತ್ತರಿಸಿತ್ತು. ಈ ಕುರಿತು ಚುನಾವಣಾ ಘೋಷಣೆಯ ಮೊದಲು ಕಾಂಗ್ರೆಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿತ್ತು. ಆದರೆ ಈಗ ಅಡಿಕೆ ಬೆಳೆಗಾರರು ಕಾಂಗ್ರೆಸ್ಗೆ ಮತ ನೀಡುತ್ತಾರೆ ಎಂಬ ಆತಂಕ ದಿಂದ ಬಿಜೆಪಿಯ ಕುಮ್ಮಕ್ಕಿನಂತೆ ಕ್ಯಾಂಪ್ಕೋ ಅಧ್ಯಕ್ಷರು ವರದಿ ಸಲ್ಲಿಕೆಯ ವಿಚಾರ ತಿಳಿಸಿದ್ದಾರೆ.
ಕ್ಯಾಂಪ್ಕೋ ಅಧ್ಯಕ್ಷರು ಹಾಗೂ ಅದರ ಬಹುತೇಕ ಸದಸ್ಯರು ಬಿಜೆಪಿಯ ಬೆಂಬಲಿಗರಾಗಿದ್ದಾರೆ. ಹೀಗಾಗಿ ಅಧ್ಯಕ್ಷರ ವಿರುದ್ಧ ಕ್ರಮ ಜರಗಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಸಿ. ವಿನಯರಾಜ್ ನೇತೃತ್ವದ ಕಾಂಗ್ರೆಸ್ ನಿಯೋಗ ದೂರಿನಲ್ಲಿ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ