ಕೋಸ್ಟಲ್‌ ಸಿನೆಮಾದಲ್ಲಿ ಏರಾ ಉಲ್ಲೆರ್‌ ! 


Team Udayavani, Apr 26, 2018, 11:53 AM IST

26-April-7.jpg

ತುಳು ರಂಗಭೂಮಿ ಹಾಗೂ ಸಿನೆಮಾ ಅಂದಾಗ ಪಕ್ಕನೆ ಕೇಳಿ ಬರುವ ಹೆಸರು ದೇವದಾಸ್‌ ಕಾಪಿಕಾಡ್‌. ತುಳು ಸಾಂಸ್ಕೃತಿಕ ಲೋಕದ ಬೆಳವಣಿಗೆಯಲ್ಲಿ ಕಾಪಿಕಾಡ್‌ ಶ್ರಮ ಅಷ್ಟರ ಮಟ್ಟಿಗೆ ಉಲ್ಲೇಖನೀಯ. ತೆಲಿಕೆದ ಬೊಳ್ಳಿ, ಚಂಡಿ ಕೋರಿ, ಅರೆಮರ್ಲೆರ್‌ ಸಹಿತ ತುಳು ಸಿನೆಮಾ ಲೋಕದಲ್ಲಿ ಕಾಪಿಕಾಡ್‌ ಅವರದ್ದು ನಿರಂತರ ಕೊಡುಗೆ. ಅದೇ ಮೂಡ್‌ನ‌ಲ್ಲಿ ಈಗ ಸದ್ದಿಲ್ಲದೆ ಸಿನೆಮಾ ಮಾಡುವುದಕ್ಕೆ ಕಾಪಿಕಾಡ್‌ ಮುಂದಾಗಿದ್ದಾರೆ.

ಈಗಾಗಲೇ ಚಿತ್ರದ ಹೆಸರನ್ನು ಪ್ರಕಟಿಸಿರುವ ಕಾಪಿಕಾಡ್‌, ಶೂಟಿಂಗ್‌ ಸಹಿತ ಇತರ ಮಾಹಿತಿಗಳನ್ನು ಸಸ್ಪೆನ್ಸ್‌ ಆಗಿ ಇಡಲು ವಿಶೇಷ ಕಾಳಜಿ ವಹಿಸಿದ್ದಾರೆ. ಹೀಗಾಗಿಯೇ ಚಿತ್ರದ ಮುಹೂರ್ತ ನಡೆದು ನಾಲ್ಕೈದು ದಿನದ ಶೂಟಿಂಗ್‌ ನಡೆದಿದ್ದರೂ, ಕಾಪಿಕಾಡ್‌ ಅವರು ತಾವು ಮಾಡುತ್ತಿರುವ ಸಿನೆಮಾದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ. ಸಿನೆಮಾ ಶೂಟಿಂಗ್‌ ಎಲ್ಲ ಮುಗಿದ ಅನಂತರವೇ ಸಿನೆಮಾದ ಬಗ್ಗೆ ಪ್ರಚಾರ ಮಾಡುವ ಎಂಬ ಯೋಚನೆಯಲ್ಲಿ ಅವರಿದ್ದಾರೆ.

ಸಿನೆಮಾದ ಹೆಸರು ‘ಏರಾ ಉಲ್ಲೆರ್‌’. ಹೆಸರೇ ಸೂಚಿಸುವಂತೆ ಇಲ್ಲೊಂದು ಸಸ್ಪೆನ್ಸ್‌ನ ಸೂಚನೆ ಪಕ್ಕಾ ಆದಂತಾಗುತ್ತದೆ. ಹೀಗಾಗಿ ಈ ಸಿನೆಮಾ ಸಸ್ಪೆನ್ಸ್‌ ಎನ್ನುವುದು ದೃಢವಾಗುತ್ತದೆ. ತುಳುವಿನಲ್ಲಿ ಇಂತಹ ಪ್ರಯತ್ನ ಅಪರೂಪ. ಯಾಕೆಂದರೆ ಕಾಮಿಡಿ ಗಿಮಿಕ್‌ನಲ್ಲಿಯೇ ಸಿನೆಮಾ ಓಡುವುದು ಎಂದು ಈಗಾಗಲೇ ಫಿಕ್ಸ್‌ ಆಗಿರುವ ಕೋಸ್ಟಲ್‌ವುಡ್‌ನ‌ಲ್ಲಿ ಕಾಮಿಡಿ ಜತೆಗೆ ಇನ್ನೂ ಏನಾದರೂ ಬೇಕು ಎಂಬ ಕಳಕಳಿಗೆ ಕಾಪಿಕಾಡ್‌ ಸ್ಪಂದಿಸಿದ್ದಾರೆ. ಇದೇ ಕಾರಣಕ್ಕಾಗಿ ಸಸ್ಪೆನ್ಸ್‌ ಚಿತ್ರ ಮಾಡಲು ಮನಸ್ಸು ಮಾಡಿದ್ದಾರೆ.

ಗುಟ್ಟು ಬಿಡದೆ, ಮಂಗಳೂರಿನಲ್ಲಿ ಶೂಟಿಂಗ್‌ ಕಾಣುತ್ತಿರುವ ‘ಏರಾ ಉಲ್ಲೆರ್‌’ನಲ್ಲಿ ಅರ್ಜುನ್‌ ಕಾಪಿಕಾಡ್‌ ಮುಖ್ಯ ಭೂಮಿಕೆಯಲ್ಲಿದ್ದಾರೆ. ಈಗಾಗಲೇ ‘ಕರ್ಣೆ’ ಶೂಟಿಂಗ್‌ ಮುಗಿಸಿ ಬಂದಿರುವ ಅರ್ಜುನ್‌ ‘ಏರಾ ಉಲ್ಲೆರ್‌’ನಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ನಾಯಕಿಯಾಗಿ ರಶ್ಮಿತಾ ಚಂಗಪ್ಪ ಕಾಣಿಸಲಿದ್ದಾರೆ. ಉಳಿದಂತೆ ಯಾರಿದ್ದಾರೆ ಎಂಬುದು ಸದ್ಯದ ಕುತೂಹಲ. ಅಂದಹಾಗೆ, ತುಳುವಿನ ಕಾಮಿಡಿ ಸ್ಟಾರ್‌ ಗಳು ಇದರಲ್ಲೂ ಇದ್ದಾರೆ ಹಾಗೂ ಹೊಸ ಮುಖಗಳಿಗೆ ವಿಶೇಷ ಒತ್ತು ನೀಡಲಾಗಿದೆ ಎಂಬ ಮಾಹಿತಿ ಇದೆ.

ಈಗಾಗಲೇ ಕಾಪಿಕಾಡ್‌ ‘ಅರೆ ಮರ್ಲೆರ್‌’ ಮುಗಿಸಿದ ಅನಂತರ ‘ಪಿಸ್‌ಂಟೆ’ ಎಂಬ ಸಿನೆಮಾ ಮಾಡುವುದಿತ್ತು. ಜತೆಗೆ ಕನ್ನಡದಲ್ಲಿ ‘ಜಬರ್ದಸ್ತ್’ ಎಂಬ ಸಿನೆಮಾ ಮಾಡುವ ಬಗ್ಗೆಯೂ ಯೋಚಿಸಿದ್ದರು. ಆದರೆ, ಅದರ ಮಧ್ಯೆಯೇ ಈಗ ದಿಢೀರಾಗಿ ‘ಏರಾ ಉಲ್ಲೆರ್‌’ ಸಿನೆಮಾ ಮಾಡಲಾಗುತ್ತಿದೆ. ಬೊಳ್ಳಿ ಮೂವೀಸ್‌ ಲಾಂಛನದಲ್ಲಿ ಸಿನೆಮಾ ರೆಡಿಯಾಗುತ್ತಿದೆ. ಮುಂದಿನ 18 ದಿನದಲ್ಲಿ ಸಿನೆಮಾ ಶೂಟಿಂಗ್‌ ಪೂರ್ಣಗೊಳಿಸಲಿದೆ. ರಂಗಭೂಮಿ- ಸಿನೆಮಾದಲ್ಲಿ ಎವರ್‌ಗ್ರೀನ್‌ ಹಾಡುಗಳನ್ನು ನೀಡಿರುವ ಕಾಪಿಕಾಡ್‌ ಅವರೇ ಈ ಸಿನೆಮಾಕ್ಕೂ ಸಂಗೀತ ಒದಗಿಸಲಿದ್ದಾರೆ.

 ದಿನೇಶ್‌ ಇರಾ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.